Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ

Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ









ಚಿಕ್ಕೋಡಿ, (ಆಗಸ್ಟ್.11); ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ ಕೊಥಳಿ ಗ್ರಾಮದ ಆಚಾರ್ಯ ರತ್ನ ಶ್ರೀ 108 ದೇಶಭೂಷಣ ಮಹಾರಾಜರು ಸಾಕಿದ್ದ ಕುಪ್ಪಾನವಾಡಿ ಆಶ್ರಮದ ಆನೆ ಉಷಾರಾಣಿ ಶನಿವಾರ ಹೃದಯಾಘಾತದಿಂದ ನಿಧನಹೊಂದಿದೆ.

ಚಿಕ್ಕೋಡಿ ತಾಲೂಕಿನ ಕೊಥಳಿಯ ಕುಪ್ಪಾನವಾಡಿ ಶಾಂತಿಗಿರಿ ಟ್ರಸ್ಟ್ ಮತ್ತು ಬೇಡಕಿಹಾಳ ಗ್ರಾಮದ ಉಷಾರಾಣಿ ಹೆಸರಿನ ಆನೆ ತನ್ನ 51 ನೇ ವಯಸ್ಸಿಗೆ ನಿಧನಹೊಂದಿದೆ. ಈ ಆಶ್ರಮಕ್ಕೆ 1971‌ ರಲ್ಲಿ ಶಿವಮೊಗ್ಗದ ಸಕ್ರೆಬೈಲ್ ನಿಂದ ಕೇವಲ 6 ನೇ ವಯಸ್ಸಿನಲ್ಲಿ ಆನೆಯನ್ನು ತರಲಾಗಿತ್ತು.‌ ಬೇಡಕಿಹಾಳ ಗ್ರಾಮದ ಸಂದೀಪ್ ಪೊಲೀಸ್ ಪಾಟೀಲ್ ಎಂಬುವವರು ತೋಟದಲ್ಲಿ ವಾಸವಿತ್ತು.

ಪ್ರಮುಖವಾಗಿ ಉಷಾರಾಣಿ ಆಣೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಭಾಗದ ಅನೇಕ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿತ್ತು. ಬೇಡಕಿಹಾಳದ ಶ್ರೀ ಕಲ್ಯಾಣ ಸಿದ್ಧೇಶ್ವರನ ಐತಿಹಾಸಿಕ ದಸರಾ ಹಬ್ಬ, ದೀಪಾವಳಿ ಮತ್ತು ಧೂಳವಡ ಪಲ್ಲಕಿ ಆಚರಣೆ ಸೇರಿದಂತೆ ಜೈನ ಸಮುದಾಯದ ಪಂಚಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು.

ಕೇವಲ ಧಾರ್ಮಿಕ‌ ಕಾರ್ಯಕ್ರಮ ಮಾತ್ರವಲ್ಲದೆ ಚಲನಚಿತ್ರ ಹಾಗೂ ಧಾರಾವಾಹಿಯಲ್ಲಿಯೂ ಉಷಾರಾಣಿ ಗುರುತಿಸಿಕೊಂಡಿತ್ತು. ಸ್ವಾಮಿ ಸಮರ್ಥ ಚಲನಚಿತ್ರ, ಜಾನತಾ ರಾಜಾ ಮಹಾನಾಟ್ಯ, ರಾಜಶ್ರೀ ಛತ್ರಪತಿ ಶಾಹು ಮಹಾರಾಜರ ಧಾರಾವಾಹಿಯಲ್ಲಿ ಇದರ ಛಾಪು ಮೂಡಿಸಿತ್ತು.

ಆನೆಯ ನಿಧನಕ್ಕೆ ಶಾಂತಿಗಿರಿ ಟೆಸ್ಟಿನ ಶ್ರೀ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಹಾಗೂ ಮಾವುತ ಬಾಸು ಲಕ್ಷ್ಮೇಶ್ವರ ಸೇರಿದಂತೆ ಭಕ್ತರು ಅಂತಿಮ‌ ನಮನ ಸಲ್ಲಿಸಿದರು.

ಸಂಜೆ 6 ಗಂಟೆಯ ನಂತರ ಕ್ರೇನ್ ಮೂಲಕ ಅರಣ್ಯ ಇಲಾಖೆಯ ವಾಹನದಲ್ಲಿ ಪಾರ್ಥಿವ ಶರೀರವನ್ನು ಹಾಕಿ ಬೆಡಕಿಹಾಳ ವೃತ್ತದಿಂದ ಹಳೆ ಬಸ್ ನಿಲ್ದಾಣದವರೆಗೆ ಅಂತಿಮ ಯಾತ್ರೆ ನಡೆಸಿ ಕೋಥಳಿ ಶಾಂತಿಗಿರಿಯ ಬೆಟ್ಟಕ್ಕೆ ಪಾರ್ಥಿವ ಶರೀರವನ್ನು ಸ್ಥಳಾಂತರಿಸಲಾಯಿತು.

ಚಿಕ್ಕೋಡಿ ಅರಣ್ಯ ಇಲಾಖೆ ಅಧಿಕಾರಿಗಳು ಮೃತ ಆನೆಯ ಮರನೋತ್ತರ ಪರೀಕ್ಷೆ ನಡಿಸಿದ ನಂತರ ಅಂತಿ ವಿಧಿ ವಿದಾನಗಳ ಮೂಲಕ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

Latest News

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಬೆಂಗಳೂರು: ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಖುಷಿಯಲ್ಲಿ ಪಯಣ ಬೆಳೆಸಿದ ಕುಟುಂಬಕ್ಕೆ ಇಂದು ಬೆಳಗ್ಗಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಶ್ಚಿತಾರ್ಥ ಮುಗಿಸಿಕೊಂಡು ಬಾಗಲಕೋಟ ಜಿಲ್ಲೆಯ ಕುಳಗೇರಿ ಕ್ರಾಸ್ ಗೆ ತೆರಳುತ್ತಿರುಬ ಕುಟುಂಬ ಅಪಘಾತಕ್ಕೆ ಬಲಿಯಾಗಿದೆ. ಶ್ವೇತಾ ಎಬ ಯುವತಿ ಎರಡು ದಿನಗಳ‌ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಹೊಸ ಬಾಳ‌ ಸಂಗಾತಿ ಹಾಗೂ ಹೊಸ ಜೀವನದ ಕನಸಿನೊಂದಿಗೆ ಕಾರನ್ನೇರಿ ಪಯಣ ಬೆಳೆಸಿದ್ದಳು. ವಿಧಿಯ ಮುಂದೆ, ಅಪಘಾತದಲ್ಲಿ ಕನಸು ನುಚ್ಚು ನೂರಾಗಿದೆ. ಎರಡು ದಿನಗಳ ಹಿಂದೆ ಸಾಗರ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ