Hemareddy Matei who lashed out at the previous administration

ದ್ರಾಕ್ಷಿ ಬೆಳೆಗಾರರ ಅನುಕೂಲಕ್ಕೆ ಕೋಲ್ಡ್ ಸ್ಟೋರೇಜ್ ಸ್ಥಾಪನೆ: ಹಿಂದಿನ ಆಡಳಿತ ಮಂಡಳಿ ವಿರುದ್ಧ ವಾಗ್ದಾಳಿ ನಡೆಸಿದ ಹೇಮರೆಡ್ಡಿ ಮೇಟಿ

ದ್ರಾಕ್ಷಿ ಬೆಳೆಗಾರರ ಅನುಕೂಲಕ್ಕೆ ಕೋಲ್ಡ್ ಸ್ಟೋರೇಜ್ ಸ್ಥಾಪನೆ: ಹಿಂದಿನ ಆಡಳಿತ ಮಂಡಳಿ ವಿರುದ್ಧ ವಾಗ್ದಾಳಿ ನಡೆಸಿದ ಹೇಮರೆಡ್ಡಿ ಮೇಟಿ

ಮುದ್ದೇಬಿಹಾಳ : 40 ವರ್ಷಗಳ ಅವಧಿಯಲ್ಲಿ ಈ ಹಿಂದಿನ ಆಡಳಿತ ಮಂಡಳಿಯವರು ರೈತರಿಗೆ ಕೊಟ್ಟಿದ್ದ ಸಾಲದ ಪ್ರಮಾಣಕ್ಕಿಂತಲೂ ಅದರ ದುಪ್ಪಟ್ಟು ಸಂಖ್ಯೆಯ ರೈತರಿಗೆ ನಾವು ಅಧಿಕಾರ ವಹಿಸಿಕೊಂಡ ನಾಲ್ಕೂವರೆ ವರ್ಷದ ಅವಧಿಯಲ್ಲಿ ಸಾಲ ವಿತರಣೆ ಮಾಡಿದ್ದೇವೆ ಎಂದು ಬಸರಕೋಡ ವಿವಿಧೋದ್ಧೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಹೇಮರೆಡ್ಡಿ ಬ.ಮೇಟಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಬಸರಕೋಡ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದಿಂದ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 49ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ಅಧಿಕಾರ ವಹಿಸಿಕೊಂಡು ಮಾತು ಕೊಟ್ಟಂತೆ ರೈತರಿಗೆ ರಸಗೊಬ್ಬರ, ಬೀಜ ಹಾಗೂ ಕೀಟನಾಶಕ ಸ್ಥಳೀಯವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ರಸಗೊಬ್ಬರ ಮಳಿಗೆ ತೆರೆಯಲಾಗಿದ್ದು ಒಂದೇ ವರ್ಷದಲ್ಲಿ 1.22 ಕೋಟಿ ರೂಪಾಯಿ ಬೀಜ, ಗೊಬ್ಬರ, ಕೀಟನಾಶಕ ಖರೀದಿಸಿದ್ದು 92.26 ಲಕ್ಷ ರೂಪಾಯಿ ಗಳಷ್ಟು ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟವಾಗಿದೆ ಎಂದು ತಿಳಿಸಿದರು.

ಮುಂಬರುವ ವರ್ಷದಲ್ಲಿ ಈ ಭಾಗದ ರೈತರಿಗೆ ದ್ರಾಕ್ಷಿ ಸಂಸ್ಕರಣೆಗೆ ಕೋಲ್ಡ್ ಸ್ಟೋರೇಜ್ ತೆರೆಯುವ ಉದ್ದೇಶ ಇಟ್ಟುಕೊಂಡಿದ್ದು ಬಸರಕೋಡದ ಸಂಘಕ್ಕೆ ಸ್ವಂತ ಕಟ್ಟಡವನ್ನು ನಿರ್ಮಿಸಿ ಮುಂದಿನ ವರ್ಷದಲ್ಲಿ ರೈತರ ಸಭೆಯನ್ನು ಅಲ್ಲಿಯೇ ನಡೆಸುವುದಾಗಿ ತಿಳಿಸಿದರು.

ಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ರವಿ ಗುರಿಕಾರ, ಪವಾಡ ಬಸವೇಶ್ವರ ಸಹಕಾರಿ ಪತ್ತಿನ ಸಂಘದ ಉಪಾಧ್ಯಕ್ಷ ಡಿ.ಬಿ.ಬೇಲಾಳ, ಪಬ ಸಂಸ್ಥೆಯ ಅಧ್ಯಕ್ಷ ಕೆ.ವಾಯ್.ಬಿರಾದಾರ, ಶರಣ ಸೋಮನಾಳದ ಮಹದೇವಯ್ಯ ಶಾಸ್ತ್ರೀಗಳು ಮಾತನಾಡಿದರು.

ಸಂಘದ ಉಪಾಧ್ಯಕ್ಷ ಬಾಬು ಸೂಳಿಭಾವಿ, ನಿರ್ದೇಶಕರಾದ ಸಿಂಧೂಬಲ್ಲಾಳ ನಾಡಗೌಡ, ಸುನೀಲ ಸೂಳಿಭಾವಿ, ಸೋಮಪ್ಪ ಮೇಟಿ, ಬಸವರಾಜ ಪಾಟೀಲ್, ಲಕ್ಕಪ್ಪ ಸೋಮನಾಳ, ಶಾಂತಪ್ಪ ಸಂಕನಾಳ, ಮಡಿವಾಳಪ್ಪ ತಳವಾರ, ಪಾರ್ವತಿ ಸಾಲಿಮಠ, ಸಿದ್ದಮ್ಮ ಬಿರಾದಾರ, ಯಲ್ಲಪ್ಪ ಚಲವಾದಿ, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಎ.ಎಸ್.ಸಾಲಿಮಠ, ಮಾಣಿಕ ಸಗರಿ, ಪ್ರಭಾರ ಸಿಇಒ ಬಸನಗೌಡ ಕೊಣ್ಣೂರ ಮೊದಲಾದವರು ಇದ್ದರು.ಪ್ರಕಾಶ ಗೋಂಧಳೆ ನಿರೂಪಿಸಿದರು.

ಹಿಂದಿನ ಆಡಳಿತ ಮಂಡಳಿಯ ವಿರುದ್ಧ ವಾಗ್ದಾಳಿ

ಸಂಘದಲ್ಲಿ ಎಫ್.ಡಿ ಇಟ್ಟಿರುವವರಿಗೆ ಹಣ ಮರಳಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಹಿಂದಿನ ಆಡಳಿತ ಮಂಡಳಿಯವರು, ಸಿಇಒ ಈವರೆಗೂ ಆ ದಾಖಲೆಗಳನ್ನು ಸಂಘಕ್ಕೆ ಒಪ್ಪಿಸಿಲ್ಲ. ಹೀಗಾಗಿ ಜನರಿಗೆ ಅವರು ಇಟ್ಟಿರುವ ಹಣ ಕೊಡಲು ಆಗುತ್ತಿಲ್ಲ. ನಿಮ್ಮ ಹಣ ಎಲ್ಲೂ ಹೋಗಿಲ್ಲ ಬ್ಯಾಂಕಿನಲ್ಲಿ ಜಮೆ ಇದೆ. ಆದರೆ ಹಿಂದಿನ ಆಡಳಿತ ಮಂಡಳಿಯವರು ದಾಖಲೆಗಳನ್ನು ಕೊಟ್ಟಿರುವುದಾಗಿ ಜನರೆದುರಿಗೆ ತಪ್ಪು ಮಾಹಿತಿ ನೀಡುತ್ತಾ ಹೋಗುತ್ತಿದ್ದಾರೆ. ಪ್ರತಿವರ್ಷ ಇದನ್ನು ಹೇಳುವುದಕ್ಕೆ ನಮಗೂ ಬೇಸರವಾಗಿದೆ ಎಂದು ಸಂಘದ ಅಧ್ಯಕ್ಷ ಹೇಮರೆಡ್ಡಿ ಮೇಟಿ ಹಿಂದಿನ ಆಡಳಿತ ಮಂಡಳಿ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: Astrology: ಈ ರಾಶಿಯವರು ಹಣಕಾಶಿನ ವ್ಯವಹಾರದಿಂದ ಇಂದು ದೂರ ಇರುವುದು ಉತ್ತಮ

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ