HDK vs Siddaramaiah: Union Minister HD Kumaraswamy arrested?

HDK vs Siddaramaiah: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅರೆಸ್ಟ್? ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ ಸಿದ್ದರಾಮಯ್ಯ‌!

HDK vs Siddaramaiah: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅರೆಸ್ಟ್? ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ ಸಿದ್ದರಾಮಯ್ಯ‌!

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (HDK vs Siddaramaiah) ಖಾರವಾಗಿ ಪ್ರಶ್ನಿಸಿದರು.

ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನಗನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಸ್ಪಷ್ಟವಾಗಿ ನುಡಿದರು.

Join Our Telegram: https://t.me/dcgkannada

ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.

ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್ ಎಂದರು. (HDK vs Siddaramaiah)

ಅಭಿವೃದ್ಧಿ ಕೆಲಸದಲ್ಲಿ ರಾಜಕೀಯವಿಲ್ಲ:

ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾ, ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡದೇ , ಜಿಲ್ಲೆಯ ಜನರ ಹಾಗೂ ಇಲ್ಲಿನ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ. ಕೊಪ್ಪಳ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿಯಿದ್ದು, ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದರು.

ಬೆಂಬಲ ಬೆಲೆ ಕುರಿತಂತೆ ಕೇಂದ್ರಕ್ಕೆ ಪತ್ರ:

ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ, ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.

ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

Latest News

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

ಮುದ್ದೇಬಿಹಾಳ : ಬರಗಾಲ ಬಿದ್ದಿದೆ.ಹೊಲದಲ್ಲಿ ಬಿತ್ತಿರುವ ಬೆಳೆಗಳು ಒಣಗಿ ಹೋಗುತ್ತಿವೆ.ದನ-ಕರುಗಳಿಗೆ ಕುಡಿಯಲು ನೀರಿಲ್ಲ. ಹೊಲಕ್ಕೆ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು ಜತನದಿಂದ ಕಾಪಾಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಮಹಿಳಾಪರ ಚಿಂತಕಿ ರಾಜೇಶ್ವರಿ ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 80 ನೇ ಸ್ವಾತಂತ್ರ್ಯೋ್ತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಕ್ಕಳಲ್ಲಿ ದೇಶಾಭಿಮಾನ,ದೇಶಪ್ರೇಮ ಭಾವನೆ ಮೂಡಿಸಲು ಶಿಕ್ಷಕರು ,ಪಾಲಕರು ಶ್ರಮಿಸಬೇಕು ಎಂದರು. ಶಾಲೆಯ ಅಧ್ಯಕ್ಷ ಬಸಮ್ಮ ಸಿದರಡ್ಡಿ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಪೊಲೀಸ  ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಎಎಸ್ಐ ಎಂ.ಪಿ.ಹೋಕಳೆ, ಪೊಲೀಸ ಸಿಬ್ಬಂದಿ ಬಸವರಾಜ ಸಜ್ಜನ ಹಾಗೂ ತಂಗಡಗಿ ಗ್ರಾಮದ ವಿಕಾಸ ಕಮಲಾಪೂರ ಹಾಗೂ ಬಂಡಿನಾಥ ಕಮಲಾಪೂರ ,ರವಿ ಹಾಲ್ಯಾಳ ಅವರನ್ನು ಸನ್ಮಾನಿಸಲಾಯಿತು. ಎಎಸ್ಐ ಎಂ.ಪಿ.ಹೋಕಳೆ ಧ್ವಜಾರೋಹಣ ಮಾಡಿದರು.ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ, ಮುಖಂಡರಾದ ರಾಜುಗೌಡ ಕೊಂಗಿ,ಸ್ನೇಹಸಿರಿ ಸೇವಾ ಸಂಘದ ಸಂಚಾಲಕ ಬಸವರಾಜ ನಿಡಗುಂದಿ ಸೇರಿದಂತೆ