Heart attack: Heart attack during press conference for CM.. Man died on the spot in bengaluru press club

Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಬೆಂಗಳೂರು: ಮೂಡಾ ಹಗರದ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಹೃದಯಾಘಾತ (Heart attack) ಸಂಭವಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪ್ರೆಸ್​ ಕ್ಲಬ್​​ನಲ್ಲಿ ನಡೆದಿದೆ.

ರವಿಚಂದ್ರ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕುರುಬ ಸಮುದಾಯದಿಂದ ಸುದ್ದಿಗೋಷ್ಠಿ ವೇಳೆ ಈ ಅನಾಹುತ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada

ಮೃತ ವ್ಯಕ್ತಿಯೂ ಕೋಲಾರದ ಕುರುಬ ಸಂಘದ ಮುಖಂಡರಾಗಿದ್ದರು ಎನ್ನಲಾಗಿದೆ. ಇಂದು ನಡೆಯುತ್ತಿದ್ದ ಪ್ರೆಸ್ ಕ್ಲಬ್​ನಲ್ಲಿ ಈ ಘಟನೆ ಸಂಭವಿಸಿದೆ.

ಕೂಡಲೇ ಹೃದಯಾಘಾತಕ್ಕೀಡಾದ (Heart attack) ರವಿಚಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ರವಿಚಂದ್ರ ಮೃತಪಟ್ಟಿದ್ದಾರೆ.

ಸಿಎಂ ಸಂತಾಪ

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳು ಮತ್ತು ಅಲ್ಪ ಸಂಖ್ಯಾತರ ಸಂಘದ ವತಿಯಿಂದ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ‌ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಸಂಘದ ಸದಸ್ಯ, ನಮ್ಮ ಪಕ್ಷದ ಕಾರ್ಯಕರ್ತ ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯಿತು.

ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿನ ಈ ಹೋರಾಟದಲ್ಲಿ ನಮ್ಮ ಜೊತೆಯಾಗಿದ್ದ ರವಿಚಂದ್ರನ್ ಅವರ ನಿಧನ ಅತೀವು ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಇದನ್ನೂ ಓದಿ: Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

ಅವರ ದುಃಖತಪ್ತ ಕುಟುಂಬಸ್ಥರು ಮತ್ತು ಬಂಧುಬಳಗದ ಜೊತೆ ನಾನಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

ನವದೆಹಲಿ: ಯಾವುದೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದಾಗ ಅದರ ನಕಲು ಮಾಡಿ ಮಾರಾಟ ಮಾಡುವುದು ಅಪರಾಧ ಜಗತ್ತಿನಲ್ಲಿ  ಹೊಸ ಬೆಳವಣಿಗೆ ಅಲ್ಲ. ಇಂಥದ್ದೇ ಆತಂಕಕಾರಿ ಬೆಳವಣಿಗೆಯೊಂದಲ್ಲಿ ಸಿಮೆಂಟ್‌ನಲ್ಲಿ ಬೆಳ್ಳುಳ್ಳಿ ಪ್ರತಿಕೃತಿ ಮಾಡಿ, ಅದನ್ನು ನಿಜವಾದ ಬೆಳ್ಳುಳ್ಳಿ ಜೊತೆ ಮಾರಾಟ ಮಾಡುತ್ತಿರುವ ಪ್ರಕರಣ ಮಹಾರಾಷ್ಟ್ರದ ಹಲವು ಕಡೆ ಬೆಳಕಿಗೆ ಬಂದಿದೆ.

ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆ.ಜಿ.ಗೆ 300-350 ರು. ತಲುಪಿರುವ ಬೆನ್ನಲ್ಲೇ, ಮಹಾರಾಷ್ಟ್ರದ ಮಾರುಕಟ್ಟೆಗಳಲ್ಲಿ ಸಿಮೆಂಟ್ ಬೆಳ್ಳುಳ್ಳಿ ಮಾರಾಟದ ಪ್ರಕರಣಗಳು ಪತ್ತೆಯಾಗಿವೆ. ಆಕೋಲಾದಲ್ಲಿ ಬಿಕರಿಗೆ ಇಟ್ಟಿದ್ದ ನೈಜ ಬೆಳ್ಳುಳ್ಳಿ ನಡುವೆ ನೈಜ ಬೆಳ್ಳುಳ್ಳಿಯನ್ನೇ ಹೋಲುವ ಸಿಮೆಂಟ್ ಬೆಳ್ಳುಳ್ಳಿ ಪತ್ತೆಯಾಗಿದೆ. ಸಿಮೆಂಟ್ ಬಳಸಿ ಪ್ರತಿಮೆಗಳನ್ನು ನಿರ್ಮಿಸುವಂತೆ ಬೆಳ್ಳುಳ್ಳಿ ಪ್ರತಿಕೃತಿ ಮಾಡಿ ಅದಕ್ಕೆ ಬಿಳಿಯ ಬಣ್ಣ ಹಚ್ಚಲಾಗಿದೆ.

ಸುಭಾಷ್ ಪಾಟೀಲ್ ಎಂಬ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ಮಾರುಕಟ್ಟೆಯಿಂದ 250 ಗ್ರಾಂ ಬೆಳ್ಳುಳ್ಳಿ ಖರೀದಿಸಿ ಮನೆಗೆ ತಂದಿದ್ದರು. ಮನೆಯಲ್ಲಿ ಬೆಳ್ಳುಳ್ಳಿ ಸಿಪ್ಪೆ ಬಿಡಿಸಲು ಹೋದಾಗ ಆಗಿಲ್ಲ. ಬಳಿಕ ಚಾಕುವಿನಿಂದ ಕತ್ತರಿಸಿದಾಗ ಒಳಗೆ ಸಿಮೆಂಟ್ ಕಂಡುಬಂದಿದೆ. ಇದೇ ರೀತಿ ಹಲವು ಗ್ರಾಹಕರು ತಾವು ವಂಚನೆಗೆ ಒಳಗಾಗಿದ್ದರ ಕುರಿತು ಮಾಹಿತಿ ಹಂಚಿ ಕೊಂಡಿದ್ದಾರೆ.

ನೈಜ ಬೆಳ್ಳುಳ್ಳಿ ಜೊತೆಗೆ ಈ ನಕಲಿ ಬೆಳ್ಳುಳ್ಳಿ ಸೇರಿಸುವಮೂಲಕ ತೂಕ ಹೆಚ್ಚಿಸುವ ತಂತ್ರಕ್ಕೆ ವ್ಯಾಪಾರಿಗಳು ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಖರೀದಿಸಿದ ಹಲವು ವ್ಯಕ್ತಿಗಳು ನಕಲಿ ಬೆಳ್ಳುಳ್ಳಿ ಒಡೆದಾಗ ಒಳಗಿನಿಂದ ಸಿಮೆಂಟ್ ಪುಡಿ ಉದುರುತ್ತದೆ.

Latest News

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ

ಮುದ್ದೇಬಿಹಾಳ : ನೀರಿನ ಹೊಂಡದಲ್ಲಿ ಜಾರಿ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ : ನೀರಿನ ಹೊಂಡದಲ್ಲಿ ಜಾರಿ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ : ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ಬಾಲಕನೊಬ್ಬ ಕಾಲು ಜಾರಿ ಹೊಂಡದಲ್ಲಿ ಬಿದ್ದು

ಶಿವಯೋಗಿಮಠ ಕುಟುಂಬದಿoದ ಆಯೋಜನೆ:                  ಮಾ.2 ರಂದು ಆರೋಗ್ಯ ಉಚಿತ  ತಪಾಸಣಾ ಶಿಬಿರ

ಶಿವಯೋಗಿಮಠ ಕುಟುಂಬದಿoದ ಆಯೋಜನೆ: ಮಾ.2 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ಮುದ್ದೇಬಿಹಾಳ : ಶ್ರೀ ಫಕಿರೇಶ್ವರ ವಿವಿದೋದ್ಧೇಶ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಘ ಮತ್ತು ಸೇಂಟ್

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರಿನಲ್ಲಿ ಎಸ್.ಎನ್.ಡಿ.ನ್ಯಾಶನಲ್ ಪಬ್ಲಿಕ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಾ.1 ರಂದು

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹಳ್ಳೂರ ಕ್ರಾಸ್ ನಲ್ಲಿರುವ ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸಿಂಚನಾ ಶಿವಪುತ್ರಪ್ಪ ಸಜ್ಜನ ಸನ್ 2026-27ನೇ ಸಾಲಿನ ಬೆಳಗಾವಿ ಜಿಲ್ಲೆ ಕಿತ್ತೂರ ರಾಣಿ ಚೆನ್ನಮ್ಮ ಸೈನಿಕ ವಸತಿ ಶಾಲೆಗೆ ಆಯ್ಕೆಯಾಗಿದ್ದಾಳೆ. ಸಿಂಚನಾ , ಬಿದರಕುಂದಿ ಗ್ರಾಮದ ಶಿಕ್ಷಕ ದಂಪತಿಯಾದ ಶಿವಪುತ್ರಪ್ಪ ಸಜ್ಜನ ಹಾಗೂ ಸುಮಲತಾ ಗಡಿಯಪ್ಪನವರ ಅವರ  ಪುತ್ರಿ.ವಿದ್ಯಾರ್ಥಿನಿ ಸಿಂಚನಾ ಸಾಧನೆಗೆ ಬಿದರಕುಂದಿ ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ ಸೇವನೆಯಿಂದ ದೂರ ಇರಬೇಕು ಎಂದು ವಿಬಿಸಿ ಹೈಸ್ಕೂಲ್‌ನ ಮುಖ್ಯಗುರು ವಿ.ಜಿ.ರಾಮಚಂದ್ರಯ್ಯ ಹೇಳಿದರು. ಪಟ್ಟಣದ ಕೆಬಿಎಂಪಿಎಸ್ ಶಾಲೆಯಲ್ಲಿ ಶುಕ್ರವಾರ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾವು ದೈನಂದಿನ ಬದುಕಿನಲ್ಲಿ ಸೇವಿಸುವ ಆಹಾರದಲ್ಲೂ ವಿಜ್ಞಾನ ಅಡಗಿದೆ.ಪ್ರತಿ ವಸ್ತುಗಳಲ್ಲೂ ವೈಜ್ಞಾನಿಕ ಅಂಶಗಳನ್ನು ಒಳಗೊಂಡಿದ್ದು ಯಾವ ಪದಾರ್ಥ ನಮ್ಮ ದೇಹಕ್ಕೆ ಅತ್ಯಂತ ಸೂಕ್ತ ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.