HDK vs Siddaramaiah: Union Minister HD Kumaraswamy arrested?

HDK vs Siddaramaiah: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅರೆಸ್ಟ್? ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ ಸಿದ್ದರಾಮಯ್ಯ‌!

HDK vs Siddaramaiah: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅರೆಸ್ಟ್? ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ ಸಿದ್ದರಾಮಯ್ಯ‌!

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (HDK vs Siddaramaiah) ಖಾರವಾಗಿ ಪ್ರಶ್ನಿಸಿದರು.

ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನಗನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಸ್ಪಷ್ಟವಾಗಿ ನುಡಿದರು.

Join Our Telegram: https://t.me/dcgkannada

ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.

ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್ ಎಂದರು. (HDK vs Siddaramaiah)

ಅಭಿವೃದ್ಧಿ ಕೆಲಸದಲ್ಲಿ ರಾಜಕೀಯವಿಲ್ಲ:

ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾ, ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡದೇ , ಜಿಲ್ಲೆಯ ಜನರ ಹಾಗೂ ಇಲ್ಲಿನ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ. ಕೊಪ್ಪಳ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿಯಿದ್ದು, ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದರು.

ಬೆಂಬಲ ಬೆಲೆ ಕುರಿತಂತೆ ಕೇಂದ್ರಕ್ಕೆ ಪತ್ರ:

ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ, ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.

ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

Latest News

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ ಟಿಸಿ ಒದಗಿಸುವಲ್ಲಿ ವಿಳಂಬ ಧೋರಣೆ ಖಂಡಿಸಿದ ರೈತರು ಸೋಮವಾರ ಇಲ್ಲಿನ ಹೆಸ್ಕಾಂ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಅನೇಕ ಗ್ರಾಮಗಳಿಂದ ಬಂದಿದ್ದ ರೈತರು ತಮ್ಮೂರುಗಳಲ್ಲಿ ಎದುರಿಸುತ್ತಿರುವ ವಿದ್ಯುತ್ ಸಂಬoಧಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜೂ.8 ರಿಂದ ಆಲಮಟ್ಟಿ ಕೆಬಿಜೆಎನ್‌ಎಲ್ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ತಿಳಿಸಿದರು. ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ರೈತ