Heavy rain: House collapses, four injured

ಭಾರೀ ಮಳೆ: ಮನೆ ಕುಸಿದು ನಾಲ್ವರಿಗೆ ಗಾಯ

ಭಾರೀ ಮಳೆ: ಮನೆ ಕುಸಿದು ನಾಲ್ವರಿಗೆ ಗಾಯ

ಮುದ್ದೇಬಿಹಾಳ : ಎಡೆಬಿಡದೇ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮನೆಯೊಂದು ಕುಸಿದು ಮನೆಯಲ್ಲಿ ಮಲಗಿದ್ದ ನಾಲ್ವರ ಮೇಲೆ ಬಿದ್ದ ಪರಿಣಾಮ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು ಅದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡು ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿರುವ ಘಟನೆ ತಾಲ್ಲೂಕಿನ ಆರೇಮುರಾಳ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.

ಆರೇಮುರಾಳದ ರುದ್ರಪ್ಪ ಬಂಡಿವಡ್ಡರ, ಮಲ್ಲಮ್ಮ ಬಂಡಿವಡ್ಡರ, ಶಾರದಾ ಬಂಡಿವಡ್ಡರ ಹಾಗೂ ಮಕ್ಕಳಾದ ಪ್ರತೀಕ್ಷಾ, ಋಶಾಂಕ ಗಾಯಗೊಂಡಿದ್ದು ಇದರಲ್ಲಿ ರುದ್ರಪ್ಪ ಹಾಗೂ ಮಲ್ಲಮ್ಮ ಅವರನ್ನು ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆಂದು ದಾಖಲಿಸಲಾಗಿದೆ.

ಮಾಜಿ ಶಾಸಕ ನಡಹಳ್ಳಿ ಅಧಿಕಾರಿಗಳ ವಿರುದ್ಧ ಕಿಡಿ: ಮುದ್ದೇಬಿಹಾಳ ತಾಲ್ಲೂಕಿನ ಆರೇಮುರಾಳದಲ್ಲಿ ಮನೆ ಬಿದ್ದು ಮರ‍್ನಾಲ್ಕು ಜನ ಗಾಯಗೊಂಡಿರುವ ವಿಷಯ ತಿಳಿದರೂ ಕೂಡ ಅಧಿಕಾರಿಗಳು ತ್ವರಿತವಾಗಿ ಬೀದಿಯಲ್ಲಿ ನಿಂತಿದ್ದ ಕುಟುಂಬಕ್ಕೆ ಆಸರೆಯಾಗುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಸ್ವತಃ ತಾವೇ ತಮ್ಮ ಕಾರ್ಯಕರ್ತರನ್ನು ಕರೆದುಕೊಂಡು ಮನೆಬಿದ್ದು ತೊಂದರೆಯಲ್ಲಿದ್ದ ಕುಟುಂಬದವರಿಗೆ ರೇಷನ್ ಕಿಟ್ ವಿತರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ನಡಹಳ್ಳಿ ಅವರು, ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೆಲವು ಅಧಿಕಾರಿಗಳಿಗೆ ದುರಹಂಕಾರ ಬಂದಿದೆ.ಜನರು ಕಷ್ಟದಲ್ಲಿದ್ದಾಗ ಸ್ಪಂದಿಸದೇ ಯಾವಾಗಲಾದರೂ ಹೋದರೆ ನಡೆಯುತ್ತದೆ ಎಂಬ ಭಾವನೆಯುಳ್ಳವರಾಗಿದ್ದಾರೆ. ಇದರಿಂದಲೇ ತಾಲ್ಲೂಕಿನಲ್ಲಿ ಸಂತ್ರಸ್ಥರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ ಎಂದು ಹರಿಹಾಯ್ದರು.
ಮನೆ ಬಿದ್ದ ಕೂಡಲೇ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಸಂತ್ರಸ್ಥ ಕುಟುಂಬಕ್ಕೆ ತ್ವರಿತವಾಗಿ ಮೂಲಭೂತ ಸೌರ‍್ಯ,ದಿನಸಿ ಪದಾರ್ಥ, ಪರಿಹಾರ ಧನ ಒದಗಿಸಬೇಕು. ಆದರೆ, ಅಧಿಕಾರಿಗಳು ಇದನ್ನು ಬೇಗನೇ ಮಾಡಲಿಲ್ಲ ಎಂದು ದೂರಿದರು.ಈ ಸಂದರ್ಭದಲ್ಲಿ ಮುಖಂಡರಾದ ಗಿರೀಶಗೌಡ ಪಾಟೀಲ, ಅಪ್ಪು ಧನ್ನೂರ, ರಮೇಶ ವಗ್ಗರ, ರವೀಂದ್ರ ಬಿರಾದಾರ, ಬಸವರಾಜ ಸರೂರ,ಪಿಡಿಒ ಕಲ್ಮೇಶ ಕುಂಬಾರ,ರಿಯಾಜ ನಾಯ್ಕೋಡಿ ಇದ್ದರು.

ಶಾಸಕ ನಾಡಗೌಡ ಭೇಟಿ: ತಾಲ್ಲೂಕುಡಾಳಿತದಿಂದ ನೆರವು:
ಮಾಜಿ ಶಾಸಕ ನಡಹಳ್ಳಿ ಭೇಟಿ ನೀಡಿದ ಹೋದ ಬಳಿಕ ಹಾಲಿ ಶಾಸಕ ಸಿ.ಎಸ್.ನಾಡಗೌಡ, ತಹಸೀಲ್ದಾರ ಕೀರ್ತಿ ಚಾಲಕ, ತಾಪಂ ಇಒ ವೆಂಕಟೇಶ ವಂದಾಲ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಜಿ.ಮಠ, ಪಿಡಿಒ ಕಲ್ಮೇಶ ಕುಂಬಾರ ಭೇಟಿ ನೀಡಿ ಬಿದ್ದಿರುವ ಮನೆಯ ಕುಟುಂಬದ ಸದಸ್ಯರಿಂದ ಮಾಹಿತಿ ಪಡೆದುಕೊಂಡರು.ಪಿಡಿಒ ಕಲ್ಮೇಶ ಕುಂಬಾರ ಮಾತನಾಡಿ, ಸಂತ್ರಸ್ಥ ಕುಟುಂಬಕ್ಕೆ ತಾತ್ಕಾಲಿಕ ವಸತಿಗಾಗಿ ಪ್ರಾಣಾಪಾಯದಿಂದ ಪಾರು.

ಭಾರೀ ಮಳೆ: ಮನೆ ಕುಸಿದು ನಾಲ್ವರಿಗೆ ಗಾಯ
ಮುದ್ದೇಬಿಹಾಳ : ಎಡೆಬಿಡದೇ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮನೆಯೊಂದು ಕುಸಿದು ಮನೆಯಲ್ಲಿ ಮಲಗಿದ್ದ ನಾಲ್ವರ ಮೇಲೆ ಬಿದ್ದ ಪರಿಣಾಮ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು ಅದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡು ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿರುವ ಘಟನೆ ತಾಲ್ಲೂಕಿನ ಆರೇಮುರಾಳ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.
ಆರೇಮುರಾಳದ ರುದ್ರಪ್ಪ ಬಂಡಿವಡ್ಡರ, ಮಲ್ಲಮ್ಮ ಬಂಡಿವಡ್ಡರ, ಶಾರದಾ ಬಂಡಿವಡ್ಡರ ಹಾಗೂ ಮಕ್ಕಳಾದ ಪ್ರತೀಕ್ಷಾ, ಋಶಾಂಕ ಗಾಯಗೊಂಡಿದ್ದು ಇದರಲ್ಲಿ ರುದ್ರಪ್ಪ ಹಾಗೂ ಮಲ್ಲಮ್ಮ ಅವರನ್ನು ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆಂದು ದಾಖಲಿಸಲಾಗಿದೆ.

ಮಾಜಿ ಶಾಸಕ ನಡಹಳ್ಳಿ ಅಧಿಕಾರಿಗಳ ವಿರುದ್ಧ ಕಿಡಿ: ಮುದ್ದೇಬಿಹಾಳ ತಾಲ್ಲೂಕಿನ ಆರೇಮುರಾಳದಲ್ಲಿ ಮನೆ ಬಿದ್ದು ಮರ‍್ನಾಲ್ಕು ಜನ ಗಾಯಗೊಂಡಿರುವ ವಿಷಯ ತಿಳಿದರೂ ಕೂಡ ಅಧಿಕಾರಿಗಳು ತ್ವರಿತವಾಗಿ ಬೀದಿಯಲ್ಲಿ ನಿಂತಿದ್ದ ಕುಟುಂಬಕ್ಕೆ ಆಸರೆಯಾಗುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.ಸ್ವತಃ ತಾವೇ ತಮ್ಮ ಕಾರ್ಯಕರ್ತರನ್ನು ಕರೆದುಕೊಂಡು ಮನೆಬಿದ್ದು ತೊಂದರೆಯಲ್ಲಿದ್ದ ಕುಟುಂಬದವರಿಗೆ ರೇಷನ್ ಕಿಟ್ ವಿತರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ನಡಹಳ್ಳಿ ಅವರು, ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೆಲವು ಅಧಿಕಾರಿಗಳಿಗೆ ದುರಹಂಕಾರ ಬಂದಿದೆ.ಜನರು ಕಷ್ಟದಲ್ಲಿದ್ದಾಗ ಸ್ಪಂದಿಸದೇ ಯಾವಾಗಲಾದರೂ ಹೋದರೆ ನಡೆಯುತ್ತದೆ ಎಂಬ ಭಾವನೆಯುಳ್ಳವರಾಗಿದ್ದಾರೆ. ಇದರಿಂದಲೇ ತಾಲ್ಲೂಕಿನಲ್ಲಿ ಸಂತ್ರಸ್ಥರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ ಎಂದು ಹರಿಹಾಯ್ದರು.

ಮನೆ ಬಿದ್ದ ಕೂಡಲೇ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಸಂತ್ರಸ್ಥ ಕುಟುಂಬಕ್ಕೆ ತ್ವರಿತವಾಗಿ ಮೂಲಭೂತ ಸೌರ‍್ಯ,ದಿನಸಿ ಪದಾರ್ಥ, ಪರಿಹಾರ ಧನ ಒದಗಿಸಬೇಕು. ಆದರೆ ಅಧಿಕಾರಿಗಳು ಇದನ್ನು ಬೇಗನೇ ಮಾಡಲಿಲ್ಲ ಎಂದು ದೂರಿದರು. ಈ ಸಂದರ್ಭದಲ್ಲಿ ಮುಖಂಡರಾದ ಗಿರೀಶಗೌಡ ಪಾಟೀಲ, ಅಪ್ಪು ಧನ್ನೂರ,ರಮೇಶ ವಗ್ಗರ,ರವೀಂದ್ರ ಬಿರಾದಾರ, ಬಸವರಾಜ ಸರೂರ,ಪಿಡಿಒ ಕಲ್ಮೇಶ ಕುಂಬಾರ,ರಿಯಾಜ ನಾಯ್ಕೋಡಿ ಇದ್ದರು.

ಶಾಸಕ ನಾಡಗೌಡ ಭೇಟಿ: ತಾಲ್ಲೂಕುಡಾಳಿತದಿಂದ ನೆರವು:
ಮಾಜಿ ಶಾಸಕ ನಡಹಳ್ಳಿ ಭೇಟಿ ನೀಡಿದ ಹೋದ ಬಳಿಕ ಹಾಲಿ ಶಾಸಕ ಸಿ.ಎಸ್.ನಾಡಗೌಡ , ತಹಸೀಲ್ದಾರ ಕೀರ್ತಿ ಚಾಲಕ, ತಾಪಂ ಇಒ ವೆಂಕಟೇಶ ವಂದಾಲ,ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಜಿ.ಮಠ, ಪಿಡಿಒ ಕಲ್ಮೇಶ ಕುಂಬಾರ ಭೇಟಿ ನೀಡಿ ಬಿದ್ದಿರುವ ಮನೆಯ ಕುಟುಂಬದ ಸದಸ್ಯರಿಂದ ಮಾಹಿತಿ ಪಡೆದುಕೊಂಡರು. ಪಿಡಿಒ ಕಲ್ಮೇಶ ಕುಂಬಾರ ಮಾತನಾಡಿ, ಸಂತ್ರಸ್ಥ ಕುಟುಂಬಕ್ಕೆ ತಾತ್ಕಾಲಿಕ ವಸತಿಗಾಗಿ ಗ್ರಾಮದಲ್ಲಿ ಮನೆಯೊಂದನ್ನು ಬಾಡಿಗೆ ಪಡೆದು ಸ್ಥಳಾಂತರಿಸಲಾಗಿದೆ. ದಿನಸಿ, ಹಾಸಿಗೆ, ಹೊದಿಕೆ, ಪಾತ್ರೆ ನೀಡಿದ್ದೇವೆ ಎಂದು ತಿಳಿಸಿದರು. ಮುಖಂಡ ರಾಯನಗೌಡ ತಾತರೆಡ್ಡಿ ಇದ್ದರು. ಮನೆಯೊಂದನ್ನು ಬಾಡಿಗೆ ಪಡೆದು ಸ್ಥಳಾಂತರಿಸಲಾಗಿದೆ. ದಿನಸಿ, ಹಾಸಿಗೆ, ಹೊದಿಕೆ, ಪಾತ್ರೆ ನೀಡಿದ್ದೇವೆ ಎಂದು ತಿಳಿಸಿದರು. ಮುಖಂಡ ರಾಯನಗೌಡ ತಾತರೆಡ್ಡಿ ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ