ಊರಿನ ಹಿರಿಯರಿಂದ ಮತಯಾಚನೆ: ಶೃಂಗಾರಗೌಡ್ರ ಪೆನಲ್ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ

ಊರಿನ ಹಿರಿಯರಿಂದ ಮತಯಾಚನೆ: ಶೃಂಗಾರಗೌಡ್ರ ಪೆನಲ್ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸಿರುವ ದಿ.ಎಸ್.ಜಿ.ಪಾಟೀಲ್ ಶೃಂಗಾರಗೌಡ ಪೆನಲ್‌ದ ಅಭ್ಯರ್ಥಿಗಳು ಸೋಮವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರೋಡ್ ಶೋ ನಡೆಸಿ ಕೈ ಮುಗಿದು ಮತಯಾಚಿಸಿದರು.
ಪಟ್ಟಣದ ಬಜಾರ ಹನುಮಾನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರ
ಕಾರ್ಯ ಆರಂಭಿಸಿದ ಅಭ್ಯರ್ಥಿಗಳು ಬ್ಯಾಂಕಿನ ಏಳ್ಗೆಗೆ , ಗ್ರಾಹಕರ ಅಭಿವೃದ್ಧಿಗೆ ತಮ್ಮನ್ನು ಬೆಂಬಲಿಸುವAತೆ ಮನವಿ ಮಾಡಿಕೊಂಡರು.

ಹಾಲಿ ಅಧ್ಯಕ್ಷ ಸತೀಶ ಓಸ್ವಾಲ್, ನಿರ್ದೇಶಕ ರಾಜಶೇಖರ ಕರಡ್ಡಿ ಮಾತನಾಡಿ, ಊರಿನ ಹಿರಿಯರ ಸಲಹೆಯಂತೆ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರ ಊರಿನ ಗಣ್ಯರು ಮತಯಾಚನೆಗೆ ಆಗಮಿಸಿರುವುದು ನಮಗೆ ಬಲ ತಂದುಕೊಟ್ಟಿದೆ. ಪಾರದರ್ಶಕವಾಗಿ ವ್ಯವಹಾರ ನಡೆಸಿದ್ದರಿಂದಲೇ ಗ್ರಾಹಕರು ನಮ್ಮ ಮೇಲೆ ವಿಶ್ವಾಸ ಇರಿಸಿದ್ದು ಅದನ್ನು ಉಳಿಸಿಕೊಂಡು ಮುಂದೆ ಸಾಗುವುದಾಗಿ ಹೇಳಿದರು.

ಪಟ್ಟಣದ ಪ್ರಮುಖ ರಸ್ತೆ, ಸರಾಫ ಬಜಾರ, ಅಂಬೇಡ್ಕರ್ ಸರ್ಕಲ್, ಏಪಿಎಂಸಿಯಲ್ಲಿ ಅಭ್ಯರ್ಥಿಗಳು ಮತಯಾಚನೆ ಮಾಡಿದರು.ಪೆನಲ್‌ನ ಅಭ್ಯರ್ಥಿಗಳು, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಬಿ.ಪಿ.ಕುಲಕರ್ಣಿ, ಎಂ.ಬಿ.ನಾವದಗಿ, ಬಸವರಾಜ ನಂದಿಕೇಶ್ವರಮಠ, ಬಾಬು ಬಿರಾದಾರ, ವಕೀಲರಾದ ಎಂ.ಎಸ್.ನಾವದಗಿ,ಗುರುಸ್ವಾಮಿ ಬೂದಿಹಾಳಮಠ, ಚನ್ನಬಸ್ಸು ಗುಡ್ಡದ, ಎ.ಗಣೇಶ ನಾರಾಯಣಸ್ವಾಮಿ, ವಾಯ್.ಎಚ್.ವಿಜಯಕರ್, ಹುಲಗಪ್ಪ ನಾಯ್ಕಮಕ್ಕಳ,ಮಹಾಂತೇಶ ಬೂದಿಹಾಳಮಠ, ಶರಣು ಸಜ್ಜನ ಮೊದಲಾದವರು ಪಾಲ್ಗೊಂಡಿದ್ದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ