Muda case DCM DK Shivakumar press meet in Bengaluru

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ದೆಹಲಿ ನಾಯಕರು ನಿಮಗೆ ಆಹ್ವಾನ ನೀಡಿದ್ದಾರಾ ಎಂದು ಕೇಳಿದಾಗ ಈ ರೀತಿ ಉತ್ತರಿಸಿದರು.

“ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್ ನಲ್ಲಿ ತಿರಸ್ಕೃ ತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು.

ವಿಧಾನ ಮಂಡಲ ಅಧಿವೇಶನದ ಬಳಿಕ ನೀವು ಮತ್ತು ಸಿಎಂ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಎಂದು ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಆ ರೀತಿ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ. ನಾನು ಕದ್ದುಮುಚ್ಚಿ ಹೋಗುವುದಿಲ್ಲ” ಎಂದರು.

ಮಂಗಳವಾರ ದೆಹಲಿಗೆ ಪ್ರಯಾಣ:

ದೆಹಲಿ ಪೊಲೀಸರ ವಿಚಾರಣೆಗೆ ಹಾಜರಾಗುವ ಬಗ್ಗೆ ಕೇಳಿದಾಗ, “ನಾನು ಮಂಗಳವಾರ ದೆಹಲಿಗೆ ಹೋಗುತ್ತಿದ್ದು, ಆಗ ದೆಹಲಿ ಪೊಲೀಸರನ್ನು ಭೇಟಿ ಮಾಡುವೆ. ಅಂದು ಕೇಂದ್ರ ಜಲಶಕ್ತಿ ಸಚಿವರು ನದಿ ಜೋಡಣೆ ವಿಚಾರವಾಗಿ ಸಭೆ ಕರೆದಿದ್ದಾರೆ. ಅಂದು ನಮ್ಮ ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಕೃಷ್ಣ ಮೇಲ್ದಂಡೆ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ ವಿಚಾರವಾಗಿ ಚರ್ಚೆ ಮಾಡುವೆ ಎಂದರು.

ಇದೇ ವೇಳೆ ಕೇಂದ್ರ ಅರಣ್ಯ ಸಚಿವರು, ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಿರುವೆ. ರಾಜ್ಯದ ಹಿತಾಸಕ್ತಿ ವಿಚಾರವಾಗಿ ನಾನು ಅವರನ್ನು ಭೇಟಿ ಮಾಡಲು ತೀರ್ಮಾನಿಸಿರುವೆ. ರಾಜ್ಯದ ಸಂಸದರ ಜೊತೆಗೆ ಭೇಟಿಯಾಗುವ ಆಲೋಚನೆ ಇತ್ತು. ಇವೆಲ್ಲ ಆದ ನಂತರ ಅವರು ಬಂದರೆ ಪ್ರಧಾನಮಂತ್ರಿಗಳನ್ನೂ ಭೇಟಿ ಮಾಡುವೆ” ಎಂದು ತಿಳಿಸಿದರು.

ನಾಗಸಾಧುಗಳು ಆಶೀರ್ವಾದ ಮಾಡಿರುವ ಬಗ್ಗೆ ಕೇಳಿದಾಗ, “ಅವರು ಮನೆಗೆ ಹುಡುಕಿಕೊಂಡು ಬಂದು ಆಶೀರ್ವಾದ ಮಾಡಿದ್ದಾರೆ. ಮನೆಗೆ ಬಂದವರನ್ನು ಬೇಡ ಎನ್ನಲು ಆಗುವುದಿಲ್ಲ. ರಾಜಕೀಯದಲ್ಲಿರುವ ಕಾರಣ ನಮಗೆ ಸಾಧು ಸಂತರು, ಸ್ವಾಮೀಜಿಗಳು, ಹಿರಿಯರು ಸೇರಿದಂತೆ ಎಲ್ಲಾ ರೀತಿಯ ಜನರೂ ನಮಗೆ ಬೇಕು.
ನಮ್ಮ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ನಡೆಸುತ್ತಿದೆ. ವಕ್ಫ್, ಚರ್ಚ್ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಿಗೂ ಸಹಾಯ ಮಾಡಲಾಗುತ್ತಿದೆ” ಎಂದು ತಿಳಿಸಿದರು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ