HDK vs Siddaramaiah: Union Minister HD Kumaraswamy arrested?

HDK vs Siddaramaiah: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅರೆಸ್ಟ್? ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ ಸಿದ್ದರಾಮಯ್ಯ‌!

HDK vs Siddaramaiah: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅರೆಸ್ಟ್? ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ ಸಿದ್ದರಾಮಯ್ಯ‌!

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (HDK vs Siddaramaiah) ಖಾರವಾಗಿ ಪ್ರಶ್ನಿಸಿದರು.

ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನಗನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಸ್ಪಷ್ಟವಾಗಿ ನುಡಿದರು.

Join Our Telegram: https://t.me/dcgkannada

ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.

ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್ ಎಂದರು. (HDK vs Siddaramaiah)

ಅಭಿವೃದ್ಧಿ ಕೆಲಸದಲ್ಲಿ ರಾಜಕೀಯವಿಲ್ಲ:

ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾ, ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡದೇ , ಜಿಲ್ಲೆಯ ಜನರ ಹಾಗೂ ಇಲ್ಲಿನ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ. ಕೊಪ್ಪಳ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿಯಿದ್ದು, ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದರು.

ಬೆಂಬಲ ಬೆಲೆ ಕುರಿತಂತೆ ಕೇಂದ್ರಕ್ಕೆ ಪತ್ರ:

ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ, ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.

ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

Latest News

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ:  ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ.

SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’              ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು

ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಎರಡನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾಗಿದ್ದ ಸಾಮಾನ್ಯ ಮಹಿಳೆ ಸ್ಥಾನಕ್ಕೆ ಲಲಿತಾ ಮುತ್ತುಗೌಡ ಗೊರೆಬಾಳ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೊದಲನೇ ಅವಧಿಯ 15 ತಿಂಗಳ ಕಾಲ ಅಧ್ಯಕ್ಷರಾಗಿದ್ದ ವಿಜಯಲಕ್ಷಿö್ಮÃ ಇಲಕಲ್ ಅವರು ರಾಜೀನಾಮೆ ನೀಡಿದ್ದರು.ಒಟ್ಟು 14 ಸದಸ್ಯರ ಬಲ ಹೊಂದಿದ ಪ.ಪಂ.ನ ಮಹಿಳಾ ಮೀಸಲಾತಿಗೆ ನಾಲ್ವರು ಸದಸ್ಯರಿಗೆ ಅಧ್ಯಕ್ಷರಾಗುವ ಅರ್ಹತೆ ಇತ್ತು.ಆದರೆ ಶಾಸಕ ಸಿ.ಎಸ್.ನಾಡಗೌಡ , ಪ.ಪಂ ಮಾಜಿ

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮುದ್ದೇಬಿಹಾಳ : ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುದ್ದೇಬಿಹಾಳ ನಗರದಿಂದ ಹಿರೇಮುರಾಳ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಕಾರಿನ ಮೇಲೆ ಬ್ಯಾಗಿನಲ್ಲಿ ಇಟ್ಟಿದ್ದ 30 ಗ್ರಾಂ ಬಂಗಾರದ ಆಭರಣಗಳು ಜಾರಿ ಬಿದ್ದಿದ್ದು ಅದನ್ನು ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಮೂವರು ಯುವಕರು ಕಳೆದುಕೊಂಡಿದ್ದ ಮಹಿಳೆಗೆ ಮರಳಿ ಪ್ರಾಮಾಣಿಕತೆ ತೋರಿದ್ದಾರೆ. ಮುದ್ದೇಬಿಹಾಳದಿಂದ ಹಿರೇಮುರಾಳ ಕಡೆಗೆ ಮದುವೆ ಕಾರ್ಯಕ್ಕೆ ತೆರಳುತ್ತಿದ್ದ ಮಂಜುಳಾ ಅಶೋಕ ಅರ್ಮನ ಎಂಬುವರ ಚಿನ್ನಾಭರಣ ರಸ್ತೆಯಲ್ಲಿ ಬಿದ್ದಿವೆ. ಮುದ್ದೇಬಿಹಾಳದಿಂದ ನಾಲತವಾಡ ಕಡೆಗೆ ತೆರಳುತ್ತಿದ್ದ