Hemareddy Matei who lashed out at the previous administration

ದ್ರಾಕ್ಷಿ ಬೆಳೆಗಾರರ ಅನುಕೂಲಕ್ಕೆ ಕೋಲ್ಡ್ ಸ್ಟೋರೇಜ್ ಸ್ಥಾಪನೆ: ಹಿಂದಿನ ಆಡಳಿತ ಮಂಡಳಿ ವಿರುದ್ಧ ವಾಗ್ದಾಳಿ ನಡೆಸಿದ ಹೇಮರೆಡ್ಡಿ ಮೇಟಿ

ದ್ರಾಕ್ಷಿ ಬೆಳೆಗಾರರ ಅನುಕೂಲಕ್ಕೆ ಕೋಲ್ಡ್ ಸ್ಟೋರೇಜ್ ಸ್ಥಾಪನೆ: ಹಿಂದಿನ ಆಡಳಿತ ಮಂಡಳಿ ವಿರುದ್ಧ ವಾಗ್ದಾಳಿ ನಡೆಸಿದ ಹೇಮರೆಡ್ಡಿ ಮೇಟಿ

ಮುದ್ದೇಬಿಹಾಳ : 40 ವರ್ಷಗಳ ಅವಧಿಯಲ್ಲಿ ಈ ಹಿಂದಿನ ಆಡಳಿತ ಮಂಡಳಿಯವರು ರೈತರಿಗೆ ಕೊಟ್ಟಿದ್ದ ಸಾಲದ ಪ್ರಮಾಣಕ್ಕಿಂತಲೂ ಅದರ ದುಪ್ಪಟ್ಟು ಸಂಖ್ಯೆಯ ರೈತರಿಗೆ ನಾವು ಅಧಿಕಾರ ವಹಿಸಿಕೊಂಡ ನಾಲ್ಕೂವರೆ ವರ್ಷದ ಅವಧಿಯಲ್ಲಿ ಸಾಲ ವಿತರಣೆ ಮಾಡಿದ್ದೇವೆ ಎಂದು ಬಸರಕೋಡ ವಿವಿಧೋದ್ಧೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಹೇಮರೆಡ್ಡಿ ಬ.ಮೇಟಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಬಸರಕೋಡ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದಿಂದ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 49ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ಅಧಿಕಾರ ವಹಿಸಿಕೊಂಡು ಮಾತು ಕೊಟ್ಟಂತೆ ರೈತರಿಗೆ ರಸಗೊಬ್ಬರ, ಬೀಜ ಹಾಗೂ ಕೀಟನಾಶಕ ಸ್ಥಳೀಯವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ರಸಗೊಬ್ಬರ ಮಳಿಗೆ ತೆರೆಯಲಾಗಿದ್ದು ಒಂದೇ ವರ್ಷದಲ್ಲಿ 1.22 ಕೋಟಿ ರೂಪಾಯಿ ಬೀಜ, ಗೊಬ್ಬರ, ಕೀಟನಾಶಕ ಖರೀದಿಸಿದ್ದು 92.26 ಲಕ್ಷ ರೂಪಾಯಿ ಗಳಷ್ಟು ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟವಾಗಿದೆ ಎಂದು ತಿಳಿಸಿದರು.

ಮುಂಬರುವ ವರ್ಷದಲ್ಲಿ ಈ ಭಾಗದ ರೈತರಿಗೆ ದ್ರಾಕ್ಷಿ ಸಂಸ್ಕರಣೆಗೆ ಕೋಲ್ಡ್ ಸ್ಟೋರೇಜ್ ತೆರೆಯುವ ಉದ್ದೇಶ ಇಟ್ಟುಕೊಂಡಿದ್ದು ಬಸರಕೋಡದ ಸಂಘಕ್ಕೆ ಸ್ವಂತ ಕಟ್ಟಡವನ್ನು ನಿರ್ಮಿಸಿ ಮುಂದಿನ ವರ್ಷದಲ್ಲಿ ರೈತರ ಸಭೆಯನ್ನು ಅಲ್ಲಿಯೇ ನಡೆಸುವುದಾಗಿ ತಿಳಿಸಿದರು.

ಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ರವಿ ಗುರಿಕಾರ, ಪವಾಡ ಬಸವೇಶ್ವರ ಸಹಕಾರಿ ಪತ್ತಿನ ಸಂಘದ ಉಪಾಧ್ಯಕ್ಷ ಡಿ.ಬಿ.ಬೇಲಾಳ, ಪಬ ಸಂಸ್ಥೆಯ ಅಧ್ಯಕ್ಷ ಕೆ.ವಾಯ್.ಬಿರಾದಾರ, ಶರಣ ಸೋಮನಾಳದ ಮಹದೇವಯ್ಯ ಶಾಸ್ತ್ರೀಗಳು ಮಾತನಾಡಿದರು.

ಸಂಘದ ಉಪಾಧ್ಯಕ್ಷ ಬಾಬು ಸೂಳಿಭಾವಿ, ನಿರ್ದೇಶಕರಾದ ಸಿಂಧೂಬಲ್ಲಾಳ ನಾಡಗೌಡ, ಸುನೀಲ ಸೂಳಿಭಾವಿ, ಸೋಮಪ್ಪ ಮೇಟಿ, ಬಸವರಾಜ ಪಾಟೀಲ್, ಲಕ್ಕಪ್ಪ ಸೋಮನಾಳ, ಶಾಂತಪ್ಪ ಸಂಕನಾಳ, ಮಡಿವಾಳಪ್ಪ ತಳವಾರ, ಪಾರ್ವತಿ ಸಾಲಿಮಠ, ಸಿದ್ದಮ್ಮ ಬಿರಾದಾರ, ಯಲ್ಲಪ್ಪ ಚಲವಾದಿ, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಎ.ಎಸ್.ಸಾಲಿಮಠ, ಮಾಣಿಕ ಸಗರಿ, ಪ್ರಭಾರ ಸಿಇಒ ಬಸನಗೌಡ ಕೊಣ್ಣೂರ ಮೊದಲಾದವರು ಇದ್ದರು.ಪ್ರಕಾಶ ಗೋಂಧಳೆ ನಿರೂಪಿಸಿದರು.

ಹಿಂದಿನ ಆಡಳಿತ ಮಂಡಳಿಯ ವಿರುದ್ಧ ವಾಗ್ದಾಳಿ

ಸಂಘದಲ್ಲಿ ಎಫ್.ಡಿ ಇಟ್ಟಿರುವವರಿಗೆ ಹಣ ಮರಳಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಹಿಂದಿನ ಆಡಳಿತ ಮಂಡಳಿಯವರು, ಸಿಇಒ ಈವರೆಗೂ ಆ ದಾಖಲೆಗಳನ್ನು ಸಂಘಕ್ಕೆ ಒಪ್ಪಿಸಿಲ್ಲ. ಹೀಗಾಗಿ ಜನರಿಗೆ ಅವರು ಇಟ್ಟಿರುವ ಹಣ ಕೊಡಲು ಆಗುತ್ತಿಲ್ಲ. ನಿಮ್ಮ ಹಣ ಎಲ್ಲೂ ಹೋಗಿಲ್ಲ ಬ್ಯಾಂಕಿನಲ್ಲಿ ಜಮೆ ಇದೆ. ಆದರೆ ಹಿಂದಿನ ಆಡಳಿತ ಮಂಡಳಿಯವರು ದಾಖಲೆಗಳನ್ನು ಕೊಟ್ಟಿರುವುದಾಗಿ ಜನರೆದುರಿಗೆ ತಪ್ಪು ಮಾಹಿತಿ ನೀಡುತ್ತಾ ಹೋಗುತ್ತಿದ್ದಾರೆ. ಪ್ರತಿವರ್ಷ ಇದನ್ನು ಹೇಳುವುದಕ್ಕೆ ನಮಗೂ ಬೇಸರವಾಗಿದೆ ಎಂದು ಸಂಘದ ಅಧ್ಯಕ್ಷ ಹೇಮರೆಡ್ಡಿ ಮೇಟಿ ಹಿಂದಿನ ಆಡಳಿತ ಮಂಡಳಿ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: Astrology: ಈ ರಾಶಿಯವರು ಹಣಕಾಶಿನ ವ್ಯವಹಾರದಿಂದ ಇಂದು ದೂರ ಇರುವುದು ಉತ್ತಮ

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ