Accident news Accident board on road

Heart attack: ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವು..!

Heart attack: ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವು..!

Ad
Ad

Ad
Ad

ಮಂಗಳೂರು: ರಿಕ್ಷಾ ಚಲಾಯಿಸುತ್ತಿದ್ದ ವೇಳೆಯೇ ಚಾಲಕ ಹೃದಯಾಘಾತದಿಂದ (Heart attack) ಸಾವನ್ನಪ್ಪಿದ್ದಾನೆ. ಈ ವೇಳೆ ಚಾಲಕನಿಲ್ಲದೆ ಮುಂದೆ ಚಲಿಸಿದ ರಿಕ್ಷಾವು ಆಟೋ ಪಾರ್ಕಿನ ಮತ್ತೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ನಿಂತ ಪರಿಣಾಮ ಪ್ರಯಾಣಿಕ ಮಹಿಳೆಯರಿಬ್ಬರು ಪವಾಡ ಸದೃಶ ಪಾರಾದ ಘಟನೆ ಕೋಟೆಕಾರಿನಲ್ಲಿ ಸಂಭವಿಸಿದೆ.

ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44) ಹೃದಯಾಘಾತದಿಂದ (Heart attack) ಮೃತಪಟ್ಟ ರಿಕ್ಷಾ ಚಾಲಕ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಮಜೀದ್ ಮಂಗಳವಾರ ಮಧ್ಯಾಹ್ನ 12 ಗಂಟೆಯ ವೇಳೆ ಧರ್ಮನಗರದಿಂದ ಸಂಬಂಧಿಕರಾದ ಮಹಿಳೆಯರಿಬ್ಬರನ್ನು ತನ್ನ ಆಟೋ ರಿಕ್ಷಾದಲ್ಲಿ ಕುಳ್ಳಿರಿಸಿ ಒಂಭತ್ತುಕೆರೆ, ಸೋಮೇಶ್ವರ ಮಾರ್ಗವಾಗಿ ಕೋಟೆಕಾರು ಬೀರಿಗೆ ತೆರಳುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.

ಚಾಲಕನಿಲ್ಲದೆ ಮುಂದೆ ಚಲಿಸಿದ ರಿಕ್ಷಾವು ಅದೃಷ್ಟವಶಾತ್ ಅಲ್ಲೇ ಇದ್ದ ಆಟೋ ಪಾರ್ಕಿನಲ್ಲಿ ನಿಂತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ನಿಂತಿದೆ ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ. ಪ್ರಯಾಣಿಕ ಮಹಿಳೆಯರಲ್ಲಿ ಓರ್ವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಕೆಯನ್ನು ವೈದ್ಯರ ಕ್ಲಿನಿಕ್ ಗೆ ಬಿಡಲು ಮಜೀದ್ ತೆರಳಿದ್ದರು ಎನ್ನಲಾಗಿದೆ.

ಇದನ್ನೂ‌ ಓದಿ: Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

ಮೃತ ಮಜೀದ್ ಅವರು ಶ್ರಮ ಜೀವಿಯಾಗಿದ್ದು, ಹಗಲಿರುಳು ರಿಕ್ಷಾ ಚಲಾಯಿಸಿ ಸಂಪಾದನೆ ಮಾಡಿ ಕುಟುಂಬಕ್ಕೆ ಆಧಾರವಾಗಿದ್ದರು. ಮೃತರು ಪತ್ನಿ, ಒಂದು ಗಂಡು, ಮತ್ತೊಂದು ಹೆಣ್ಣು ಮಗುವನ್ನು ಅಗಲಿದ್ದಾರೆ.

ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500