Accident news Accident board on road

Heart attack: ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವು..!

Heart attack: ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವು..!

ಮಂಗಳೂರು: ರಿಕ್ಷಾ ಚಲಾಯಿಸುತ್ತಿದ್ದ ವೇಳೆಯೇ ಚಾಲಕ ಹೃದಯಾಘಾತದಿಂದ (Heart attack) ಸಾವನ್ನಪ್ಪಿದ್ದಾನೆ. ಈ ವೇಳೆ ಚಾಲಕನಿಲ್ಲದೆ ಮುಂದೆ ಚಲಿಸಿದ ರಿಕ್ಷಾವು ಆಟೋ ಪಾರ್ಕಿನ ಮತ್ತೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ನಿಂತ ಪರಿಣಾಮ ಪ್ರಯಾಣಿಕ ಮಹಿಳೆಯರಿಬ್ಬರು ಪವಾಡ ಸದೃಶ ಪಾರಾದ ಘಟನೆ ಕೋಟೆಕಾರಿನಲ್ಲಿ ಸಂಭವಿಸಿದೆ.

ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44) ಹೃದಯಾಘಾತದಿಂದ (Heart attack) ಮೃತಪಟ್ಟ ರಿಕ್ಷಾ ಚಾಲಕ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಮಜೀದ್ ಮಂಗಳವಾರ ಮಧ್ಯಾಹ್ನ 12 ಗಂಟೆಯ ವೇಳೆ ಧರ್ಮನಗರದಿಂದ ಸಂಬಂಧಿಕರಾದ ಮಹಿಳೆಯರಿಬ್ಬರನ್ನು ತನ್ನ ಆಟೋ ರಿಕ್ಷಾದಲ್ಲಿ ಕುಳ್ಳಿರಿಸಿ ಒಂಭತ್ತುಕೆರೆ, ಸೋಮೇಶ್ವರ ಮಾರ್ಗವಾಗಿ ಕೋಟೆಕಾರು ಬೀರಿಗೆ ತೆರಳುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.

ಚಾಲಕನಿಲ್ಲದೆ ಮುಂದೆ ಚಲಿಸಿದ ರಿಕ್ಷಾವು ಅದೃಷ್ಟವಶಾತ್ ಅಲ್ಲೇ ಇದ್ದ ಆಟೋ ಪಾರ್ಕಿನಲ್ಲಿ ನಿಂತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ನಿಂತಿದೆ ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ. ಪ್ರಯಾಣಿಕ ಮಹಿಳೆಯರಲ್ಲಿ ಓರ್ವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಕೆಯನ್ನು ವೈದ್ಯರ ಕ್ಲಿನಿಕ್ ಗೆ ಬಿಡಲು ಮಜೀದ್ ತೆರಳಿದ್ದರು ಎನ್ನಲಾಗಿದೆ.

ಇದನ್ನೂ‌ ಓದಿ: Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

ಮೃತ ಮಜೀದ್ ಅವರು ಶ್ರಮ ಜೀವಿಯಾಗಿದ್ದು, ಹಗಲಿರುಳು ರಿಕ್ಷಾ ಚಲಾಯಿಸಿ ಸಂಪಾದನೆ ಮಾಡಿ ಕುಟುಂಬಕ್ಕೆ ಆಧಾರವಾಗಿದ್ದರು. ಮೃತರು ಪತ್ನಿ, ಒಂದು ಗಂಡು, ಮತ್ತೊಂದು ಹೆಣ್ಣು ಮಗುವನ್ನು ಅಗಲಿದ್ದಾರೆ.

ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ