Accident news Accident board on road

Heart attack: ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವು..!

Heart attack: ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವು..!

ಮಂಗಳೂರು: ರಿಕ್ಷಾ ಚಲಾಯಿಸುತ್ತಿದ್ದ ವೇಳೆಯೇ ಚಾಲಕ ಹೃದಯಾಘಾತದಿಂದ (Heart attack) ಸಾವನ್ನಪ್ಪಿದ್ದಾನೆ. ಈ ವೇಳೆ ಚಾಲಕನಿಲ್ಲದೆ ಮುಂದೆ ಚಲಿಸಿದ ರಿಕ್ಷಾವು ಆಟೋ ಪಾರ್ಕಿನ ಮತ್ತೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ನಿಂತ ಪರಿಣಾಮ ಪ್ರಯಾಣಿಕ ಮಹಿಳೆಯರಿಬ್ಬರು ಪವಾಡ ಸದೃಶ ಪಾರಾದ ಘಟನೆ ಕೋಟೆಕಾರಿನಲ್ಲಿ ಸಂಭವಿಸಿದೆ.

ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44) ಹೃದಯಾಘಾತದಿಂದ (Heart attack) ಮೃತಪಟ್ಟ ರಿಕ್ಷಾ ಚಾಲಕ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಮಜೀದ್ ಮಂಗಳವಾರ ಮಧ್ಯಾಹ್ನ 12 ಗಂಟೆಯ ವೇಳೆ ಧರ್ಮನಗರದಿಂದ ಸಂಬಂಧಿಕರಾದ ಮಹಿಳೆಯರಿಬ್ಬರನ್ನು ತನ್ನ ಆಟೋ ರಿಕ್ಷಾದಲ್ಲಿ ಕುಳ್ಳಿರಿಸಿ ಒಂಭತ್ತುಕೆರೆ, ಸೋಮೇಶ್ವರ ಮಾರ್ಗವಾಗಿ ಕೋಟೆಕಾರು ಬೀರಿಗೆ ತೆರಳುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.

ಚಾಲಕನಿಲ್ಲದೆ ಮುಂದೆ ಚಲಿಸಿದ ರಿಕ್ಷಾವು ಅದೃಷ್ಟವಶಾತ್ ಅಲ್ಲೇ ಇದ್ದ ಆಟೋ ಪಾರ್ಕಿನಲ್ಲಿ ನಿಂತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ನಿಂತಿದೆ ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ. ಪ್ರಯಾಣಿಕ ಮಹಿಳೆಯರಲ್ಲಿ ಓರ್ವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಕೆಯನ್ನು ವೈದ್ಯರ ಕ್ಲಿನಿಕ್ ಗೆ ಬಿಡಲು ಮಜೀದ್ ತೆರಳಿದ್ದರು ಎನ್ನಲಾಗಿದೆ.

ಇದನ್ನೂ‌ ಓದಿ: Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

ಮೃತ ಮಜೀದ್ ಅವರು ಶ್ರಮ ಜೀವಿಯಾಗಿದ್ದು, ಹಗಲಿರುಳು ರಿಕ್ಷಾ ಚಲಾಯಿಸಿ ಸಂಪಾದನೆ ಮಾಡಿ ಕುಟುಂಬಕ್ಕೆ ಆಧಾರವಾಗಿದ್ದರು. ಮೃತರು ಪತ್ನಿ, ಒಂದು ಗಂಡು, ಮತ್ತೊಂದು ಹೆಣ್ಣು ಮಗುವನ್ನು ಅಗಲಿದ್ದಾರೆ.

ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600