Heart attack: Heart attack during press conference for CM.. Man died on the spot in bengaluru press club

Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಬೆಂಗಳೂರು: ಮೂಡಾ ಹಗರದ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಹೃದಯಾಘಾತ (Heart attack) ಸಂಭವಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪ್ರೆಸ್​ ಕ್ಲಬ್​​ನಲ್ಲಿ ನಡೆದಿದೆ.

ರವಿಚಂದ್ರ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕುರುಬ ಸಮುದಾಯದಿಂದ ಸುದ್ದಿಗೋಷ್ಠಿ ವೇಳೆ ಈ ಅನಾಹುತ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada

ಮೃತ ವ್ಯಕ್ತಿಯೂ ಕೋಲಾರದ ಕುರುಬ ಸಂಘದ ಮುಖಂಡರಾಗಿದ್ದರು ಎನ್ನಲಾಗಿದೆ. ಇಂದು ನಡೆಯುತ್ತಿದ್ದ ಪ್ರೆಸ್ ಕ್ಲಬ್​ನಲ್ಲಿ ಈ ಘಟನೆ ಸಂಭವಿಸಿದೆ.

ಕೂಡಲೇ ಹೃದಯಾಘಾತಕ್ಕೀಡಾದ (Heart attack) ರವಿಚಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ರವಿಚಂದ್ರ ಮೃತಪಟ್ಟಿದ್ದಾರೆ.

ಸಿಎಂ ಸಂತಾಪ

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳು ಮತ್ತು ಅಲ್ಪ ಸಂಖ್ಯಾತರ ಸಂಘದ ವತಿಯಿಂದ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ‌ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಸಂಘದ ಸದಸ್ಯ, ನಮ್ಮ ಪಕ್ಷದ ಕಾರ್ಯಕರ್ತ ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯಿತು.

ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿನ ಈ ಹೋರಾಟದಲ್ಲಿ ನಮ್ಮ ಜೊತೆಯಾಗಿದ್ದ ರವಿಚಂದ್ರನ್ ಅವರ ನಿಧನ ಅತೀವು ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಇದನ್ನೂ ಓದಿ: Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

ಅವರ ದುಃಖತಪ್ತ ಕುಟುಂಬಸ್ಥರು ಮತ್ತು ಬಂಧುಬಳಗದ ಜೊತೆ ನಾನಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

ನವದೆಹಲಿ: ಯಾವುದೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದಾಗ ಅದರ ನಕಲು ಮಾಡಿ ಮಾರಾಟ ಮಾಡುವುದು ಅಪರಾಧ ಜಗತ್ತಿನಲ್ಲಿ  ಹೊಸ ಬೆಳವಣಿಗೆ ಅಲ್ಲ. ಇಂಥದ್ದೇ ಆತಂಕಕಾರಿ ಬೆಳವಣಿಗೆಯೊಂದಲ್ಲಿ ಸಿಮೆಂಟ್‌ನಲ್ಲಿ ಬೆಳ್ಳುಳ್ಳಿ ಪ್ರತಿಕೃತಿ ಮಾಡಿ, ಅದನ್ನು ನಿಜವಾದ ಬೆಳ್ಳುಳ್ಳಿ ಜೊತೆ ಮಾರಾಟ ಮಾಡುತ್ತಿರುವ ಪ್ರಕರಣ ಮಹಾರಾಷ್ಟ್ರದ ಹಲವು ಕಡೆ ಬೆಳಕಿಗೆ ಬಂದಿದೆ.

ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆ.ಜಿ.ಗೆ 300-350 ರು. ತಲುಪಿರುವ ಬೆನ್ನಲ್ಲೇ, ಮಹಾರಾಷ್ಟ್ರದ ಮಾರುಕಟ್ಟೆಗಳಲ್ಲಿ ಸಿಮೆಂಟ್ ಬೆಳ್ಳುಳ್ಳಿ ಮಾರಾಟದ ಪ್ರಕರಣಗಳು ಪತ್ತೆಯಾಗಿವೆ. ಆಕೋಲಾದಲ್ಲಿ ಬಿಕರಿಗೆ ಇಟ್ಟಿದ್ದ ನೈಜ ಬೆಳ್ಳುಳ್ಳಿ ನಡುವೆ ನೈಜ ಬೆಳ್ಳುಳ್ಳಿಯನ್ನೇ ಹೋಲುವ ಸಿಮೆಂಟ್ ಬೆಳ್ಳುಳ್ಳಿ ಪತ್ತೆಯಾಗಿದೆ. ಸಿಮೆಂಟ್ ಬಳಸಿ ಪ್ರತಿಮೆಗಳನ್ನು ನಿರ್ಮಿಸುವಂತೆ ಬೆಳ್ಳುಳ್ಳಿ ಪ್ರತಿಕೃತಿ ಮಾಡಿ ಅದಕ್ಕೆ ಬಿಳಿಯ ಬಣ್ಣ ಹಚ್ಚಲಾಗಿದೆ.

ಸುಭಾಷ್ ಪಾಟೀಲ್ ಎಂಬ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ಮಾರುಕಟ್ಟೆಯಿಂದ 250 ಗ್ರಾಂ ಬೆಳ್ಳುಳ್ಳಿ ಖರೀದಿಸಿ ಮನೆಗೆ ತಂದಿದ್ದರು. ಮನೆಯಲ್ಲಿ ಬೆಳ್ಳುಳ್ಳಿ ಸಿಪ್ಪೆ ಬಿಡಿಸಲು ಹೋದಾಗ ಆಗಿಲ್ಲ. ಬಳಿಕ ಚಾಕುವಿನಿಂದ ಕತ್ತರಿಸಿದಾಗ ಒಳಗೆ ಸಿಮೆಂಟ್ ಕಂಡುಬಂದಿದೆ. ಇದೇ ರೀತಿ ಹಲವು ಗ್ರಾಹಕರು ತಾವು ವಂಚನೆಗೆ ಒಳಗಾಗಿದ್ದರ ಕುರಿತು ಮಾಹಿತಿ ಹಂಚಿ ಕೊಂಡಿದ್ದಾರೆ.

ನೈಜ ಬೆಳ್ಳುಳ್ಳಿ ಜೊತೆಗೆ ಈ ನಕಲಿ ಬೆಳ್ಳುಳ್ಳಿ ಸೇರಿಸುವಮೂಲಕ ತೂಕ ಹೆಚ್ಚಿಸುವ ತಂತ್ರಕ್ಕೆ ವ್ಯಾಪಾರಿಗಳು ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಖರೀದಿಸಿದ ಹಲವು ವ್ಯಕ್ತಿಗಳು ನಕಲಿ ಬೆಳ್ಳುಳ್ಳಿ ಒಡೆದಾಗ ಒಳಗಿನಿಂದ ಸಿಮೆಂಟ್ ಪುಡಿ ಉದುರುತ್ತದೆ.

Latest News

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ಮುದ್ದೇಬಿಹಾಳ : ನನ್ನ ಕನಸು ಸೈನ್ಸ್ ಕಾಲೇಜು ಆರಂಭಿಸಬೇಕು ಎಂಬುದಿತ್ತು.ದುಡ್ಡು ಮಾಡುವುದಕ್ಕಾಗಿ ಸೈನ್ಸ್ ಕಾಲೇಜು

ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಮುದ್ದೇಬಿಹಾಳ : ಪತ್ನಿ ತವರು ಮನೆಯಲ್ಲಿದ್ದಿರುವುದನ್ನು ಸಹಿಸದೇ ಆಕೆಗೆ ಮೇಲೆ ಹೊಲಿಗೆ ಮಷಿನ್ ಎತ್ತಿ

ಮಾಜಿ ಶಾಸಕ ನಡಹಳ್ಳಿಗೆ ಶಾಸಕ ನಾಡಗೌಡ ಬುದ್ಧಿಮಾತು: ಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದವರಿಗೆ ಸ್ವಾಭಿಮಾನಿ ಮತದಾರರಿಂದ ತಕ್ಕಪಾಠ-ನಾಡಗೌಡ

ಮಾಜಿ ಶಾಸಕ ನಡಹಳ್ಳಿಗೆ ಶಾಸಕ ನಾಡಗೌಡ ಬುದ್ಧಿಮಾತು: ಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದವರಿಗೆ ಸ್ವಾಭಿಮಾನಿ ಮತದಾರರಿಂದ ತಕ್ಕಪಾಠ-ನಾಡಗೌಡ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ 2.50 ಲಕ್ಷ ಜನರು ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.ಪ್ರತಿ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದ ಶ್ರಮಿಕರು, ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಆಸರೆಯಾಗುವ ಕಾರ್ಯ ಮಾಡುವ ಮೂಲಕ

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನೇಬಗೇರಿ ಗ್ರಾಮದ ಬಳಿ ಶುಕ್ರವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಯರಗಲ್ ಗ್ರಾಮದ ರೇವಣಸಿದ್ದಪ್ಪ ಶಿವಪ್ಪ ಬೆಣಕಣ್ಣವರ(36)ಎಂದು ಗುರುತಿಸಲಾಗಿದೆ. ಮುದ್ದೇಬಿಹಾಳದಿಂದ ಹುನಗುಂದ ಕಡೆಗೆ ಬೈಕ್ ನಂ.ಕೆಎ-33, ಇಇ-6348ರ ಸವಾರ ಅತೀ ವೇಗವಾಗಿ ನಿರ್ಲಕ್ಷದಿಂದ ಬೈಕ್ ಚಲಾಯಿಸಿಕೊಂಡು ಹೊರಟು ರಸ್ತೆ ಕ್ರಾಸ್ ಮಾಡುತ್ತಿದ್ದ ರೇವಣಸಿದ್ದಪ್ಪನಿಗೆ ಡಿಕ್ಕಿ ಹೊಡೆಸಿದ್ದಾನೆ.ಇದರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ:                    ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ: ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಮುದ್ದೇಬಿಹಾಳ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಶಾಲೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಫೆ.14 ರಂದು ಮದ್ಯಾಹ್ನ 3.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಮಹಾಂತಗೌಡ ಬಿರಾದಾರ ತಿಳಿಸಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆಳಂದ,ಜಾಲವಾದ,ನAದವಾಡಗಿ ಹಿರೇಮಠದ ಮಹಾಂತಲಿAಗ ಶಿವಾಚಾರ್ಯರು, ನಂದವಾಡಗಿ ಹಿರೇಮಠದ ಚನ್ನಬಸಯ ಶಿವಾಚಾರ್ಯರು ವಹಿಸುವರು.ಬಿದರಕುಂದಿ-ಕಪ್ಪತಗುಡ್ಡ ಶಿವಯೋಗಾಶ್ರಮದ