Health care and higher education should be free: Minister Santosh Lad

ಆರೋಗ್ಯ ಸೇವೆ ಹಾಗೂ ಉನ್ನತ ಶಿಕ್ಷಣಗಳು ಉಚಿತವಾಗಿರಬೇಕು: ಸಚಿವ ಸಂತೋಷ್‌ ಲಾಡ್‌

ಆರೋಗ್ಯ ಸೇವೆ ಹಾಗೂ ಉನ್ನತ ಶಿಕ್ಷಣಗಳು ಉಚಿತವಾಗಿರಬೇಕು: ಸಚಿವ ಸಂತೋಷ್‌ ಲಾಡ್‌

ಬಡಜನರ ಶಿಕ್ಷಣ, ಆರೋಗ್ಯಕ್ಕೆ ಮಹತ್ವ ನೀಡಿದರೆ ಆರ್ಥಿಕ ಅಭಿವೃದ್ಧಿ ಮುಂದಿನ ಪೀಳಿಗೆಗೆ ನವೀಕರಣ ಆಗಿರುವ ಪಠ್ಯಪುಸ್ತಕ ಇಲ್ಲವೆಂದರೆ ಶೈಕ್ಷಣಿಕ ಸುಧಾರಣೆ ಅಸಾಧ್ಯ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಭಿಮತ

ಧಾರವಾಡ, ಮೇ.26: ಉನ್ನತ ಶಿಕ್ಷಣವನ್ನು ಮತ್ತು ಆರೋಗ್ಯವನ್ನು ಉಚಿತವಾಗಿ ನೀಡಬೇಕು. ಬಡಜನರ ಶಿಕ್ಷಣಕ್ಕೆ ಮತ್ತು ಆರೋಗ್ಯಕ್ಕೆ ಅತಿ ಹೆಚ್ಚು ಮಹತ್ವ ನೀಡಿದರೆ ಅವರು ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಾರೆ ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಹೇಳಿದರು.

ಧಾರವಾಡದ ಜಿಲ್ಲಾ ಪಂಚಾಯತ್‌ ಸಭಾಭವನದಲ್ಲಿ ಶಾಸಕರ, ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಗುಣಮಟ್ಟದ ಉನ್ನತ ಶಿಕ್ಷಣ ನೀಡಬೇಕು. ಉನ್ನತ ಮಟ್ಟದ ಶಿಕ್ಷಣವನ್ನು ನೀಡಬೇಕಾದಲ್ಲಿ, ಬೇಸಿಕ್ ಪಠ್ಯಪುಸ್ತಕಗಳನ್ನು ನವೀಕರಿಸಬೇಕು. ಮಧ್ಯಮ ವರ್ಗದವರು ಶಿಕ್ಷಣಕ್ಕೆ ಅತಿ ಹೆಚ್ಚು ಹಣವನ್ನು ವ್ಯಯ ಮಾಡುತ್ತಿದ್ದಾರೆ. ಬರುವ ಪೀಳಿಗೆಗೆ ನವೀಕರಣ ಆಗಿರುವ ಪಠ್ಯಪುಸ್ತಕ ಇಲ್ಲವೆಂದರೆ ಶೈಕ್ಷಣಿಕ ಸುಧಾರಣೆ ಅಸಾಧ್ಯ ಎಂದು ಅಭಿಪ್ರಾಯಪಟ್ಟ ಸಚಿವರು, ಸಣ್ಣ ಸಣ್ಣ ಉದ್ಯಮ ಕೈಗಾರಿಕೆಗಳು ಅತಿ ಹೆಚ್ಚು ಅವನತಿ ಆಗುತ್ತಿವೆ. ಅವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಹಣಕಾಸಿನ ನೆರವು ನೀಡಬೇಕು ಎಂದರು.

ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಪ್ರೊ. ಎಂ ಗೋವಿಂದರಾವ್ ಮಾತನಾಡಿ, ಡಾ.ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನದಲ್ಲಿ ಆಗಿರುವ ಅಭಿವೃದ್ಧಿ, ಬದಲಾವಣೆ ಹಿನ್ನೆಲೆಯಲ್ಲಿ ಅಧ್ಯಯನ ಮಾಡಿ, ಅದಕ್ಕೆ ಪೂರಕವಾಗಿ ಅಸಮತೋಲನ, ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಅಗತ್ಯವಿರುವ ಅಂಶಗಳನ್ನು ಶಿಫಾರಸು ಮಾಡುವ ಹಿನ್ನೆಲೆಯಲ್ಲಿ ಸಮಿತಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಅಧ್ಯಯನ ಪ್ರವಾಸ ಮಾಡುತ್ತಿದೆ ಎಂದರು.

ಕಳೆದ ಏಳು ತಿಂಗಳಿಂದ ಸಮಿತಿಯು ರಾಜ್ಯದಲ್ಲಿ ಸಂಚರಿಸಿ ಅಧ್ಯಯನ ಮಾಡುವುದರ ಜೊತೆಗೆ ಹಿಂದುಳಿದ ತಾಲೂಕುಗಳಲ್ಲಿ ಇನ್ನೂ ಏನೇನು ಅಭಿವೃದ್ಧಿ ಕಾರ್ಯಕ್ರಮಗಳು ಆಗಬೇಕು, ಕೊರತೆಗಳೇನಿವೆ ಎಂಬುದನ್ನು ಹಲವು ಸೂಚ್ಯಂಕಗಳ ಮೂಲಕ ಅರಿಯುತ್ತಿದ್ದೇವೆ. ಜೊತೆಗೆ ಸಂಘ-ಸಂಸ್ಥೆಗಳ, ಅಧಿಕಾರಿಗಳಿಂದ ಸಂವಾದ ಮೂಲಕ ಮಾಹಿತಿ ಪಡೆಯುತ್ತಿದ್ದೇವೆ ಎಂದು ಅವರು ತಿಳಿಸಿದರು.

ಶಾಸಕರಾದ ಎನ್.ಎಚ್.ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿದರು.

ಸಂವಾದ ಸಭೆಯಲ್ಲಿ ತಜ್ಞರು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳಾದ ಕರ್ನಾಟಕ ಚೇಂಬರ ಆಪ್ ಕಾಮರ್ಸ್ ಅಧ್ಯಕ್ಷ ಸಂಶಿಮಠ, ಕಾರ್ಯದರ್ಶಿ ರವೀಂದ್ರ ಬಳಿಗಾರ, ಸದಸ್ಯ ಹಾಗೂ ಉದ್ಯಮಿ ಮಹೇಂದ್ರ ಸಿಂಘೀ, ಹಿರಿಯ ವಕೀಲ ಸೋಮಶೇಖರ ಜಾಡರ, ವಿಜ್ಞಾನಿ ಮತ್ತು ಶಿಕ್ಷಣ ತಜ್ಞ ಡಾ.ಎಸ್.ಎಂ.ಶಿವಪ್ರಸಾದ, ಸಿಎಂಡಿಆರ್ ಮಾಜಿ ನಿರ್ದೇಶಕ ಡಾ.ಅಣ್ಣಿಗೇರಿ, ಮಹಿಳಾ ಹೋರಾಟಗಾರ್ತಿ ಶಾರದಾ ಗೋಪಾಲ, ಉದ್ಯಮಿ ಜಗದೀಶ ಹಿರೇಮಠ, ಸರ್ಕಾರೇತರ ಸಂಸ್ಥೆಯ ಮುಖ್ಯಸ್ಥೆ ಓಟ್ಟಿಲಿ ಅನ್ಬನ್ ಕುಮಾರ್ ಅವರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ವಿವಿಧ ವಿಷಯಗಳನ್ನು ಮಂಡಿಸಿದರು.

ಸಮಿತಿ ಸದಸ್ಯರಾದ ಡಾ. ಸೂರ್ಯನಾರಾಯಣ ಎಂ.ಎಚ್., ಡಾ. ಎಸ್.ಟಿ. ಬಾಗಲಕೋಟ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾಂವಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ ಅವರು ವೇದಿಕೆಯಲ್ಲಿ ಇದ್ದರು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ವಿಶ್ವವಿದ್ಯಾಲಯ ಪ್ರಾಧ್ಯಾಪಕರು, ಆರ್ಥಿಕ ತಜ್ಞರು ಭಾಗವಹಿಸಿದ್ದರು.

ರೈತರಿಗೆ ಬೀಜ ವಿತರಣೆ : ಸಚಿವ ಲಾಡ್‌ ಅವರು, ಹುಬ್ಬಳ್ಳಿಯ ಶಿರಗುಪ್ಪ ಗ್ರಾಮದ ಬೀಜ ವಿತರಣಾ ಕೇಂದ್ರಕ್ಕೆ ಭೇಟಿ ನೀಡಿ ರೈತರಿಗೆ ಬೀಜ ವಿತರಣೆ ಮಾಡಿದರು.

ಇಂದಿರಾ ಕ್ಯಾಂಟೀನ್ ಉದ್ಘಾಟನೆ
ಧಾರವಾಡ ಜಿಲ್ಲೆಯ‌ ಅಣ್ಣಿಗೇರಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವ ಲಾಡ್‌ ಅವರು ಉಪಾಹಾರ ಸೇವಿಸಿದರು. ಈ ವೇಳೆ ಶಾಸಕರಾದ ಎನ್‌ ಎಚ್‌ ಕೋನರಡ್ಡಿ, ಪಕ್ಷದ ಮುಖಂಡರಾದ ಅನಿಲ್‌ ಕುಮಾರ್‌ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.‌

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು