ಸಿದ್ದೇಶ್ವರ ಸ್ವಾಮೀಜಿ ಸ್ಮರಣೆ : ಹೆಬ್ಬಾಳ ಪಬ್ಲಿಸಿಟಿ ಹಾಗೂ ಜನರಕೂಗು ಬಳಗದ ದಿನದರ್ಶಿಕೆ ಲೋಕಾರ್ಪಣೆ ; ಮಾಧ್ಯಮಗಳು ಉಳ್ಳವರ ಸ್ವತ್ತಾಗದಿರಲಿ-ಕುಂಟೋಜಿ ಶ್ರೀ

ಸಿದ್ದೇಶ್ವರ ಸ್ವಾಮೀಜಿ ಸ್ಮರಣೆ : ಹೆಬ್ಬಾಳ ಪಬ್ಲಿಸಿಟಿ ಹಾಗೂ ಜನರಕೂಗು ಬಳಗದ ದಿನದರ್ಶಿಕೆ ಲೋಕಾರ್ಪಣೆ ; ಮಾಧ್ಯಮಗಳು ಉಳ್ಳವರ ಸ್ವತ್ತಾಗದಿರಲಿ-ಕುಂಟೋಜಿ ಶ್ರೀ

ಮುದ್ದೇಬಿಹಾಳ : ಮಾಧ್ಯಮಗಳು ಇಂದು ಜಾಹೀರಾತು ಕೊಟ್ಟವರನ್ನು ಓಲೈಸುವ ಸ್ಥಿತಿಯಲ್ಲಿವೆ.ನಿಜವಾಗಿಯೂ ನೊಂದವರ,ಶೋಷಿತರ ಪರವಾಗಿ ಧ್ವನಿಯಾಗಿ ನಿಲ್ಲುವ ಕಾರ್ಯ ಮಾಧ್ಯಮಗಳು ಮಾಡಬೇಕು ಎಂದು ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ಶಿವಾಚಾರ್ಯರು ಹೇಳಿದರು.

ತಾಲ್ಲೂಕು ಕುಂಟೋಜಿಯ ಶ್ರೀ ಬಸವೇಶ್ವರ ದೇವಸ್ಥಾನದ ಯಾತ್ರಿ ನಿವಾಸದ ಸಭಾಂಗಣದಲ್ಲಿ ಯಶಸ್ವಿನಿ ಮಹಿಳಾ ಸ್ವ ಸಹಾಯ ಸಂಘ, ಹೆಬ್ಬಾಳ ಪಬ್ಲಿಸಿಟಿ ಹಾಗೂ ಜನರಕೂಗು ಬಳಗದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಿದ್ಧೇಶ್ವರ ಸ್ವಾಮೀಜಿಯವರ ಸ್ಮರಣೆ,ದಿನದರ್ಶಿಕೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪತ್ರಿಕೆಗಳು ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನು ಉಳಿಸಿಕೊಂಡಿವೆ.ಆದರೆ ಜಾಹೀರಾತು ಒಂದು ಭಾಗವಾಗಿರಲಿ,ಅದೇ ಪ್ರಧಾನವಾದರೆ ಸಮಾಜದ ವ್ಯವಸ್ಥೆಯಲ್ಲಿ ಮಾಧ್ಯಮ ರಂಗದ ಅಸ್ತಿತ್ವದ ಬಗ್ಗೆಯೂ ಆತಂಕಪಡುವAತಾಗುತ್ತದೆ ಎಂದರು.

ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಸಿದ್ದೇಶ್ವರ ಸ್ವಾಮೀಜಿಯವರು ಈ ಶತಮಾನದ ಸಂತರಾಗಿದ್ದು ಅವರ ಬಗ್ಗೆ ಮಾತನಾಡುವುದಕ್ಕೆ ಒಂದು ದಿನ ಸಾಕಾಗುವುದಿಲ್ಲ.ಅವರು ನುಡಿದಂತೆ ನಡೆದ ದಾರ್ಶನಿಕರು.ಅವರ ಆದರ್ಶಗಳನ್ನು ನಾವು ಪಾಲಿಸಬೇಕು ಎಂದರು.

ಜಿಪಂ ನಿವೃತ್ತದ ಅಧಿಕಾರಿ ಬಿ.ಎಚ್.ಹೂಗಾರ, ಬಿಇಒ ಕಚೇರಿ ಲಿಪಿಕ ನೌಕರರ ಸಂಘದ ಅಧ್ಯಕ್ಷ ಶರಣು ಹಿರೇಮಠ, ಪತ್ರಕರ್ತ ಶಂಕರ ಹೆಬ್ಬಾಳ ಮಾತನಾಡಿದರು.ಯಶಸ್ವಿನಿ ಮಹಿಳಾ ಸ್ವ ಸಹಾಯ ಸಂಘದ ಅಧ್ಯಕ್ಷೆ ಪಾರ್ವತಿ ಕೋಳೂರು, ಬಸವೇಶ್ವರ ದೇವಸ್ಥಾನ ಕಮಿಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, ಹೆಸ್ಕಾಂ ಅಧಿಕಾರಿ ಶಿವಪ್ಪ ಆರೇಶಂಕರ, ಪತ್ರಕರ್ತ ಗುಲಾಮಮೊಹ್ಮದ ದಫೇದಾರ, ವಕೀಲರಾದ ಸಿ.ವಿ.ಊರಾನ ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ