Heavy storm, hail: 4000 papaya plants destroyed, grape crop damaged

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದಲ್ಲಿ ಬುಧವಾರ ಸಂಜೆ ಬೀಸಿದ ಭಾರಿ ಬಿರುಗಾಳಿ, ಅಕಾಲಿಕ ಆಲಿಕಲ್ಲು ಮಳೆಗೆ ಪಪ್ಪಾಯಿ,ದ್ರಾಕ್ಷಿ ಬೆಳೆ ನಾಶವಾಗಿದೆ.

ಗ್ರಾಮದ ರೈತ ಕೆ. ವಾಯ್. ಬಿರಾದಾರ ಅವರ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದ ಅಂದಾಜು ನಾಲ್ಕು ಸಾವಿರ ಪಪ್ಪಾಯಿ ಗಿಡಗಳು ನೆಲಕ್ಕುರುಳಿವೆ. ಎರಡು ತಿಂಗಳು ಕಳೆದಿದ್ದರೆ ಪಪ್ಪಾಯಿ ಫಸಲು ಕೈಗೆ ಬರುತ್ತಿತ್ತು. ಪಪ್ಪಾಯಿ ಬೆಳೆಗಾಗಿ ಮೂರು ಲಕ್ಷ ರೂ. ಖರ್ಚು ಮಾಡಿದ್ದು ಕೈಗೆ ಬಂದಿದ್ದು ಬಾಯಿಗೆ ಬಾರದಂತಾಗಿದೆ ಎಂದು ರೈತ ಕೆ. ವಾಯ್. ಬಿರಾದಾರ ಅಲವತ್ತುಕೊಂಡಿದ್ದಾರೆ.

ಗ್ರಾಮದ ಶಿವಾನಂದ ಬಿರಾದಾರ ಅವರು ಆರು ಎಕರೆ ಪ್ರದೇಶದಲ್ಲಿ ಹಾಕಿದ್ದ ದ್ರಾಕ್ಷಿ ತೋಟಕ್ಕೂ ಹಾನಿಯಾಗಿದ್ದು ಬೆಳೆ ನೆಲಕ್ಕುರುಳಿ ನಷ್ಟವುಂಟಾಗಿದೆ. ಸಂಕಷ್ಟದ ಕಾಲದಲ್ಲಿ ದ್ರಾಕ್ಷಿ, ಪಪ್ಪಾಯಿ ಕೈ ಹಿಡಿಯಬಹುದೆಂಬ ಲೆಕ್ಕಾಚಾರ ಮಾಡಿಕೊಂಡಿದ್ದ ರೈತರಿಗೆ ಭಾರೀ ನಷ್ಟವುಂಟಾಗಿದೆ.

ಢವಳಗಿ ಹೋಬಳಿಯ ಬಸರಕೋಡ, ರೂಢಗಿ, ಅಗಸಬಾಳ ಭಾಗದಲ್ಲಿ ಬುಧವಾರ ಸಂಜೆ ಬೀಸಿದ ಬಿರುಗಾಳಿಗೆ ಹಲವು ಮರಗಳು ಉರುಳಿ ಬಿದ್ದಿದ್ದು ವಿದ್ಯುತ್ ವ್ಯತ್ಯಯವಾಗಿತ್ತು. ಹೊಲದಲ್ಲಿದ್ದ ತೋಟಗಾರಿಕೆ ಬೆಳೆಯೂ ನೆಲಕ್ಕಚ್ಚಿದೆ.

ಪರಿಹಾರಕ್ಕೆ ಆಗ್ರಹ: ಬಸರಕೋಡದಲ್ಲಿ ಭಾರೀ ಬಿರುಗಾಳಿ, ಮಳೆಗೆ ದ್ರಾಕ್ಷಿ, ಪಪ್ಪಾಯಿ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಹಾನಿ ಆಗಿದ್ದು ಕೂಡಲೇ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮಧ್ಯೆಪ್ರವೇಶಿಸಿ ನಷ್ಟಕ್ಕೊಳಗಾದ ರೈತರಿಗೆ ಸಮೀಕ್ಷೆ ನಡೆಸಿ ಪರಿಹಾರ ದೊರಕಿಸಿಕೊಡಬೇಕು ಎಂದು ರೈತ ಮುಖಂಡ ಗುರುನಾಥಗೌಡ ಬಿರಾದಾರ ಒತ್ತಾಯಿಸಿದ್ದಾರೆ.

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ