Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ

Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ









ಚಿಕ್ಕೋಡಿ, (ಆಗಸ್ಟ್.11); ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ ಕೊಥಳಿ ಗ್ರಾಮದ ಆಚಾರ್ಯ ರತ್ನ ಶ್ರೀ 108 ದೇಶಭೂಷಣ ಮಹಾರಾಜರು ಸಾಕಿದ್ದ ಕುಪ್ಪಾನವಾಡಿ ಆಶ್ರಮದ ಆನೆ ಉಷಾರಾಣಿ ಶನಿವಾರ ಹೃದಯಾಘಾತದಿಂದ ನಿಧನಹೊಂದಿದೆ.

ಚಿಕ್ಕೋಡಿ ತಾಲೂಕಿನ ಕೊಥಳಿಯ ಕುಪ್ಪಾನವಾಡಿ ಶಾಂತಿಗಿರಿ ಟ್ರಸ್ಟ್ ಮತ್ತು ಬೇಡಕಿಹಾಳ ಗ್ರಾಮದ ಉಷಾರಾಣಿ ಹೆಸರಿನ ಆನೆ ತನ್ನ 51 ನೇ ವಯಸ್ಸಿಗೆ ನಿಧನಹೊಂದಿದೆ. ಈ ಆಶ್ರಮಕ್ಕೆ 1971‌ ರಲ್ಲಿ ಶಿವಮೊಗ್ಗದ ಸಕ್ರೆಬೈಲ್ ನಿಂದ ಕೇವಲ 6 ನೇ ವಯಸ್ಸಿನಲ್ಲಿ ಆನೆಯನ್ನು ತರಲಾಗಿತ್ತು.‌ ಬೇಡಕಿಹಾಳ ಗ್ರಾಮದ ಸಂದೀಪ್ ಪೊಲೀಸ್ ಪಾಟೀಲ್ ಎಂಬುವವರು ತೋಟದಲ್ಲಿ ವಾಸವಿತ್ತು.

ಪ್ರಮುಖವಾಗಿ ಉಷಾರಾಣಿ ಆಣೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಭಾಗದ ಅನೇಕ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿತ್ತು. ಬೇಡಕಿಹಾಳದ ಶ್ರೀ ಕಲ್ಯಾಣ ಸಿದ್ಧೇಶ್ವರನ ಐತಿಹಾಸಿಕ ದಸರಾ ಹಬ್ಬ, ದೀಪಾವಳಿ ಮತ್ತು ಧೂಳವಡ ಪಲ್ಲಕಿ ಆಚರಣೆ ಸೇರಿದಂತೆ ಜೈನ ಸಮುದಾಯದ ಪಂಚಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು.

ಕೇವಲ ಧಾರ್ಮಿಕ‌ ಕಾರ್ಯಕ್ರಮ ಮಾತ್ರವಲ್ಲದೆ ಚಲನಚಿತ್ರ ಹಾಗೂ ಧಾರಾವಾಹಿಯಲ್ಲಿಯೂ ಉಷಾರಾಣಿ ಗುರುತಿಸಿಕೊಂಡಿತ್ತು. ಸ್ವಾಮಿ ಸಮರ್ಥ ಚಲನಚಿತ್ರ, ಜಾನತಾ ರಾಜಾ ಮಹಾನಾಟ್ಯ, ರಾಜಶ್ರೀ ಛತ್ರಪತಿ ಶಾಹು ಮಹಾರಾಜರ ಧಾರಾವಾಹಿಯಲ್ಲಿ ಇದರ ಛಾಪು ಮೂಡಿಸಿತ್ತು.

ಆನೆಯ ನಿಧನಕ್ಕೆ ಶಾಂತಿಗಿರಿ ಟೆಸ್ಟಿನ ಶ್ರೀ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಹಾಗೂ ಮಾವುತ ಬಾಸು ಲಕ್ಷ್ಮೇಶ್ವರ ಸೇರಿದಂತೆ ಭಕ್ತರು ಅಂತಿಮ‌ ನಮನ ಸಲ್ಲಿಸಿದರು.

ಸಂಜೆ 6 ಗಂಟೆಯ ನಂತರ ಕ್ರೇನ್ ಮೂಲಕ ಅರಣ್ಯ ಇಲಾಖೆಯ ವಾಹನದಲ್ಲಿ ಪಾರ್ಥಿವ ಶರೀರವನ್ನು ಹಾಕಿ ಬೆಡಕಿಹಾಳ ವೃತ್ತದಿಂದ ಹಳೆ ಬಸ್ ನಿಲ್ದಾಣದವರೆಗೆ ಅಂತಿಮ ಯಾತ್ರೆ ನಡೆಸಿ ಕೋಥಳಿ ಶಾಂತಿಗಿರಿಯ ಬೆಟ್ಟಕ್ಕೆ ಪಾರ್ಥಿವ ಶರೀರವನ್ನು ಸ್ಥಳಾಂತರಿಸಲಾಯಿತು.

ಚಿಕ್ಕೋಡಿ ಅರಣ್ಯ ಇಲಾಖೆ ಅಧಿಕಾರಿಗಳು ಮೃತ ಆನೆಯ ಮರನೋತ್ತರ ಪರೀಕ್ಷೆ ನಡಿಸಿದ ನಂತರ ಅಂತಿ ವಿಧಿ ವಿದಾನಗಳ ಮೂಲಕ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ