ಊರಿನ ಹಿರಿಯರಿಂದ ಮತಯಾಚನೆ: ಶೃಂಗಾರಗೌಡ್ರ ಪೆನಲ್ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ

ಊರಿನ ಹಿರಿಯರಿಂದ ಮತಯಾಚನೆ: ಶೃಂಗಾರಗೌಡ್ರ ಪೆನಲ್ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸಿರುವ ದಿ.ಎಸ್.ಜಿ.ಪಾಟೀಲ್ ಶೃಂಗಾರಗೌಡ ಪೆನಲ್‌ದ ಅಭ್ಯರ್ಥಿಗಳು ಸೋಮವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರೋಡ್ ಶೋ ನಡೆಸಿ ಕೈ ಮುಗಿದು ಮತಯಾಚಿಸಿದರು.
ಪಟ್ಟಣದ ಬಜಾರ ಹನುಮಾನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರ
ಕಾರ್ಯ ಆರಂಭಿಸಿದ ಅಭ್ಯರ್ಥಿಗಳು ಬ್ಯಾಂಕಿನ ಏಳ್ಗೆಗೆ , ಗ್ರಾಹಕರ ಅಭಿವೃದ್ಧಿಗೆ ತಮ್ಮನ್ನು ಬೆಂಬಲಿಸುವAತೆ ಮನವಿ ಮಾಡಿಕೊಂಡರು.

ಹಾಲಿ ಅಧ್ಯಕ್ಷ ಸತೀಶ ಓಸ್ವಾಲ್, ನಿರ್ದೇಶಕ ರಾಜಶೇಖರ ಕರಡ್ಡಿ ಮಾತನಾಡಿ, ಊರಿನ ಹಿರಿಯರ ಸಲಹೆಯಂತೆ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರ ಊರಿನ ಗಣ್ಯರು ಮತಯಾಚನೆಗೆ ಆಗಮಿಸಿರುವುದು ನಮಗೆ ಬಲ ತಂದುಕೊಟ್ಟಿದೆ. ಪಾರದರ್ಶಕವಾಗಿ ವ್ಯವಹಾರ ನಡೆಸಿದ್ದರಿಂದಲೇ ಗ್ರಾಹಕರು ನಮ್ಮ ಮೇಲೆ ವಿಶ್ವಾಸ ಇರಿಸಿದ್ದು ಅದನ್ನು ಉಳಿಸಿಕೊಂಡು ಮುಂದೆ ಸಾಗುವುದಾಗಿ ಹೇಳಿದರು.

ಪಟ್ಟಣದ ಪ್ರಮುಖ ರಸ್ತೆ, ಸರಾಫ ಬಜಾರ, ಅಂಬೇಡ್ಕರ್ ಸರ್ಕಲ್, ಏಪಿಎಂಸಿಯಲ್ಲಿ ಅಭ್ಯರ್ಥಿಗಳು ಮತಯಾಚನೆ ಮಾಡಿದರು.ಪೆನಲ್‌ನ ಅಭ್ಯರ್ಥಿಗಳು, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಬಿ.ಪಿ.ಕುಲಕರ್ಣಿ, ಎಂ.ಬಿ.ನಾವದಗಿ, ಬಸವರಾಜ ನಂದಿಕೇಶ್ವರಮಠ, ಬಾಬು ಬಿರಾದಾರ, ವಕೀಲರಾದ ಎಂ.ಎಸ್.ನಾವದಗಿ,ಗುರುಸ್ವಾಮಿ ಬೂದಿಹಾಳಮಠ, ಚನ್ನಬಸ್ಸು ಗುಡ್ಡದ, ಎ.ಗಣೇಶ ನಾರಾಯಣಸ್ವಾಮಿ, ವಾಯ್.ಎಚ್.ವಿಜಯಕರ್, ಹುಲಗಪ್ಪ ನಾಯ್ಕಮಕ್ಕಳ,ಮಹಾಂತೇಶ ಬೂದಿಹಾಳಮಠ, ಶರಣು ಸಜ್ಜನ ಮೊದಲಾದವರು ಪಾಲ್ಗೊಂಡಿದ್ದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು