Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ

Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ









ಚಿಕ್ಕೋಡಿ, (ಆಗಸ್ಟ್.11); ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ ಕೊಥಳಿ ಗ್ರಾಮದ ಆಚಾರ್ಯ ರತ್ನ ಶ್ರೀ 108 ದೇಶಭೂಷಣ ಮಹಾರಾಜರು ಸಾಕಿದ್ದ ಕುಪ್ಪಾನವಾಡಿ ಆಶ್ರಮದ ಆನೆ ಉಷಾರಾಣಿ ಶನಿವಾರ ಹೃದಯಾಘಾತದಿಂದ ನಿಧನಹೊಂದಿದೆ.

ಚಿಕ್ಕೋಡಿ ತಾಲೂಕಿನ ಕೊಥಳಿಯ ಕುಪ್ಪಾನವಾಡಿ ಶಾಂತಿಗಿರಿ ಟ್ರಸ್ಟ್ ಮತ್ತು ಬೇಡಕಿಹಾಳ ಗ್ರಾಮದ ಉಷಾರಾಣಿ ಹೆಸರಿನ ಆನೆ ತನ್ನ 51 ನೇ ವಯಸ್ಸಿಗೆ ನಿಧನಹೊಂದಿದೆ. ಈ ಆಶ್ರಮಕ್ಕೆ 1971‌ ರಲ್ಲಿ ಶಿವಮೊಗ್ಗದ ಸಕ್ರೆಬೈಲ್ ನಿಂದ ಕೇವಲ 6 ನೇ ವಯಸ್ಸಿನಲ್ಲಿ ಆನೆಯನ್ನು ತರಲಾಗಿತ್ತು.‌ ಬೇಡಕಿಹಾಳ ಗ್ರಾಮದ ಸಂದೀಪ್ ಪೊಲೀಸ್ ಪಾಟೀಲ್ ಎಂಬುವವರು ತೋಟದಲ್ಲಿ ವಾಸವಿತ್ತು.

ಪ್ರಮುಖವಾಗಿ ಉಷಾರಾಣಿ ಆಣೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಭಾಗದ ಅನೇಕ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿತ್ತು. ಬೇಡಕಿಹಾಳದ ಶ್ರೀ ಕಲ್ಯಾಣ ಸಿದ್ಧೇಶ್ವರನ ಐತಿಹಾಸಿಕ ದಸರಾ ಹಬ್ಬ, ದೀಪಾವಳಿ ಮತ್ತು ಧೂಳವಡ ಪಲ್ಲಕಿ ಆಚರಣೆ ಸೇರಿದಂತೆ ಜೈನ ಸಮುದಾಯದ ಪಂಚಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು.

ಕೇವಲ ಧಾರ್ಮಿಕ‌ ಕಾರ್ಯಕ್ರಮ ಮಾತ್ರವಲ್ಲದೆ ಚಲನಚಿತ್ರ ಹಾಗೂ ಧಾರಾವಾಹಿಯಲ್ಲಿಯೂ ಉಷಾರಾಣಿ ಗುರುತಿಸಿಕೊಂಡಿತ್ತು. ಸ್ವಾಮಿ ಸಮರ್ಥ ಚಲನಚಿತ್ರ, ಜಾನತಾ ರಾಜಾ ಮಹಾನಾಟ್ಯ, ರಾಜಶ್ರೀ ಛತ್ರಪತಿ ಶಾಹು ಮಹಾರಾಜರ ಧಾರಾವಾಹಿಯಲ್ಲಿ ಇದರ ಛಾಪು ಮೂಡಿಸಿತ್ತು.

ಆನೆಯ ನಿಧನಕ್ಕೆ ಶಾಂತಿಗಿರಿ ಟೆಸ್ಟಿನ ಶ್ರೀ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಹಾಗೂ ಮಾವುತ ಬಾಸು ಲಕ್ಷ್ಮೇಶ್ವರ ಸೇರಿದಂತೆ ಭಕ್ತರು ಅಂತಿಮ‌ ನಮನ ಸಲ್ಲಿಸಿದರು.

ಸಂಜೆ 6 ಗಂಟೆಯ ನಂತರ ಕ್ರೇನ್ ಮೂಲಕ ಅರಣ್ಯ ಇಲಾಖೆಯ ವಾಹನದಲ್ಲಿ ಪಾರ್ಥಿವ ಶರೀರವನ್ನು ಹಾಕಿ ಬೆಡಕಿಹಾಳ ವೃತ್ತದಿಂದ ಹಳೆ ಬಸ್ ನಿಲ್ದಾಣದವರೆಗೆ ಅಂತಿಮ ಯಾತ್ರೆ ನಡೆಸಿ ಕೋಥಳಿ ಶಾಂತಿಗಿರಿಯ ಬೆಟ್ಟಕ್ಕೆ ಪಾರ್ಥಿವ ಶರೀರವನ್ನು ಸ್ಥಳಾಂತರಿಸಲಾಯಿತು.

ಚಿಕ್ಕೋಡಿ ಅರಣ್ಯ ಇಲಾಖೆ ಅಧಿಕಾರಿಗಳು ಮೃತ ಆನೆಯ ಮರನೋತ್ತರ ಪರೀಕ್ಷೆ ನಡಿಸಿದ ನಂತರ ಅಂತಿ ವಿಧಿ ವಿದಾನಗಳ ಮೂಲಕ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ