Muda case DCM DK Shivakumar press meet in Bengaluru

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ದೆಹಲಿ ನಾಯಕರು ನಿಮಗೆ ಆಹ್ವಾನ ನೀಡಿದ್ದಾರಾ ಎಂದು ಕೇಳಿದಾಗ ಈ ರೀತಿ ಉತ್ತರಿಸಿದರು.

“ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್ ನಲ್ಲಿ ತಿರಸ್ಕೃ ತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು.

ವಿಧಾನ ಮಂಡಲ ಅಧಿವೇಶನದ ಬಳಿಕ ನೀವು ಮತ್ತು ಸಿಎಂ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಎಂದು ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಆ ರೀತಿ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ. ನಾನು ಕದ್ದುಮುಚ್ಚಿ ಹೋಗುವುದಿಲ್ಲ” ಎಂದರು.

ಮಂಗಳವಾರ ದೆಹಲಿಗೆ ಪ್ರಯಾಣ:

ದೆಹಲಿ ಪೊಲೀಸರ ವಿಚಾರಣೆಗೆ ಹಾಜರಾಗುವ ಬಗ್ಗೆ ಕೇಳಿದಾಗ, “ನಾನು ಮಂಗಳವಾರ ದೆಹಲಿಗೆ ಹೋಗುತ್ತಿದ್ದು, ಆಗ ದೆಹಲಿ ಪೊಲೀಸರನ್ನು ಭೇಟಿ ಮಾಡುವೆ. ಅಂದು ಕೇಂದ್ರ ಜಲಶಕ್ತಿ ಸಚಿವರು ನದಿ ಜೋಡಣೆ ವಿಚಾರವಾಗಿ ಸಭೆ ಕರೆದಿದ್ದಾರೆ. ಅಂದು ನಮ್ಮ ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಕೃಷ್ಣ ಮೇಲ್ದಂಡೆ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ ವಿಚಾರವಾಗಿ ಚರ್ಚೆ ಮಾಡುವೆ ಎಂದರು.

ಇದೇ ವೇಳೆ ಕೇಂದ್ರ ಅರಣ್ಯ ಸಚಿವರು, ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಿರುವೆ. ರಾಜ್ಯದ ಹಿತಾಸಕ್ತಿ ವಿಚಾರವಾಗಿ ನಾನು ಅವರನ್ನು ಭೇಟಿ ಮಾಡಲು ತೀರ್ಮಾನಿಸಿರುವೆ. ರಾಜ್ಯದ ಸಂಸದರ ಜೊತೆಗೆ ಭೇಟಿಯಾಗುವ ಆಲೋಚನೆ ಇತ್ತು. ಇವೆಲ್ಲ ಆದ ನಂತರ ಅವರು ಬಂದರೆ ಪ್ರಧಾನಮಂತ್ರಿಗಳನ್ನೂ ಭೇಟಿ ಮಾಡುವೆ” ಎಂದು ತಿಳಿಸಿದರು.

ನಾಗಸಾಧುಗಳು ಆಶೀರ್ವಾದ ಮಾಡಿರುವ ಬಗ್ಗೆ ಕೇಳಿದಾಗ, “ಅವರು ಮನೆಗೆ ಹುಡುಕಿಕೊಂಡು ಬಂದು ಆಶೀರ್ವಾದ ಮಾಡಿದ್ದಾರೆ. ಮನೆಗೆ ಬಂದವರನ್ನು ಬೇಡ ಎನ್ನಲು ಆಗುವುದಿಲ್ಲ. ರಾಜಕೀಯದಲ್ಲಿರುವ ಕಾರಣ ನಮಗೆ ಸಾಧು ಸಂತರು, ಸ್ವಾಮೀಜಿಗಳು, ಹಿರಿಯರು ಸೇರಿದಂತೆ ಎಲ್ಲಾ ರೀತಿಯ ಜನರೂ ನಮಗೆ ಬೇಕು.
ನಮ್ಮ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ನಡೆಸುತ್ತಿದೆ. ವಕ್ಫ್, ಚರ್ಚ್ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಿಗೂ ಸಹಾಯ ಮಾಡಲಾಗುತ್ತಿದೆ” ಎಂದು ತಿಳಿಸಿದರು.

Latest News

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12 ಗಂಟೆಗೆ ಪೂರ್ಣಗೊಂಡಿತು.ಮತಎಣಿಕೆ ಕಾರ್ಯವನ್ನು ಕಂದಾಯ ಇಲಾಖೆಯವರಿಗೆ ವಹಿಸಿದ್ದರಿಂದ ಯಾವುದೇ ಗೊಂದಲಗಳಿಲ್ಲದoತೆ ಫಲಿತಾಂಶ ಪ್ರಕಟಿಸಲಾಯಿತು. ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್,