Heart attack: Heart attack during press conference for CM.. Man died on the spot in bengaluru press club

Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಬೆಂಗಳೂರು: ಮೂಡಾ ಹಗರದ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಹೃದಯಾಘಾತ (Heart attack) ಸಂಭವಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪ್ರೆಸ್​ ಕ್ಲಬ್​​ನಲ್ಲಿ ನಡೆದಿದೆ.

ರವಿಚಂದ್ರ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕುರುಬ ಸಮುದಾಯದಿಂದ ಸುದ್ದಿಗೋಷ್ಠಿ ವೇಳೆ ಈ ಅನಾಹುತ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada

ಮೃತ ವ್ಯಕ್ತಿಯೂ ಕೋಲಾರದ ಕುರುಬ ಸಂಘದ ಮುಖಂಡರಾಗಿದ್ದರು ಎನ್ನಲಾಗಿದೆ. ಇಂದು ನಡೆಯುತ್ತಿದ್ದ ಪ್ರೆಸ್ ಕ್ಲಬ್​ನಲ್ಲಿ ಈ ಘಟನೆ ಸಂಭವಿಸಿದೆ.

ಕೂಡಲೇ ಹೃದಯಾಘಾತಕ್ಕೀಡಾದ (Heart attack) ರವಿಚಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ರವಿಚಂದ್ರ ಮೃತಪಟ್ಟಿದ್ದಾರೆ.

ಸಿಎಂ ಸಂತಾಪ

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳು ಮತ್ತು ಅಲ್ಪ ಸಂಖ್ಯಾತರ ಸಂಘದ ವತಿಯಿಂದ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ‌ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಸಂಘದ ಸದಸ್ಯ, ನಮ್ಮ ಪಕ್ಷದ ಕಾರ್ಯಕರ್ತ ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯಿತು.

ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿನ ಈ ಹೋರಾಟದಲ್ಲಿ ನಮ್ಮ ಜೊತೆಯಾಗಿದ್ದ ರವಿಚಂದ್ರನ್ ಅವರ ನಿಧನ ಅತೀವು ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಇದನ್ನೂ ಓದಿ: Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

ಅವರ ದುಃಖತಪ್ತ ಕುಟುಂಬಸ್ಥರು ಮತ್ತು ಬಂಧುಬಳಗದ ಜೊತೆ ನಾನಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

ನವದೆಹಲಿ: ಯಾವುದೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದಾಗ ಅದರ ನಕಲು ಮಾಡಿ ಮಾರಾಟ ಮಾಡುವುದು ಅಪರಾಧ ಜಗತ್ತಿನಲ್ಲಿ  ಹೊಸ ಬೆಳವಣಿಗೆ ಅಲ್ಲ. ಇಂಥದ್ದೇ ಆತಂಕಕಾರಿ ಬೆಳವಣಿಗೆಯೊಂದಲ್ಲಿ ಸಿಮೆಂಟ್‌ನಲ್ಲಿ ಬೆಳ್ಳುಳ್ಳಿ ಪ್ರತಿಕೃತಿ ಮಾಡಿ, ಅದನ್ನು ನಿಜವಾದ ಬೆಳ್ಳುಳ್ಳಿ ಜೊತೆ ಮಾರಾಟ ಮಾಡುತ್ತಿರುವ ಪ್ರಕರಣ ಮಹಾರಾಷ್ಟ್ರದ ಹಲವು ಕಡೆ ಬೆಳಕಿಗೆ ಬಂದಿದೆ.

ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆ.ಜಿ.ಗೆ 300-350 ರು. ತಲುಪಿರುವ ಬೆನ್ನಲ್ಲೇ, ಮಹಾರಾಷ್ಟ್ರದ ಮಾರುಕಟ್ಟೆಗಳಲ್ಲಿ ಸಿಮೆಂಟ್ ಬೆಳ್ಳುಳ್ಳಿ ಮಾರಾಟದ ಪ್ರಕರಣಗಳು ಪತ್ತೆಯಾಗಿವೆ. ಆಕೋಲಾದಲ್ಲಿ ಬಿಕರಿಗೆ ಇಟ್ಟಿದ್ದ ನೈಜ ಬೆಳ್ಳುಳ್ಳಿ ನಡುವೆ ನೈಜ ಬೆಳ್ಳುಳ್ಳಿಯನ್ನೇ ಹೋಲುವ ಸಿಮೆಂಟ್ ಬೆಳ್ಳುಳ್ಳಿ ಪತ್ತೆಯಾಗಿದೆ. ಸಿಮೆಂಟ್ ಬಳಸಿ ಪ್ರತಿಮೆಗಳನ್ನು ನಿರ್ಮಿಸುವಂತೆ ಬೆಳ್ಳುಳ್ಳಿ ಪ್ರತಿಕೃತಿ ಮಾಡಿ ಅದಕ್ಕೆ ಬಿಳಿಯ ಬಣ್ಣ ಹಚ್ಚಲಾಗಿದೆ.

ಸುಭಾಷ್ ಪಾಟೀಲ್ ಎಂಬ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ಮಾರುಕಟ್ಟೆಯಿಂದ 250 ಗ್ರಾಂ ಬೆಳ್ಳುಳ್ಳಿ ಖರೀದಿಸಿ ಮನೆಗೆ ತಂದಿದ್ದರು. ಮನೆಯಲ್ಲಿ ಬೆಳ್ಳುಳ್ಳಿ ಸಿಪ್ಪೆ ಬಿಡಿಸಲು ಹೋದಾಗ ಆಗಿಲ್ಲ. ಬಳಿಕ ಚಾಕುವಿನಿಂದ ಕತ್ತರಿಸಿದಾಗ ಒಳಗೆ ಸಿಮೆಂಟ್ ಕಂಡುಬಂದಿದೆ. ಇದೇ ರೀತಿ ಹಲವು ಗ್ರಾಹಕರು ತಾವು ವಂಚನೆಗೆ ಒಳಗಾಗಿದ್ದರ ಕುರಿತು ಮಾಹಿತಿ ಹಂಚಿ ಕೊಂಡಿದ್ದಾರೆ.

ನೈಜ ಬೆಳ್ಳುಳ್ಳಿ ಜೊತೆಗೆ ಈ ನಕಲಿ ಬೆಳ್ಳುಳ್ಳಿ ಸೇರಿಸುವಮೂಲಕ ತೂಕ ಹೆಚ್ಚಿಸುವ ತಂತ್ರಕ್ಕೆ ವ್ಯಾಪಾರಿಗಳು ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಖರೀದಿಸಿದ ಹಲವು ವ್ಯಕ್ತಿಗಳು ನಕಲಿ ಬೆಳ್ಳುಳ್ಳಿ ಒಡೆದಾಗ ಒಳಗಿನಿಂದ ಸಿಮೆಂಟ್ ಪುಡಿ ಉದುರುತ್ತದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ