Heart attack: Heart attack during press conference for CM.. Man died on the spot in bengaluru press club

Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಬೆಂಗಳೂರು: ಮೂಡಾ ಹಗರದ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಹೃದಯಾಘಾತ (Heart attack) ಸಂಭವಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪ್ರೆಸ್​ ಕ್ಲಬ್​​ನಲ್ಲಿ ನಡೆದಿದೆ.

ರವಿಚಂದ್ರ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕುರುಬ ಸಮುದಾಯದಿಂದ ಸುದ್ದಿಗೋಷ್ಠಿ ವೇಳೆ ಈ ಅನಾಹುತ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada

ಮೃತ ವ್ಯಕ್ತಿಯೂ ಕೋಲಾರದ ಕುರುಬ ಸಂಘದ ಮುಖಂಡರಾಗಿದ್ದರು ಎನ್ನಲಾಗಿದೆ. ಇಂದು ನಡೆಯುತ್ತಿದ್ದ ಪ್ರೆಸ್ ಕ್ಲಬ್​ನಲ್ಲಿ ಈ ಘಟನೆ ಸಂಭವಿಸಿದೆ.

ಕೂಡಲೇ ಹೃದಯಾಘಾತಕ್ಕೀಡಾದ (Heart attack) ರವಿಚಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ರವಿಚಂದ್ರ ಮೃತಪಟ್ಟಿದ್ದಾರೆ.

ಸಿಎಂ ಸಂತಾಪ

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳು ಮತ್ತು ಅಲ್ಪ ಸಂಖ್ಯಾತರ ಸಂಘದ ವತಿಯಿಂದ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ‌ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಸಂಘದ ಸದಸ್ಯ, ನಮ್ಮ ಪಕ್ಷದ ಕಾರ್ಯಕರ್ತ ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯಿತು.

ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿನ ಈ ಹೋರಾಟದಲ್ಲಿ ನಮ್ಮ ಜೊತೆಯಾಗಿದ್ದ ರವಿಚಂದ್ರನ್ ಅವರ ನಿಧನ ಅತೀವು ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಇದನ್ನೂ ಓದಿ: Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

ಅವರ ದುಃಖತಪ್ತ ಕುಟುಂಬಸ್ಥರು ಮತ್ತು ಬಂಧುಬಳಗದ ಜೊತೆ ನಾನಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

ನವದೆಹಲಿ: ಯಾವುದೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದಾಗ ಅದರ ನಕಲು ಮಾಡಿ ಮಾರಾಟ ಮಾಡುವುದು ಅಪರಾಧ ಜಗತ್ತಿನಲ್ಲಿ  ಹೊಸ ಬೆಳವಣಿಗೆ ಅಲ್ಲ. ಇಂಥದ್ದೇ ಆತಂಕಕಾರಿ ಬೆಳವಣಿಗೆಯೊಂದಲ್ಲಿ ಸಿಮೆಂಟ್‌ನಲ್ಲಿ ಬೆಳ್ಳುಳ್ಳಿ ಪ್ರತಿಕೃತಿ ಮಾಡಿ, ಅದನ್ನು ನಿಜವಾದ ಬೆಳ್ಳುಳ್ಳಿ ಜೊತೆ ಮಾರಾಟ ಮಾಡುತ್ತಿರುವ ಪ್ರಕರಣ ಮಹಾರಾಷ್ಟ್ರದ ಹಲವು ಕಡೆ ಬೆಳಕಿಗೆ ಬಂದಿದೆ.

ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆ.ಜಿ.ಗೆ 300-350 ರು. ತಲುಪಿರುವ ಬೆನ್ನಲ್ಲೇ, ಮಹಾರಾಷ್ಟ್ರದ ಮಾರುಕಟ್ಟೆಗಳಲ್ಲಿ ಸಿಮೆಂಟ್ ಬೆಳ್ಳುಳ್ಳಿ ಮಾರಾಟದ ಪ್ರಕರಣಗಳು ಪತ್ತೆಯಾಗಿವೆ. ಆಕೋಲಾದಲ್ಲಿ ಬಿಕರಿಗೆ ಇಟ್ಟಿದ್ದ ನೈಜ ಬೆಳ್ಳುಳ್ಳಿ ನಡುವೆ ನೈಜ ಬೆಳ್ಳುಳ್ಳಿಯನ್ನೇ ಹೋಲುವ ಸಿಮೆಂಟ್ ಬೆಳ್ಳುಳ್ಳಿ ಪತ್ತೆಯಾಗಿದೆ. ಸಿಮೆಂಟ್ ಬಳಸಿ ಪ್ರತಿಮೆಗಳನ್ನು ನಿರ್ಮಿಸುವಂತೆ ಬೆಳ್ಳುಳ್ಳಿ ಪ್ರತಿಕೃತಿ ಮಾಡಿ ಅದಕ್ಕೆ ಬಿಳಿಯ ಬಣ್ಣ ಹಚ್ಚಲಾಗಿದೆ.

ಸುಭಾಷ್ ಪಾಟೀಲ್ ಎಂಬ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ಮಾರುಕಟ್ಟೆಯಿಂದ 250 ಗ್ರಾಂ ಬೆಳ್ಳುಳ್ಳಿ ಖರೀದಿಸಿ ಮನೆಗೆ ತಂದಿದ್ದರು. ಮನೆಯಲ್ಲಿ ಬೆಳ್ಳುಳ್ಳಿ ಸಿಪ್ಪೆ ಬಿಡಿಸಲು ಹೋದಾಗ ಆಗಿಲ್ಲ. ಬಳಿಕ ಚಾಕುವಿನಿಂದ ಕತ್ತರಿಸಿದಾಗ ಒಳಗೆ ಸಿಮೆಂಟ್ ಕಂಡುಬಂದಿದೆ. ಇದೇ ರೀತಿ ಹಲವು ಗ್ರಾಹಕರು ತಾವು ವಂಚನೆಗೆ ಒಳಗಾಗಿದ್ದರ ಕುರಿತು ಮಾಹಿತಿ ಹಂಚಿ ಕೊಂಡಿದ್ದಾರೆ.

ನೈಜ ಬೆಳ್ಳುಳ್ಳಿ ಜೊತೆಗೆ ಈ ನಕಲಿ ಬೆಳ್ಳುಳ್ಳಿ ಸೇರಿಸುವಮೂಲಕ ತೂಕ ಹೆಚ್ಚಿಸುವ ತಂತ್ರಕ್ಕೆ ವ್ಯಾಪಾರಿಗಳು ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಖರೀದಿಸಿದ ಹಲವು ವ್ಯಕ್ತಿಗಳು ನಕಲಿ ಬೆಳ್ಳುಳ್ಳಿ ಒಡೆದಾಗ ಒಳಗಿನಿಂದ ಸಿಮೆಂಟ್ ಪುಡಿ ಉದುರುತ್ತದೆ.

Latest News

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ:                                                                                                                                                           ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

ಮುದ್ದೇಬಿಹಾಳ : ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 50 ಸಾವಿರ ಕೋಟಿ ರೂ.ವೆಚ್ಚ ಮಾಡುತ್ತಿದೆ.ಗ್ಯಾರಂಟಿ

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೆ ಇಲ್ಲ. ಅದು ಹೈಕಮಾಂಡ್ ನಿರ್ಧಾರ.ಈ ವಿಷಯದ

TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಮಾರನಾಳ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮಾರನಾಳದಿಂದ ಶ್ರೀ ಘತ್ತರಗಿ ಭಾಗ್ಯವಂತಿಯವರೆಗೆ ಪಾದಯಾತ್ರೆಯನ್ನು ಗ್ರಾಮದೇವತೆ ಶ್ರೀ ಗದ್ಯಮದೇವಿ ದೇವಸ್ಥಾನದಿಂದ ಪ್ರಾರಂಭಿಸಿದರು. ಪ್ರತಿ ವರ್ಷದಂತೆ ಈ ವರ್ಷ ಸೇರಿ 23ನೇ ವರ್ಷ ಪಾದಯಾತ್ರೆ ಇದಾಗಿದ್ದು ಈ ಪಾದಯಾತ್ರೆಯಲ್ಲಿ ಮಾರನಾಳ ಊರಿನ ಗುರು ಹಿರಿಯರು ಯುವಕರು ಹಾಗೂ ಮಹಿಳೆಯರು ಸೇರಿ ಪಾದಯಾತ್ರೆ ಮಾಡುತ್ತಿದ್ದಾರೆ. ಈ ಪಾದಯಾತ್ರೆಯು ಸರಿ-ಸುಮಾರು 120 ಕಿಲೋ ಮೀಟರ್ ನಷ್ಟು ದೂರವಿದ್ಧಿ ಆದರೂ ಸಹಾ ಮಳೆ, ಗಾಳಿ, ಚಳ್ಳಿ,

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ ಕಾರ್ಯಕ್ಕೆ ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಪಾಟೀಲ ಚಾಲನೆ ನೀಡಿದರು. ಬಾಯ್ಲರ್ ಪ್ರದೀಪನಕ್ಕೂ ಮುನ್ನ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು.ಕಾರ್ಖಾನೆಯ ನಿರ್ದೇಶಕರಾದ ಎಚ್.ಎಲ್.ಪಾಟೀಲ್,ರಾಹುಲಗೌಡ ಪಾಟೀಲ, ಶ್ರೀನಿವಾಸ ಅರಕೇರಿ,ಅಧಿಕ ಪಾಟೀಲ, ಪ್ರಜ್ವಲ ಪಾಟೀಲ,ನಾಲತವಾಡ ಪ.ಪಂ ಸದಸ್ಯ ಪೃಥ್ವಿ ನಾಡಗೌಡ, ಅಪ್ಪು ನಾಡಗೌಡ, ಮಲ್ಲಿಕಾರ್ಜುನ ನಾಡಗೌಡ ಇದ್ದರು.