Heart attack: Heart attack during press conference for CM.. Man died on the spot in bengaluru press club

Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಬೆಂಗಳೂರು: ಮೂಡಾ ಹಗರದ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಹೃದಯಾಘಾತ (Heart attack) ಸಂಭವಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪ್ರೆಸ್​ ಕ್ಲಬ್​​ನಲ್ಲಿ ನಡೆದಿದೆ.

ರವಿಚಂದ್ರ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕುರುಬ ಸಮುದಾಯದಿಂದ ಸುದ್ದಿಗೋಷ್ಠಿ ವೇಳೆ ಈ ಅನಾಹುತ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada

ಮೃತ ವ್ಯಕ್ತಿಯೂ ಕೋಲಾರದ ಕುರುಬ ಸಂಘದ ಮುಖಂಡರಾಗಿದ್ದರು ಎನ್ನಲಾಗಿದೆ. ಇಂದು ನಡೆಯುತ್ತಿದ್ದ ಪ್ರೆಸ್ ಕ್ಲಬ್​ನಲ್ಲಿ ಈ ಘಟನೆ ಸಂಭವಿಸಿದೆ.

ಕೂಡಲೇ ಹೃದಯಾಘಾತಕ್ಕೀಡಾದ (Heart attack) ರವಿಚಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ರವಿಚಂದ್ರ ಮೃತಪಟ್ಟಿದ್ದಾರೆ.

ಸಿಎಂ ಸಂತಾಪ

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳು ಮತ್ತು ಅಲ್ಪ ಸಂಖ್ಯಾತರ ಸಂಘದ ವತಿಯಿಂದ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ‌ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಸಂಘದ ಸದಸ್ಯ, ನಮ್ಮ ಪಕ್ಷದ ಕಾರ್ಯಕರ್ತ ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯಿತು.

ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿನ ಈ ಹೋರಾಟದಲ್ಲಿ ನಮ್ಮ ಜೊತೆಯಾಗಿದ್ದ ರವಿಚಂದ್ರನ್ ಅವರ ನಿಧನ ಅತೀವು ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಇದನ್ನೂ ಓದಿ: Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

ಅವರ ದುಃಖತಪ್ತ ಕುಟುಂಬಸ್ಥರು ಮತ್ತು ಬಂಧುಬಳಗದ ಜೊತೆ ನಾನಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

ನವದೆಹಲಿ: ಯಾವುದೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದಾಗ ಅದರ ನಕಲು ಮಾಡಿ ಮಾರಾಟ ಮಾಡುವುದು ಅಪರಾಧ ಜಗತ್ತಿನಲ್ಲಿ  ಹೊಸ ಬೆಳವಣಿಗೆ ಅಲ್ಲ. ಇಂಥದ್ದೇ ಆತಂಕಕಾರಿ ಬೆಳವಣಿಗೆಯೊಂದಲ್ಲಿ ಸಿಮೆಂಟ್‌ನಲ್ಲಿ ಬೆಳ್ಳುಳ್ಳಿ ಪ್ರತಿಕೃತಿ ಮಾಡಿ, ಅದನ್ನು ನಿಜವಾದ ಬೆಳ್ಳುಳ್ಳಿ ಜೊತೆ ಮಾರಾಟ ಮಾಡುತ್ತಿರುವ ಪ್ರಕರಣ ಮಹಾರಾಷ್ಟ್ರದ ಹಲವು ಕಡೆ ಬೆಳಕಿಗೆ ಬಂದಿದೆ.

ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆ.ಜಿ.ಗೆ 300-350 ರು. ತಲುಪಿರುವ ಬೆನ್ನಲ್ಲೇ, ಮಹಾರಾಷ್ಟ್ರದ ಮಾರುಕಟ್ಟೆಗಳಲ್ಲಿ ಸಿಮೆಂಟ್ ಬೆಳ್ಳುಳ್ಳಿ ಮಾರಾಟದ ಪ್ರಕರಣಗಳು ಪತ್ತೆಯಾಗಿವೆ. ಆಕೋಲಾದಲ್ಲಿ ಬಿಕರಿಗೆ ಇಟ್ಟಿದ್ದ ನೈಜ ಬೆಳ್ಳುಳ್ಳಿ ನಡುವೆ ನೈಜ ಬೆಳ್ಳುಳ್ಳಿಯನ್ನೇ ಹೋಲುವ ಸಿಮೆಂಟ್ ಬೆಳ್ಳುಳ್ಳಿ ಪತ್ತೆಯಾಗಿದೆ. ಸಿಮೆಂಟ್ ಬಳಸಿ ಪ್ರತಿಮೆಗಳನ್ನು ನಿರ್ಮಿಸುವಂತೆ ಬೆಳ್ಳುಳ್ಳಿ ಪ್ರತಿಕೃತಿ ಮಾಡಿ ಅದಕ್ಕೆ ಬಿಳಿಯ ಬಣ್ಣ ಹಚ್ಚಲಾಗಿದೆ.

ಸುಭಾಷ್ ಪಾಟೀಲ್ ಎಂಬ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ಮಾರುಕಟ್ಟೆಯಿಂದ 250 ಗ್ರಾಂ ಬೆಳ್ಳುಳ್ಳಿ ಖರೀದಿಸಿ ಮನೆಗೆ ತಂದಿದ್ದರು. ಮನೆಯಲ್ಲಿ ಬೆಳ್ಳುಳ್ಳಿ ಸಿಪ್ಪೆ ಬಿಡಿಸಲು ಹೋದಾಗ ಆಗಿಲ್ಲ. ಬಳಿಕ ಚಾಕುವಿನಿಂದ ಕತ್ತರಿಸಿದಾಗ ಒಳಗೆ ಸಿಮೆಂಟ್ ಕಂಡುಬಂದಿದೆ. ಇದೇ ರೀತಿ ಹಲವು ಗ್ರಾಹಕರು ತಾವು ವಂಚನೆಗೆ ಒಳಗಾಗಿದ್ದರ ಕುರಿತು ಮಾಹಿತಿ ಹಂಚಿ ಕೊಂಡಿದ್ದಾರೆ.

ನೈಜ ಬೆಳ್ಳುಳ್ಳಿ ಜೊತೆಗೆ ಈ ನಕಲಿ ಬೆಳ್ಳುಳ್ಳಿ ಸೇರಿಸುವಮೂಲಕ ತೂಕ ಹೆಚ್ಚಿಸುವ ತಂತ್ರಕ್ಕೆ ವ್ಯಾಪಾರಿಗಳು ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಖರೀದಿಸಿದ ಹಲವು ವ್ಯಕ್ತಿಗಳು ನಕಲಿ ಬೆಳ್ಳುಳ್ಳಿ ಒಡೆದಾಗ ಒಳಗಿನಿಂದ ಸಿಮೆಂಟ್ ಪುಡಿ ಉದುರುತ್ತದೆ.

Latest News

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಶನಿವಾರದಿಂದ ಕೈಗೊಂಡಿದ್ದು ಸಂಕಲ್ಪಪೂರ್ವ ಚಾತುರ್ಮಾಸ್ಯ ದೀಕ್ಷೆ ತನ್ನಿಮಿತ್ಯ ಶ್ರೀಗಳನ್ನು ಚಾತುರ್ಮಾಸ್ಯ ಮಹೋತ್ಸವ ಸಮೀತಿ ಹಾಗೂ ಸಮಸ್ತ ವಿಪ್ರ ಸಮಾಜದ ಬಾಂಧವರು ಭವ್ಯ ಮೆರವಣಿಗೆ ಮೂಲಕ ಶಿವ ಚಿದಂಬರ ದೇವಸ್ಥಾನಕ್ಕೆ ಕರೆದೊಯ್ಯರು. ಪಟ್ಟಣದ ರಾಘವೇಂದ್ರ ಮಠದಿಂದ ಪೂಜ್ಯರನ್ನು ಅಲಂಕೃತ ಸಾರೋಟಿನಲ್ಲಿ ಕೂರಿಸಿ ಸಕಲ ವಾದ್ಯವೈಭವಗಳೊಂದಿಗೆ ಮೆರವಣಿಗೆ ನಡೆಸಲಾಯಿತು.ಮೆರವಣಿಗೆಯಲ್ಲಿ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ