HDK vs Siddaramaiah: Union Minister HD Kumaraswamy arrested?

HDK vs Siddaramaiah: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅರೆಸ್ಟ್? ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ ಸಿದ್ದರಾಮಯ್ಯ‌!

HDK vs Siddaramaiah: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅರೆಸ್ಟ್? ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ ಸಿದ್ದರಾಮಯ್ಯ‌!

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (HDK vs Siddaramaiah) ಖಾರವಾಗಿ ಪ್ರಶ್ನಿಸಿದರು.

ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನಗನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಸ್ಪಷ್ಟವಾಗಿ ನುಡಿದರು.

Join Our Telegram: https://t.me/dcgkannada

ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.

ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್ ಎಂದರು. (HDK vs Siddaramaiah)

ಅಭಿವೃದ್ಧಿ ಕೆಲಸದಲ್ಲಿ ರಾಜಕೀಯವಿಲ್ಲ:

ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾ, ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡದೇ , ಜಿಲ್ಲೆಯ ಜನರ ಹಾಗೂ ಇಲ್ಲಿನ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ. ಕೊಪ್ಪಳ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿಯಿದ್ದು, ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದರು.

ಬೆಂಬಲ ಬೆಲೆ ಕುರಿತಂತೆ ಕೇಂದ್ರಕ್ಕೆ ಪತ್ರ:

ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ, ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.

ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ