High Court judges meet.. Social coexistence is possible through law: Justice M.Y. Arun

ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ.. ಕಾನೂನಿಂದ ಸಾಮಾಜಿಕ ಸಹಬಾಳ್ವೆ ಸಾಧ್ಯ: ನ್ಯಾಯಮೂರ್ತಿ ಎಂ.ಆಯ್.ಅರುಣ

ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ.. ಕಾನೂನಿಂದ ಸಾಮಾಜಿಕ ಸಹಬಾಳ್ವೆ ಸಾಧ್ಯ: ನ್ಯಾಯಮೂರ್ತಿ ಎಂ.ಆಯ್.ಅರುಣ

ಮುದ್ದೇಬಿಹಾಳ : ಸಾಮಾಜಿಕ ಸಹಬಾಳ್ವೆ ಸಾಧ್ಯವಾಗಬೇಕಾದರೆ ಅದು ಕಾನೂನಿಂದ ಮಾತ್ರ ಸಾಧ್ಯವಾಗುತ್ತದೆ. ವಕೀಲರು ಸಮಾಜವನ್ನು ಸರಿದಾರಿಯಲ್ಲಿ ಕರೆದೊಯ್ಯುವ ಮಹತ್ವದ ಪಾತ್ರ ನಿಭಾಯಿಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ವಿಜಯಪುರ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಆಯ್.ಅರುಣ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ನ್ಯಾಯಾಲಯಕ್ಕೆ ಭಾನುವಾರ ಔಪಚಾರಿಕವಾಗಿ ಭೇಟಿ ನೀಡಿ ಅವರು ಇಲ್ಲಿನ ವಕೀಲರ ಸಂಘದಿಂದ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ವಕೀಲರು ನ್ಯಾಯಾಲಯದಲ್ಲಿ ಕೇಸ್ ಒಂದನ್ನು ನಡೆಸುತ್ತಿರುವಾಗ ಆ ಕಕ್ಷಿದಾರರು ತಮ್ಮ ಕುಟುಂಬದ ಸದಸ್ಯರಂತೆ ವಕೀಲರನ್ನು ಕಾಣುತ್ತಾರೆ. ಅವರಿಗೆ ಸರಿಯಾದ ದಾರಿ ತೋರುವುದು ವಕೀಲರ ಕರ್ತವ್ಯವಾಗಿದೆ ಎಂದರು.

ಕೇವಲ ವಕೀಲ ವೃತ್ತಿಯ ಜೊತೆಗೆ ಬೇರೆ ಬೇರೆ ವೃತ್ತಿಯನ್ನು ಕೈಗೊಳ್ಳುವ ಅವಶ್ಯಕತೆ ಗ್ರಾಮೀಣ ಭಾಗದಲ್ಲಿರುವ ಕೋರ್ಟ್ಗಳಲ್ಲಿ ಕಾರ್ಯನಿರ್ವಹಿಸುವ ವಕೀಲರಿಗೆ ಇದೆ. ತಂತ್ರಜ್ಞಾನ ಸಾಕಷ್ಟು ಮುಂದುವರೆದಿದ್ದು ಮುದ್ದೇಬಿಹಾಳದಲ್ಲಿಯೇ ಕೂತು ಕಲಬುರಗಿ, ಬೆಂಗಳೂರು ಕೋರ್ಟ್ನಲ್ಲಿ ಕೇಸ್ ನಡೆಸಬಹುದಾಗಿದೆ. ಅಂತಹ ತಂತ್ರಜ್ಞಾನದ ಬಳಕೆಯನ್ನು ನುರಿತ ತಜ್ಞರಿಂದ ತಿಳಿದು ಅದನ್ನು ಅನುಷ್ಠಾನಕ್ಕೆ ತಂದರೆ ವಕೀಲರ ವೃತ್ತಿಪರತೆಯಲ್ಲಿ ಸುಧಾರಣೆ ಕಾಣಲು ಸಾಧ್ಯವಿದೆ. ಪೇಪರ್‌ಲೆಸ್ ಕೋರ್ಟ್ ನಡೆಸುವ ಕಾರ್ಯಕ್ಕೆ ವಕೀಲರು ಒತ್ತು ನೀಡಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮಾತನಾಡಿ, ನಮ್ಮ ಭಾಗದಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಈ ಕಟ್ಟಡ ಈಗಿನ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಅವಧಿಯಲ್ಲಿ ಸದ್ಯದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರ ಶ್ರಮದಿಂದ ನಿರ್ಮಾಣವಾಗಿದೆ.ಲಾಯರ್ ಚೇಂರ‍್ಸ್ ಹಾಗೂ ಎಪಿಪಿ ಕಚೇರಿ ಕಟ್ಟಡ ನಿರ್ಮಾಣವಾಗಿದ್ದು ಅದರ ಲೋಕಾರ್ಪಣೆಗೆ ಶೀಘ್ರ ಆಗಲಿದೆ.ಜಿಲ್ಲಾ ನ್ಯಾಯಾಲಯದ ಬೇಡಿಕೆ, ತಾಳಿಕೋಟಿಯಲ್ಲಿ ಕಾಯಂ ಕೋರ್ಟ್ ಸ್ಥಾಪನೆ ಬಗ್ಗೆ ಆದಷ್ಟು ಬೇಗ ಕಾರ್ಯಗತಗೊಳಿಸುವ ಕಾರ್ಯ ಆಗಬೇಕು ಎಂದರು.

ಜಿಲ್ಲಾ ನ್ಯಾಯಾಧೀಶರಾದ ಶಿವಾಜಿ ನಲವಡೆ, ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ, ಸಂಪತ್ತಕುಮಾರ ಬಳೂಲಗಿಡದ, ಮಲ್ಲಿಕಾರ್ಜುನ ಅಂಬಲಿ, ಅರವಿಂದ ಹಾಗರಗಿ ಇದ್ದರು.

ಇದನ್ನೂ ಓದಿ: ಸೆ.29 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ವಕೀಲರಾದ ಎಚ್.ಜಿ.ನಾಗೋಡ ಸ್ವಾಗತಿಸಿದರು. ಎನ್.ಆರ್.ಮೊಕಾಶಿ ನಿರೂಪಿಸಿದರು. ಎಸ್.ಜಿ.ಕುಲಕರ್ಣಿ ಪರಿಚಯಿಸಿದರು.

ಇದಕ್ಕೂ ಮುನ್ನ ಮುದ್ದೇಬಿಹಾಳದ ನ್ಯಾಯಾಲಯದ ಕಟ್ಟಡ ಹಾಗೂ ಲಾರ‍್ಸ್ ಚೇಂರ‍್ಸ್,ಎಪಿಪಿ ನೂತನ ಕಟ್ಟಡವನ್ನು ನ್ಯಾಯಮೂರ್ತಿ ಅರುಣ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮುದ್ದೇಬಿಹಾಳಕ್ಕೆ ಪ್ರಥಮ ಬಾರಿ ಭೇಟಿ ನೀಡಿದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ವಕೀಲರ ಸಂಘದವರು ಸನ್ಮಾನಿಸಿದರು.


ಕಾರ್ಯಕ್ರಮ ನಿಗದಿಯಾಗಿದ್ದು ಬೆಳಗ್ಗೆ 11 ಗಂಟೆಗೆ ಇದ್ದರೂ ಬ.ಬಾಗೇವಾಡಿ ಕಾರ್ಯಕ್ರಮ ಮುಗಿಸಿಕೊಂಡು ಬರುವಷ್ಟರಲ್ಲೇ ಮದ್ಯಾಹ್ನ 3.20ರ ಹೊತ್ತಾಗಿತ್ತು. ನ್ಯಾಯಾಲಯದ ಕಟ್ಟಡ ವೀಕ್ಷಣೆ ಬಳಿಕ ಕಾರ್ಯಕ್ರಮಕ್ಕೆ ಆಗಮಿಸಿದ ನ್ಯಾಯಮೂರ್ತಿಗಳು ತಮ್ಮ ಭಾಷಣದಲ್ಲಿ ತಡವಾಗಿ ಆಗಮಿಸಿದ್ದಕ್ಕೆ ವಕೀಲ ವೃಂದದವರಲ್ಲಿ ಕ್ಷಮೆ ಕೋರಿದರು.

Latest News

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ ಎಸ್.ಆಯ್.ಆರ್ ಪ್ರಗತಿಯನ್ನು ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ನೇಬಗೇರಿಯ ಭಾಗ ಸಂಖ್ಯೆ 211 ಹಾಗೂ 212ರಲ್ಲಿ,ಮುದ್ದೇಬಿಹಾಳದ ಕಿಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿರುವ ತಹಶೀಲ್ದಾರರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊAಡಿರುವ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ ಹುಡೇದ ಅವರು ಮಂಗಳವಾರ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ನಾನೇ ಕಾರಣ ಎಂದು ಆರೋಪಿಸಿದ್ದು, ಅದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ.ನನ್ನ ಹೋರಾಟವನ್ನು ಹತ್ತಿಕ್ಕಲು ಈ ಸಂಚು ಕೆಲವರು ರೂಪಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿರುವ ಯುವಕ ವೀರೇಶ ಆಲಕೊಪ್ಪರ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆಸ್ಪತ್ರೆಯ ಎದುರಿಗೆ