High Court judges meet.. Social coexistence is possible through law: Justice M.Y. Arun

ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ.. ಕಾನೂನಿಂದ ಸಾಮಾಜಿಕ ಸಹಬಾಳ್ವೆ ಸಾಧ್ಯ: ನ್ಯಾಯಮೂರ್ತಿ ಎಂ.ಆಯ್.ಅರುಣ

ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ.. ಕಾನೂನಿಂದ ಸಾಮಾಜಿಕ ಸಹಬಾಳ್ವೆ ಸಾಧ್ಯ: ನ್ಯಾಯಮೂರ್ತಿ ಎಂ.ಆಯ್.ಅರುಣ

ಮುದ್ದೇಬಿಹಾಳ : ಸಾಮಾಜಿಕ ಸಹಬಾಳ್ವೆ ಸಾಧ್ಯವಾಗಬೇಕಾದರೆ ಅದು ಕಾನೂನಿಂದ ಮಾತ್ರ ಸಾಧ್ಯವಾಗುತ್ತದೆ. ವಕೀಲರು ಸಮಾಜವನ್ನು ಸರಿದಾರಿಯಲ್ಲಿ ಕರೆದೊಯ್ಯುವ ಮಹತ್ವದ ಪಾತ್ರ ನಿಭಾಯಿಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ವಿಜಯಪುರ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಆಯ್.ಅರುಣ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ನ್ಯಾಯಾಲಯಕ್ಕೆ ಭಾನುವಾರ ಔಪಚಾರಿಕವಾಗಿ ಭೇಟಿ ನೀಡಿ ಅವರು ಇಲ್ಲಿನ ವಕೀಲರ ಸಂಘದಿಂದ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ವಕೀಲರು ನ್ಯಾಯಾಲಯದಲ್ಲಿ ಕೇಸ್ ಒಂದನ್ನು ನಡೆಸುತ್ತಿರುವಾಗ ಆ ಕಕ್ಷಿದಾರರು ತಮ್ಮ ಕುಟುಂಬದ ಸದಸ್ಯರಂತೆ ವಕೀಲರನ್ನು ಕಾಣುತ್ತಾರೆ. ಅವರಿಗೆ ಸರಿಯಾದ ದಾರಿ ತೋರುವುದು ವಕೀಲರ ಕರ್ತವ್ಯವಾಗಿದೆ ಎಂದರು.

ಕೇವಲ ವಕೀಲ ವೃತ್ತಿಯ ಜೊತೆಗೆ ಬೇರೆ ಬೇರೆ ವೃತ್ತಿಯನ್ನು ಕೈಗೊಳ್ಳುವ ಅವಶ್ಯಕತೆ ಗ್ರಾಮೀಣ ಭಾಗದಲ್ಲಿರುವ ಕೋರ್ಟ್ಗಳಲ್ಲಿ ಕಾರ್ಯನಿರ್ವಹಿಸುವ ವಕೀಲರಿಗೆ ಇದೆ. ತಂತ್ರಜ್ಞಾನ ಸಾಕಷ್ಟು ಮುಂದುವರೆದಿದ್ದು ಮುದ್ದೇಬಿಹಾಳದಲ್ಲಿಯೇ ಕೂತು ಕಲಬುರಗಿ, ಬೆಂಗಳೂರು ಕೋರ್ಟ್ನಲ್ಲಿ ಕೇಸ್ ನಡೆಸಬಹುದಾಗಿದೆ. ಅಂತಹ ತಂತ್ರಜ್ಞಾನದ ಬಳಕೆಯನ್ನು ನುರಿತ ತಜ್ಞರಿಂದ ತಿಳಿದು ಅದನ್ನು ಅನುಷ್ಠಾನಕ್ಕೆ ತಂದರೆ ವಕೀಲರ ವೃತ್ತಿಪರತೆಯಲ್ಲಿ ಸುಧಾರಣೆ ಕಾಣಲು ಸಾಧ್ಯವಿದೆ. ಪೇಪರ್‌ಲೆಸ್ ಕೋರ್ಟ್ ನಡೆಸುವ ಕಾರ್ಯಕ್ಕೆ ವಕೀಲರು ಒತ್ತು ನೀಡಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮಾತನಾಡಿ, ನಮ್ಮ ಭಾಗದಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಈ ಕಟ್ಟಡ ಈಗಿನ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಅವಧಿಯಲ್ಲಿ ಸದ್ಯದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರ ಶ್ರಮದಿಂದ ನಿರ್ಮಾಣವಾಗಿದೆ.ಲಾಯರ್ ಚೇಂರ‍್ಸ್ ಹಾಗೂ ಎಪಿಪಿ ಕಚೇರಿ ಕಟ್ಟಡ ನಿರ್ಮಾಣವಾಗಿದ್ದು ಅದರ ಲೋಕಾರ್ಪಣೆಗೆ ಶೀಘ್ರ ಆಗಲಿದೆ.ಜಿಲ್ಲಾ ನ್ಯಾಯಾಲಯದ ಬೇಡಿಕೆ, ತಾಳಿಕೋಟಿಯಲ್ಲಿ ಕಾಯಂ ಕೋರ್ಟ್ ಸ್ಥಾಪನೆ ಬಗ್ಗೆ ಆದಷ್ಟು ಬೇಗ ಕಾರ್ಯಗತಗೊಳಿಸುವ ಕಾರ್ಯ ಆಗಬೇಕು ಎಂದರು.

ಜಿಲ್ಲಾ ನ್ಯಾಯಾಧೀಶರಾದ ಶಿವಾಜಿ ನಲವಡೆ, ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ, ಸಂಪತ್ತಕುಮಾರ ಬಳೂಲಗಿಡದ, ಮಲ್ಲಿಕಾರ್ಜುನ ಅಂಬಲಿ, ಅರವಿಂದ ಹಾಗರಗಿ ಇದ್ದರು.

ಇದನ್ನೂ ಓದಿ: ಸೆ.29 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ವಕೀಲರಾದ ಎಚ್.ಜಿ.ನಾಗೋಡ ಸ್ವಾಗತಿಸಿದರು. ಎನ್.ಆರ್.ಮೊಕಾಶಿ ನಿರೂಪಿಸಿದರು. ಎಸ್.ಜಿ.ಕುಲಕರ್ಣಿ ಪರಿಚಯಿಸಿದರು.

ಇದಕ್ಕೂ ಮುನ್ನ ಮುದ್ದೇಬಿಹಾಳದ ನ್ಯಾಯಾಲಯದ ಕಟ್ಟಡ ಹಾಗೂ ಲಾರ‍್ಸ್ ಚೇಂರ‍್ಸ್,ಎಪಿಪಿ ನೂತನ ಕಟ್ಟಡವನ್ನು ನ್ಯಾಯಮೂರ್ತಿ ಅರುಣ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮುದ್ದೇಬಿಹಾಳಕ್ಕೆ ಪ್ರಥಮ ಬಾರಿ ಭೇಟಿ ನೀಡಿದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ವಕೀಲರ ಸಂಘದವರು ಸನ್ಮಾನಿಸಿದರು.


ಕಾರ್ಯಕ್ರಮ ನಿಗದಿಯಾಗಿದ್ದು ಬೆಳಗ್ಗೆ 11 ಗಂಟೆಗೆ ಇದ್ದರೂ ಬ.ಬಾಗೇವಾಡಿ ಕಾರ್ಯಕ್ರಮ ಮುಗಿಸಿಕೊಂಡು ಬರುವಷ್ಟರಲ್ಲೇ ಮದ್ಯಾಹ್ನ 3.20ರ ಹೊತ್ತಾಗಿತ್ತು. ನ್ಯಾಯಾಲಯದ ಕಟ್ಟಡ ವೀಕ್ಷಣೆ ಬಳಿಕ ಕಾರ್ಯಕ್ರಮಕ್ಕೆ ಆಗಮಿಸಿದ ನ್ಯಾಯಮೂರ್ತಿಗಳು ತಮ್ಮ ಭಾಷಣದಲ್ಲಿ ತಡವಾಗಿ ಆಗಮಿಸಿದ್ದಕ್ಕೆ ವಕೀಲ ವೃಂದದವರಲ್ಲಿ ಕ್ಷಮೆ ಕೋರಿದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ