Heart attack: Heart attack during press conference for CM.. Man died on the spot in bengaluru press club

Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಬೆಂಗಳೂರು: ಮೂಡಾ ಹಗರದ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಹೃದಯಾಘಾತ (Heart attack) ಸಂಭವಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪ್ರೆಸ್​ ಕ್ಲಬ್​​ನಲ್ಲಿ ನಡೆದಿದೆ.

ರವಿಚಂದ್ರ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕುರುಬ ಸಮುದಾಯದಿಂದ ಸುದ್ದಿಗೋಷ್ಠಿ ವೇಳೆ ಈ ಅನಾಹುತ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada

ಮೃತ ವ್ಯಕ್ತಿಯೂ ಕೋಲಾರದ ಕುರುಬ ಸಂಘದ ಮುಖಂಡರಾಗಿದ್ದರು ಎನ್ನಲಾಗಿದೆ. ಇಂದು ನಡೆಯುತ್ತಿದ್ದ ಪ್ರೆಸ್ ಕ್ಲಬ್​ನಲ್ಲಿ ಈ ಘಟನೆ ಸಂಭವಿಸಿದೆ.

ಕೂಡಲೇ ಹೃದಯಾಘಾತಕ್ಕೀಡಾದ (Heart attack) ರವಿಚಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ರವಿಚಂದ್ರ ಮೃತಪಟ್ಟಿದ್ದಾರೆ.

ಸಿಎಂ ಸಂತಾಪ

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳು ಮತ್ತು ಅಲ್ಪ ಸಂಖ್ಯಾತರ ಸಂಘದ ವತಿಯಿಂದ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ‌ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಸಂಘದ ಸದಸ್ಯ, ನಮ್ಮ ಪಕ್ಷದ ಕಾರ್ಯಕರ್ತ ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯಿತು.

ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿನ ಈ ಹೋರಾಟದಲ್ಲಿ ನಮ್ಮ ಜೊತೆಯಾಗಿದ್ದ ರವಿಚಂದ್ರನ್ ಅವರ ನಿಧನ ಅತೀವು ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಇದನ್ನೂ ಓದಿ: Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

ಅವರ ದುಃಖತಪ್ತ ಕುಟುಂಬಸ್ಥರು ಮತ್ತು ಬಂಧುಬಳಗದ ಜೊತೆ ನಾನಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

ನವದೆಹಲಿ: ಯಾವುದೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದಾಗ ಅದರ ನಕಲು ಮಾಡಿ ಮಾರಾಟ ಮಾಡುವುದು ಅಪರಾಧ ಜಗತ್ತಿನಲ್ಲಿ  ಹೊಸ ಬೆಳವಣಿಗೆ ಅಲ್ಲ. ಇಂಥದ್ದೇ ಆತಂಕಕಾರಿ ಬೆಳವಣಿಗೆಯೊಂದಲ್ಲಿ ಸಿಮೆಂಟ್‌ನಲ್ಲಿ ಬೆಳ್ಳುಳ್ಳಿ ಪ್ರತಿಕೃತಿ ಮಾಡಿ, ಅದನ್ನು ನಿಜವಾದ ಬೆಳ್ಳುಳ್ಳಿ ಜೊತೆ ಮಾರಾಟ ಮಾಡುತ್ತಿರುವ ಪ್ರಕರಣ ಮಹಾರಾಷ್ಟ್ರದ ಹಲವು ಕಡೆ ಬೆಳಕಿಗೆ ಬಂದಿದೆ.

ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆ.ಜಿ.ಗೆ 300-350 ರು. ತಲುಪಿರುವ ಬೆನ್ನಲ್ಲೇ, ಮಹಾರಾಷ್ಟ್ರದ ಮಾರುಕಟ್ಟೆಗಳಲ್ಲಿ ಸಿಮೆಂಟ್ ಬೆಳ್ಳುಳ್ಳಿ ಮಾರಾಟದ ಪ್ರಕರಣಗಳು ಪತ್ತೆಯಾಗಿವೆ. ಆಕೋಲಾದಲ್ಲಿ ಬಿಕರಿಗೆ ಇಟ್ಟಿದ್ದ ನೈಜ ಬೆಳ್ಳುಳ್ಳಿ ನಡುವೆ ನೈಜ ಬೆಳ್ಳುಳ್ಳಿಯನ್ನೇ ಹೋಲುವ ಸಿಮೆಂಟ್ ಬೆಳ್ಳುಳ್ಳಿ ಪತ್ತೆಯಾಗಿದೆ. ಸಿಮೆಂಟ್ ಬಳಸಿ ಪ್ರತಿಮೆಗಳನ್ನು ನಿರ್ಮಿಸುವಂತೆ ಬೆಳ್ಳುಳ್ಳಿ ಪ್ರತಿಕೃತಿ ಮಾಡಿ ಅದಕ್ಕೆ ಬಿಳಿಯ ಬಣ್ಣ ಹಚ್ಚಲಾಗಿದೆ.

ಸುಭಾಷ್ ಪಾಟೀಲ್ ಎಂಬ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ಮಾರುಕಟ್ಟೆಯಿಂದ 250 ಗ್ರಾಂ ಬೆಳ್ಳುಳ್ಳಿ ಖರೀದಿಸಿ ಮನೆಗೆ ತಂದಿದ್ದರು. ಮನೆಯಲ್ಲಿ ಬೆಳ್ಳುಳ್ಳಿ ಸಿಪ್ಪೆ ಬಿಡಿಸಲು ಹೋದಾಗ ಆಗಿಲ್ಲ. ಬಳಿಕ ಚಾಕುವಿನಿಂದ ಕತ್ತರಿಸಿದಾಗ ಒಳಗೆ ಸಿಮೆಂಟ್ ಕಂಡುಬಂದಿದೆ. ಇದೇ ರೀತಿ ಹಲವು ಗ್ರಾಹಕರು ತಾವು ವಂಚನೆಗೆ ಒಳಗಾಗಿದ್ದರ ಕುರಿತು ಮಾಹಿತಿ ಹಂಚಿ ಕೊಂಡಿದ್ದಾರೆ.

ನೈಜ ಬೆಳ್ಳುಳ್ಳಿ ಜೊತೆಗೆ ಈ ನಕಲಿ ಬೆಳ್ಳುಳ್ಳಿ ಸೇರಿಸುವಮೂಲಕ ತೂಕ ಹೆಚ್ಚಿಸುವ ತಂತ್ರಕ್ಕೆ ವ್ಯಾಪಾರಿಗಳು ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಖರೀದಿಸಿದ ಹಲವು ವ್ಯಕ್ತಿಗಳು ನಕಲಿ ಬೆಳ್ಳುಳ್ಳಿ ಒಡೆದಾಗ ಒಳಗಿನಿಂದ ಸಿಮೆಂಟ್ ಪುಡಿ ಉದುರುತ್ತದೆ.

Latest News

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಎಸ್.ಜಿ.ವಿ.ಸಿ ವಿದ್ಯಾಪ್ರಸಾರಕ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಶನಿವಾರ ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಜಾನಪದ ಕಲೆಗಳನ್ನು ಬಲ್ಲವರು ಗ್ರಾಮೀಣ ಭಾಗದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ.ಆದರೆ ಅವರಿಗೆ ಆರ್ಥಿಕ ಶಕ್ತಿ ಇಲ್ಲವಾಗಿದೆ.ಪರಿಷತ್ತಿನ ಮೂಲಕ ಆರ್ಥಿಕ ಶಕ್ತಿ ತುಂಬಲು ಸರ್ಕಾರದ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.      ಏತನ್ಮಧ್ಯೆ ಬಾವಿಗೆ ತಂದೆಯೂ ಜಿಗಿದಿದ್ದಾನೆ ಎಂದು ಹೇಳಲಾಗಿದ್ದು ಆತನ ಶವ ಶೋಧಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಹಗಲಿರಳು ಕಾರ್ಯಾಚರಣೆ ನಡೆಸಿದ್ದರೂ ಆತನ ಶವ ಪತ್ತೆಯಾಗಿಲ್ಲ.        ಬಾವಿಯಲ್ಲಿ ಮುಳುಗಿ ಮೃತಪಟ್ಟಿರುವ  ಬಾಲಕಿಯರನ್ನು ಹಿರಿಯ ಸಹೋದರಿ ರಕ್ಷಿತಾ ಬರಗಿ(15) ಹಾಗೂ ಕಿರಿಯ ಸಹೋದರಿ ಸಾಕ್ಷಿ ಬರಗಿ(10) ಎಂದು