Health care and higher education should be free: Minister Santosh Lad

ಆರೋಗ್ಯ ಸೇವೆ ಹಾಗೂ ಉನ್ನತ ಶಿಕ್ಷಣಗಳು ಉಚಿತವಾಗಿರಬೇಕು: ಸಚಿವ ಸಂತೋಷ್‌ ಲಾಡ್‌

ಆರೋಗ್ಯ ಸೇವೆ ಹಾಗೂ ಉನ್ನತ ಶಿಕ್ಷಣಗಳು ಉಚಿತವಾಗಿರಬೇಕು: ಸಚಿವ ಸಂತೋಷ್‌ ಲಾಡ್‌

ಬಡಜನರ ಶಿಕ್ಷಣ, ಆರೋಗ್ಯಕ್ಕೆ ಮಹತ್ವ ನೀಡಿದರೆ ಆರ್ಥಿಕ ಅಭಿವೃದ್ಧಿ ಮುಂದಿನ ಪೀಳಿಗೆಗೆ ನವೀಕರಣ ಆಗಿರುವ ಪಠ್ಯಪುಸ್ತಕ ಇಲ್ಲವೆಂದರೆ ಶೈಕ್ಷಣಿಕ ಸುಧಾರಣೆ ಅಸಾಧ್ಯ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಭಿಮತ

ಧಾರವಾಡ, ಮೇ.26: ಉನ್ನತ ಶಿಕ್ಷಣವನ್ನು ಮತ್ತು ಆರೋಗ್ಯವನ್ನು ಉಚಿತವಾಗಿ ನೀಡಬೇಕು. ಬಡಜನರ ಶಿಕ್ಷಣಕ್ಕೆ ಮತ್ತು ಆರೋಗ್ಯಕ್ಕೆ ಅತಿ ಹೆಚ್ಚು ಮಹತ್ವ ನೀಡಿದರೆ ಅವರು ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಾರೆ ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಹೇಳಿದರು.

ಧಾರವಾಡದ ಜಿಲ್ಲಾ ಪಂಚಾಯತ್‌ ಸಭಾಭವನದಲ್ಲಿ ಶಾಸಕರ, ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಗುಣಮಟ್ಟದ ಉನ್ನತ ಶಿಕ್ಷಣ ನೀಡಬೇಕು. ಉನ್ನತ ಮಟ್ಟದ ಶಿಕ್ಷಣವನ್ನು ನೀಡಬೇಕಾದಲ್ಲಿ, ಬೇಸಿಕ್ ಪಠ್ಯಪುಸ್ತಕಗಳನ್ನು ನವೀಕರಿಸಬೇಕು. ಮಧ್ಯಮ ವರ್ಗದವರು ಶಿಕ್ಷಣಕ್ಕೆ ಅತಿ ಹೆಚ್ಚು ಹಣವನ್ನು ವ್ಯಯ ಮಾಡುತ್ತಿದ್ದಾರೆ. ಬರುವ ಪೀಳಿಗೆಗೆ ನವೀಕರಣ ಆಗಿರುವ ಪಠ್ಯಪುಸ್ತಕ ಇಲ್ಲವೆಂದರೆ ಶೈಕ್ಷಣಿಕ ಸುಧಾರಣೆ ಅಸಾಧ್ಯ ಎಂದು ಅಭಿಪ್ರಾಯಪಟ್ಟ ಸಚಿವರು, ಸಣ್ಣ ಸಣ್ಣ ಉದ್ಯಮ ಕೈಗಾರಿಕೆಗಳು ಅತಿ ಹೆಚ್ಚು ಅವನತಿ ಆಗುತ್ತಿವೆ. ಅವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಹಣಕಾಸಿನ ನೆರವು ನೀಡಬೇಕು ಎಂದರು.

ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಪ್ರೊ. ಎಂ ಗೋವಿಂದರಾವ್ ಮಾತನಾಡಿ, ಡಾ.ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನದಲ್ಲಿ ಆಗಿರುವ ಅಭಿವೃದ್ಧಿ, ಬದಲಾವಣೆ ಹಿನ್ನೆಲೆಯಲ್ಲಿ ಅಧ್ಯಯನ ಮಾಡಿ, ಅದಕ್ಕೆ ಪೂರಕವಾಗಿ ಅಸಮತೋಲನ, ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಅಗತ್ಯವಿರುವ ಅಂಶಗಳನ್ನು ಶಿಫಾರಸು ಮಾಡುವ ಹಿನ್ನೆಲೆಯಲ್ಲಿ ಸಮಿತಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಅಧ್ಯಯನ ಪ್ರವಾಸ ಮಾಡುತ್ತಿದೆ ಎಂದರು.

ಕಳೆದ ಏಳು ತಿಂಗಳಿಂದ ಸಮಿತಿಯು ರಾಜ್ಯದಲ್ಲಿ ಸಂಚರಿಸಿ ಅಧ್ಯಯನ ಮಾಡುವುದರ ಜೊತೆಗೆ ಹಿಂದುಳಿದ ತಾಲೂಕುಗಳಲ್ಲಿ ಇನ್ನೂ ಏನೇನು ಅಭಿವೃದ್ಧಿ ಕಾರ್ಯಕ್ರಮಗಳು ಆಗಬೇಕು, ಕೊರತೆಗಳೇನಿವೆ ಎಂಬುದನ್ನು ಹಲವು ಸೂಚ್ಯಂಕಗಳ ಮೂಲಕ ಅರಿಯುತ್ತಿದ್ದೇವೆ. ಜೊತೆಗೆ ಸಂಘ-ಸಂಸ್ಥೆಗಳ, ಅಧಿಕಾರಿಗಳಿಂದ ಸಂವಾದ ಮೂಲಕ ಮಾಹಿತಿ ಪಡೆಯುತ್ತಿದ್ದೇವೆ ಎಂದು ಅವರು ತಿಳಿಸಿದರು.

ಶಾಸಕರಾದ ಎನ್.ಎಚ್.ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿದರು.

ಸಂವಾದ ಸಭೆಯಲ್ಲಿ ತಜ್ಞರು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳಾದ ಕರ್ನಾಟಕ ಚೇಂಬರ ಆಪ್ ಕಾಮರ್ಸ್ ಅಧ್ಯಕ್ಷ ಸಂಶಿಮಠ, ಕಾರ್ಯದರ್ಶಿ ರವೀಂದ್ರ ಬಳಿಗಾರ, ಸದಸ್ಯ ಹಾಗೂ ಉದ್ಯಮಿ ಮಹೇಂದ್ರ ಸಿಂಘೀ, ಹಿರಿಯ ವಕೀಲ ಸೋಮಶೇಖರ ಜಾಡರ, ವಿಜ್ಞಾನಿ ಮತ್ತು ಶಿಕ್ಷಣ ತಜ್ಞ ಡಾ.ಎಸ್.ಎಂ.ಶಿವಪ್ರಸಾದ, ಸಿಎಂಡಿಆರ್ ಮಾಜಿ ನಿರ್ದೇಶಕ ಡಾ.ಅಣ್ಣಿಗೇರಿ, ಮಹಿಳಾ ಹೋರಾಟಗಾರ್ತಿ ಶಾರದಾ ಗೋಪಾಲ, ಉದ್ಯಮಿ ಜಗದೀಶ ಹಿರೇಮಠ, ಸರ್ಕಾರೇತರ ಸಂಸ್ಥೆಯ ಮುಖ್ಯಸ್ಥೆ ಓಟ್ಟಿಲಿ ಅನ್ಬನ್ ಕುಮಾರ್ ಅವರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ವಿವಿಧ ವಿಷಯಗಳನ್ನು ಮಂಡಿಸಿದರು.

ಸಮಿತಿ ಸದಸ್ಯರಾದ ಡಾ. ಸೂರ್ಯನಾರಾಯಣ ಎಂ.ಎಚ್., ಡಾ. ಎಸ್.ಟಿ. ಬಾಗಲಕೋಟ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾಂವಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ ಅವರು ವೇದಿಕೆಯಲ್ಲಿ ಇದ್ದರು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ವಿಶ್ವವಿದ್ಯಾಲಯ ಪ್ರಾಧ್ಯಾಪಕರು, ಆರ್ಥಿಕ ತಜ್ಞರು ಭಾಗವಹಿಸಿದ್ದರು.

ರೈತರಿಗೆ ಬೀಜ ವಿತರಣೆ : ಸಚಿವ ಲಾಡ್‌ ಅವರು, ಹುಬ್ಬಳ್ಳಿಯ ಶಿರಗುಪ್ಪ ಗ್ರಾಮದ ಬೀಜ ವಿತರಣಾ ಕೇಂದ್ರಕ್ಕೆ ಭೇಟಿ ನೀಡಿ ರೈತರಿಗೆ ಬೀಜ ವಿತರಣೆ ಮಾಡಿದರು.

ಇಂದಿರಾ ಕ್ಯಾಂಟೀನ್ ಉದ್ಘಾಟನೆ
ಧಾರವಾಡ ಜಿಲ್ಲೆಯ‌ ಅಣ್ಣಿಗೇರಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವ ಲಾಡ್‌ ಅವರು ಉಪಾಹಾರ ಸೇವಿಸಿದರು. ಈ ವೇಳೆ ಶಾಸಕರಾದ ಎನ್‌ ಎಚ್‌ ಕೋನರಡ್ಡಿ, ಪಕ್ಷದ ಮುಖಂಡರಾದ ಅನಿಲ್‌ ಕುಮಾರ್‌ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.‌

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ