Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ

Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ









ಚಿಕ್ಕೋಡಿ, (ಆಗಸ್ಟ್.11); ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ ಕೊಥಳಿ ಗ್ರಾಮದ ಆಚಾರ್ಯ ರತ್ನ ಶ್ರೀ 108 ದೇಶಭೂಷಣ ಮಹಾರಾಜರು ಸಾಕಿದ್ದ ಕುಪ್ಪಾನವಾಡಿ ಆಶ್ರಮದ ಆನೆ ಉಷಾರಾಣಿ ಶನಿವಾರ ಹೃದಯಾಘಾತದಿಂದ ನಿಧನಹೊಂದಿದೆ.

ಚಿಕ್ಕೋಡಿ ತಾಲೂಕಿನ ಕೊಥಳಿಯ ಕುಪ್ಪಾನವಾಡಿ ಶಾಂತಿಗಿರಿ ಟ್ರಸ್ಟ್ ಮತ್ತು ಬೇಡಕಿಹಾಳ ಗ್ರಾಮದ ಉಷಾರಾಣಿ ಹೆಸರಿನ ಆನೆ ತನ್ನ 51 ನೇ ವಯಸ್ಸಿಗೆ ನಿಧನಹೊಂದಿದೆ. ಈ ಆಶ್ರಮಕ್ಕೆ 1971‌ ರಲ್ಲಿ ಶಿವಮೊಗ್ಗದ ಸಕ್ರೆಬೈಲ್ ನಿಂದ ಕೇವಲ 6 ನೇ ವಯಸ್ಸಿನಲ್ಲಿ ಆನೆಯನ್ನು ತರಲಾಗಿತ್ತು.‌ ಬೇಡಕಿಹಾಳ ಗ್ರಾಮದ ಸಂದೀಪ್ ಪೊಲೀಸ್ ಪಾಟೀಲ್ ಎಂಬುವವರು ತೋಟದಲ್ಲಿ ವಾಸವಿತ್ತು.

ಪ್ರಮುಖವಾಗಿ ಉಷಾರಾಣಿ ಆಣೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಭಾಗದ ಅನೇಕ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿತ್ತು. ಬೇಡಕಿಹಾಳದ ಶ್ರೀ ಕಲ್ಯಾಣ ಸಿದ್ಧೇಶ್ವರನ ಐತಿಹಾಸಿಕ ದಸರಾ ಹಬ್ಬ, ದೀಪಾವಳಿ ಮತ್ತು ಧೂಳವಡ ಪಲ್ಲಕಿ ಆಚರಣೆ ಸೇರಿದಂತೆ ಜೈನ ಸಮುದಾಯದ ಪಂಚಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು.

ಕೇವಲ ಧಾರ್ಮಿಕ‌ ಕಾರ್ಯಕ್ರಮ ಮಾತ್ರವಲ್ಲದೆ ಚಲನಚಿತ್ರ ಹಾಗೂ ಧಾರಾವಾಹಿಯಲ್ಲಿಯೂ ಉಷಾರಾಣಿ ಗುರುತಿಸಿಕೊಂಡಿತ್ತು. ಸ್ವಾಮಿ ಸಮರ್ಥ ಚಲನಚಿತ್ರ, ಜಾನತಾ ರಾಜಾ ಮಹಾನಾಟ್ಯ, ರಾಜಶ್ರೀ ಛತ್ರಪತಿ ಶಾಹು ಮಹಾರಾಜರ ಧಾರಾವಾಹಿಯಲ್ಲಿ ಇದರ ಛಾಪು ಮೂಡಿಸಿತ್ತು.

ಆನೆಯ ನಿಧನಕ್ಕೆ ಶಾಂತಿಗಿರಿ ಟೆಸ್ಟಿನ ಶ್ರೀ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಹಾಗೂ ಮಾವುತ ಬಾಸು ಲಕ್ಷ್ಮೇಶ್ವರ ಸೇರಿದಂತೆ ಭಕ್ತರು ಅಂತಿಮ‌ ನಮನ ಸಲ್ಲಿಸಿದರು.

ಸಂಜೆ 6 ಗಂಟೆಯ ನಂತರ ಕ್ರೇನ್ ಮೂಲಕ ಅರಣ್ಯ ಇಲಾಖೆಯ ವಾಹನದಲ್ಲಿ ಪಾರ್ಥಿವ ಶರೀರವನ್ನು ಹಾಕಿ ಬೆಡಕಿಹಾಳ ವೃತ್ತದಿಂದ ಹಳೆ ಬಸ್ ನಿಲ್ದಾಣದವರೆಗೆ ಅಂತಿಮ ಯಾತ್ರೆ ನಡೆಸಿ ಕೋಥಳಿ ಶಾಂತಿಗಿರಿಯ ಬೆಟ್ಟಕ್ಕೆ ಪಾರ್ಥಿವ ಶರೀರವನ್ನು ಸ್ಥಳಾಂತರಿಸಲಾಯಿತು.

ಚಿಕ್ಕೋಡಿ ಅರಣ್ಯ ಇಲಾಖೆ ಅಧಿಕಾರಿಗಳು ಮೃತ ಆನೆಯ ಮರನೋತ್ತರ ಪರೀಕ್ಷೆ ನಡಿಸಿದ ನಂತರ ಅಂತಿ ವಿಧಿ ವಿದಾನಗಳ ಮೂಲಕ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು