HDK vs Siddaramaiah: Union Minister HD Kumaraswamy arrested?

HDK vs Siddaramaiah: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅರೆಸ್ಟ್? ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ ಸಿದ್ದರಾಮಯ್ಯ‌!

HDK vs Siddaramaiah: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅರೆಸ್ಟ್? ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ ಸಿದ್ದರಾಮಯ್ಯ‌!

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (HDK vs Siddaramaiah) ಖಾರವಾಗಿ ಪ್ರಶ್ನಿಸಿದರು.

ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನಗನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಸ್ಪಷ್ಟವಾಗಿ ನುಡಿದರು.

Join Our Telegram: https://t.me/dcgkannada

ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.

ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್ ಎಂದರು. (HDK vs Siddaramaiah)

ಅಭಿವೃದ್ಧಿ ಕೆಲಸದಲ್ಲಿ ರಾಜಕೀಯವಿಲ್ಲ:

ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾ, ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡದೇ , ಜಿಲ್ಲೆಯ ಜನರ ಹಾಗೂ ಇಲ್ಲಿನ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ. ಕೊಪ್ಪಳ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿಯಿದ್ದು, ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದರು.

ಬೆಂಬಲ ಬೆಲೆ ಕುರಿತಂತೆ ಕೇಂದ್ರಕ್ಕೆ ಪತ್ರ:

ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ, ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.

ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ