Hemareddy Matei who lashed out at the previous administration

ದ್ರಾಕ್ಷಿ ಬೆಳೆಗಾರರ ಅನುಕೂಲಕ್ಕೆ ಕೋಲ್ಡ್ ಸ್ಟೋರೇಜ್ ಸ್ಥಾಪನೆ: ಹಿಂದಿನ ಆಡಳಿತ ಮಂಡಳಿ ವಿರುದ್ಧ ವಾಗ್ದಾಳಿ ನಡೆಸಿದ ಹೇಮರೆಡ್ಡಿ ಮೇಟಿ

ದ್ರಾಕ್ಷಿ ಬೆಳೆಗಾರರ ಅನುಕೂಲಕ್ಕೆ ಕೋಲ್ಡ್ ಸ್ಟೋರೇಜ್ ಸ್ಥಾಪನೆ: ಹಿಂದಿನ ಆಡಳಿತ ಮಂಡಳಿ ವಿರುದ್ಧ ವಾಗ್ದಾಳಿ ನಡೆಸಿದ ಹೇಮರೆಡ್ಡಿ ಮೇಟಿ

ಮುದ್ದೇಬಿಹಾಳ : 40 ವರ್ಷಗಳ ಅವಧಿಯಲ್ಲಿ ಈ ಹಿಂದಿನ ಆಡಳಿತ ಮಂಡಳಿಯವರು ರೈತರಿಗೆ ಕೊಟ್ಟಿದ್ದ ಸಾಲದ ಪ್ರಮಾಣಕ್ಕಿಂತಲೂ ಅದರ ದುಪ್ಪಟ್ಟು ಸಂಖ್ಯೆಯ ರೈತರಿಗೆ ನಾವು ಅಧಿಕಾರ ವಹಿಸಿಕೊಂಡ ನಾಲ್ಕೂವರೆ ವರ್ಷದ ಅವಧಿಯಲ್ಲಿ ಸಾಲ ವಿತರಣೆ ಮಾಡಿದ್ದೇವೆ ಎಂದು ಬಸರಕೋಡ ವಿವಿಧೋದ್ಧೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಹೇಮರೆಡ್ಡಿ ಬ.ಮೇಟಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಬಸರಕೋಡ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದಿಂದ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 49ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ಅಧಿಕಾರ ವಹಿಸಿಕೊಂಡು ಮಾತು ಕೊಟ್ಟಂತೆ ರೈತರಿಗೆ ರಸಗೊಬ್ಬರ, ಬೀಜ ಹಾಗೂ ಕೀಟನಾಶಕ ಸ್ಥಳೀಯವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ರಸಗೊಬ್ಬರ ಮಳಿಗೆ ತೆರೆಯಲಾಗಿದ್ದು ಒಂದೇ ವರ್ಷದಲ್ಲಿ 1.22 ಕೋಟಿ ರೂಪಾಯಿ ಬೀಜ, ಗೊಬ್ಬರ, ಕೀಟನಾಶಕ ಖರೀದಿಸಿದ್ದು 92.26 ಲಕ್ಷ ರೂಪಾಯಿ ಗಳಷ್ಟು ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟವಾಗಿದೆ ಎಂದು ತಿಳಿಸಿದರು.

ಮುಂಬರುವ ವರ್ಷದಲ್ಲಿ ಈ ಭಾಗದ ರೈತರಿಗೆ ದ್ರಾಕ್ಷಿ ಸಂಸ್ಕರಣೆಗೆ ಕೋಲ್ಡ್ ಸ್ಟೋರೇಜ್ ತೆರೆಯುವ ಉದ್ದೇಶ ಇಟ್ಟುಕೊಂಡಿದ್ದು ಬಸರಕೋಡದ ಸಂಘಕ್ಕೆ ಸ್ವಂತ ಕಟ್ಟಡವನ್ನು ನಿರ್ಮಿಸಿ ಮುಂದಿನ ವರ್ಷದಲ್ಲಿ ರೈತರ ಸಭೆಯನ್ನು ಅಲ್ಲಿಯೇ ನಡೆಸುವುದಾಗಿ ತಿಳಿಸಿದರು.

ಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ರವಿ ಗುರಿಕಾರ, ಪವಾಡ ಬಸವೇಶ್ವರ ಸಹಕಾರಿ ಪತ್ತಿನ ಸಂಘದ ಉಪಾಧ್ಯಕ್ಷ ಡಿ.ಬಿ.ಬೇಲಾಳ, ಪಬ ಸಂಸ್ಥೆಯ ಅಧ್ಯಕ್ಷ ಕೆ.ವಾಯ್.ಬಿರಾದಾರ, ಶರಣ ಸೋಮನಾಳದ ಮಹದೇವಯ್ಯ ಶಾಸ್ತ್ರೀಗಳು ಮಾತನಾಡಿದರು.

ಸಂಘದ ಉಪಾಧ್ಯಕ್ಷ ಬಾಬು ಸೂಳಿಭಾವಿ, ನಿರ್ದೇಶಕರಾದ ಸಿಂಧೂಬಲ್ಲಾಳ ನಾಡಗೌಡ, ಸುನೀಲ ಸೂಳಿಭಾವಿ, ಸೋಮಪ್ಪ ಮೇಟಿ, ಬಸವರಾಜ ಪಾಟೀಲ್, ಲಕ್ಕಪ್ಪ ಸೋಮನಾಳ, ಶಾಂತಪ್ಪ ಸಂಕನಾಳ, ಮಡಿವಾಳಪ್ಪ ತಳವಾರ, ಪಾರ್ವತಿ ಸಾಲಿಮಠ, ಸಿದ್ದಮ್ಮ ಬಿರಾದಾರ, ಯಲ್ಲಪ್ಪ ಚಲವಾದಿ, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಎ.ಎಸ್.ಸಾಲಿಮಠ, ಮಾಣಿಕ ಸಗರಿ, ಪ್ರಭಾರ ಸಿಇಒ ಬಸನಗೌಡ ಕೊಣ್ಣೂರ ಮೊದಲಾದವರು ಇದ್ದರು.ಪ್ರಕಾಶ ಗೋಂಧಳೆ ನಿರೂಪಿಸಿದರು.

ಹಿಂದಿನ ಆಡಳಿತ ಮಂಡಳಿಯ ವಿರುದ್ಧ ವಾಗ್ದಾಳಿ

ಸಂಘದಲ್ಲಿ ಎಫ್.ಡಿ ಇಟ್ಟಿರುವವರಿಗೆ ಹಣ ಮರಳಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಹಿಂದಿನ ಆಡಳಿತ ಮಂಡಳಿಯವರು, ಸಿಇಒ ಈವರೆಗೂ ಆ ದಾಖಲೆಗಳನ್ನು ಸಂಘಕ್ಕೆ ಒಪ್ಪಿಸಿಲ್ಲ. ಹೀಗಾಗಿ ಜನರಿಗೆ ಅವರು ಇಟ್ಟಿರುವ ಹಣ ಕೊಡಲು ಆಗುತ್ತಿಲ್ಲ. ನಿಮ್ಮ ಹಣ ಎಲ್ಲೂ ಹೋಗಿಲ್ಲ ಬ್ಯಾಂಕಿನಲ್ಲಿ ಜಮೆ ಇದೆ. ಆದರೆ ಹಿಂದಿನ ಆಡಳಿತ ಮಂಡಳಿಯವರು ದಾಖಲೆಗಳನ್ನು ಕೊಟ್ಟಿರುವುದಾಗಿ ಜನರೆದುರಿಗೆ ತಪ್ಪು ಮಾಹಿತಿ ನೀಡುತ್ತಾ ಹೋಗುತ್ತಿದ್ದಾರೆ. ಪ್ರತಿವರ್ಷ ಇದನ್ನು ಹೇಳುವುದಕ್ಕೆ ನಮಗೂ ಬೇಸರವಾಗಿದೆ ಎಂದು ಸಂಘದ ಅಧ್ಯಕ್ಷ ಹೇಮರೆಡ್ಡಿ ಮೇಟಿ ಹಿಂದಿನ ಆಡಳಿತ ಮಂಡಳಿ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: Astrology: ಈ ರಾಶಿಯವರು ಹಣಕಾಶಿನ ವ್ಯವಹಾರದಿಂದ ಇಂದು ದೂರ ಇರುವುದು ಉತ್ತಮ

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ