High Court judges meet.. Social coexistence is possible through law: Justice M.Y. Arun

ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ.. ಕಾನೂನಿಂದ ಸಾಮಾಜಿಕ ಸಹಬಾಳ್ವೆ ಸಾಧ್ಯ: ನ್ಯಾಯಮೂರ್ತಿ ಎಂ.ಆಯ್.ಅರುಣ

ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ.. ಕಾನೂನಿಂದ ಸಾಮಾಜಿಕ ಸಹಬಾಳ್ವೆ ಸಾಧ್ಯ: ನ್ಯಾಯಮೂರ್ತಿ ಎಂ.ಆಯ್.ಅರುಣ

ಮುದ್ದೇಬಿಹಾಳ : ಸಾಮಾಜಿಕ ಸಹಬಾಳ್ವೆ ಸಾಧ್ಯವಾಗಬೇಕಾದರೆ ಅದು ಕಾನೂನಿಂದ ಮಾತ್ರ ಸಾಧ್ಯವಾಗುತ್ತದೆ. ವಕೀಲರು ಸಮಾಜವನ್ನು ಸರಿದಾರಿಯಲ್ಲಿ ಕರೆದೊಯ್ಯುವ ಮಹತ್ವದ ಪಾತ್ರ ನಿಭಾಯಿಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ವಿಜಯಪುರ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಆಯ್.ಅರುಣ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ನ್ಯಾಯಾಲಯಕ್ಕೆ ಭಾನುವಾರ ಔಪಚಾರಿಕವಾಗಿ ಭೇಟಿ ನೀಡಿ ಅವರು ಇಲ್ಲಿನ ವಕೀಲರ ಸಂಘದಿಂದ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ವಕೀಲರು ನ್ಯಾಯಾಲಯದಲ್ಲಿ ಕೇಸ್ ಒಂದನ್ನು ನಡೆಸುತ್ತಿರುವಾಗ ಆ ಕಕ್ಷಿದಾರರು ತಮ್ಮ ಕುಟುಂಬದ ಸದಸ್ಯರಂತೆ ವಕೀಲರನ್ನು ಕಾಣುತ್ತಾರೆ. ಅವರಿಗೆ ಸರಿಯಾದ ದಾರಿ ತೋರುವುದು ವಕೀಲರ ಕರ್ತವ್ಯವಾಗಿದೆ ಎಂದರು.

ಕೇವಲ ವಕೀಲ ವೃತ್ತಿಯ ಜೊತೆಗೆ ಬೇರೆ ಬೇರೆ ವೃತ್ತಿಯನ್ನು ಕೈಗೊಳ್ಳುವ ಅವಶ್ಯಕತೆ ಗ್ರಾಮೀಣ ಭಾಗದಲ್ಲಿರುವ ಕೋರ್ಟ್ಗಳಲ್ಲಿ ಕಾರ್ಯನಿರ್ವಹಿಸುವ ವಕೀಲರಿಗೆ ಇದೆ. ತಂತ್ರಜ್ಞಾನ ಸಾಕಷ್ಟು ಮುಂದುವರೆದಿದ್ದು ಮುದ್ದೇಬಿಹಾಳದಲ್ಲಿಯೇ ಕೂತು ಕಲಬುರಗಿ, ಬೆಂಗಳೂರು ಕೋರ್ಟ್ನಲ್ಲಿ ಕೇಸ್ ನಡೆಸಬಹುದಾಗಿದೆ. ಅಂತಹ ತಂತ್ರಜ್ಞಾನದ ಬಳಕೆಯನ್ನು ನುರಿತ ತಜ್ಞರಿಂದ ತಿಳಿದು ಅದನ್ನು ಅನುಷ್ಠಾನಕ್ಕೆ ತಂದರೆ ವಕೀಲರ ವೃತ್ತಿಪರತೆಯಲ್ಲಿ ಸುಧಾರಣೆ ಕಾಣಲು ಸಾಧ್ಯವಿದೆ. ಪೇಪರ್‌ಲೆಸ್ ಕೋರ್ಟ್ ನಡೆಸುವ ಕಾರ್ಯಕ್ಕೆ ವಕೀಲರು ಒತ್ತು ನೀಡಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮಾತನಾಡಿ, ನಮ್ಮ ಭಾಗದಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಈ ಕಟ್ಟಡ ಈಗಿನ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಅವಧಿಯಲ್ಲಿ ಸದ್ಯದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರ ಶ್ರಮದಿಂದ ನಿರ್ಮಾಣವಾಗಿದೆ.ಲಾಯರ್ ಚೇಂರ‍್ಸ್ ಹಾಗೂ ಎಪಿಪಿ ಕಚೇರಿ ಕಟ್ಟಡ ನಿರ್ಮಾಣವಾಗಿದ್ದು ಅದರ ಲೋಕಾರ್ಪಣೆಗೆ ಶೀಘ್ರ ಆಗಲಿದೆ.ಜಿಲ್ಲಾ ನ್ಯಾಯಾಲಯದ ಬೇಡಿಕೆ, ತಾಳಿಕೋಟಿಯಲ್ಲಿ ಕಾಯಂ ಕೋರ್ಟ್ ಸ್ಥಾಪನೆ ಬಗ್ಗೆ ಆದಷ್ಟು ಬೇಗ ಕಾರ್ಯಗತಗೊಳಿಸುವ ಕಾರ್ಯ ಆಗಬೇಕು ಎಂದರು.

ಜಿಲ್ಲಾ ನ್ಯಾಯಾಧೀಶರಾದ ಶಿವಾಜಿ ನಲವಡೆ, ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ, ಸಂಪತ್ತಕುಮಾರ ಬಳೂಲಗಿಡದ, ಮಲ್ಲಿಕಾರ್ಜುನ ಅಂಬಲಿ, ಅರವಿಂದ ಹಾಗರಗಿ ಇದ್ದರು.

ಇದನ್ನೂ ಓದಿ: ಸೆ.29 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ವಕೀಲರಾದ ಎಚ್.ಜಿ.ನಾಗೋಡ ಸ್ವಾಗತಿಸಿದರು. ಎನ್.ಆರ್.ಮೊಕಾಶಿ ನಿರೂಪಿಸಿದರು. ಎಸ್.ಜಿ.ಕುಲಕರ್ಣಿ ಪರಿಚಯಿಸಿದರು.

ಇದಕ್ಕೂ ಮುನ್ನ ಮುದ್ದೇಬಿಹಾಳದ ನ್ಯಾಯಾಲಯದ ಕಟ್ಟಡ ಹಾಗೂ ಲಾರ‍್ಸ್ ಚೇಂರ‍್ಸ್,ಎಪಿಪಿ ನೂತನ ಕಟ್ಟಡವನ್ನು ನ್ಯಾಯಮೂರ್ತಿ ಅರುಣ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮುದ್ದೇಬಿಹಾಳಕ್ಕೆ ಪ್ರಥಮ ಬಾರಿ ಭೇಟಿ ನೀಡಿದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ವಕೀಲರ ಸಂಘದವರು ಸನ್ಮಾನಿಸಿದರು.


ಕಾರ್ಯಕ್ರಮ ನಿಗದಿಯಾಗಿದ್ದು ಬೆಳಗ್ಗೆ 11 ಗಂಟೆಗೆ ಇದ್ದರೂ ಬ.ಬಾಗೇವಾಡಿ ಕಾರ್ಯಕ್ರಮ ಮುಗಿಸಿಕೊಂಡು ಬರುವಷ್ಟರಲ್ಲೇ ಮದ್ಯಾಹ್ನ 3.20ರ ಹೊತ್ತಾಗಿತ್ತು. ನ್ಯಾಯಾಲಯದ ಕಟ್ಟಡ ವೀಕ್ಷಣೆ ಬಳಿಕ ಕಾರ್ಯಕ್ರಮಕ್ಕೆ ಆಗಮಿಸಿದ ನ್ಯಾಯಮೂರ್ತಿಗಳು ತಮ್ಮ ಭಾಷಣದಲ್ಲಿ ತಡವಾಗಿ ಆಗಮಿಸಿದ್ದಕ್ಕೆ ವಕೀಲ ವೃಂದದವರಲ್ಲಿ ಕ್ಷಮೆ ಕೋರಿದರು.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ