High Court judges meet.. Social coexistence is possible through law: Justice M.Y. Arun

ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ.. ಕಾನೂನಿಂದ ಸಾಮಾಜಿಕ ಸಹಬಾಳ್ವೆ ಸಾಧ್ಯ: ನ್ಯಾಯಮೂರ್ತಿ ಎಂ.ಆಯ್.ಅರುಣ

ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ.. ಕಾನೂನಿಂದ ಸಾಮಾಜಿಕ ಸಹಬಾಳ್ವೆ ಸಾಧ್ಯ: ನ್ಯಾಯಮೂರ್ತಿ ಎಂ.ಆಯ್.ಅರುಣ

ಮುದ್ದೇಬಿಹಾಳ : ಸಾಮಾಜಿಕ ಸಹಬಾಳ್ವೆ ಸಾಧ್ಯವಾಗಬೇಕಾದರೆ ಅದು ಕಾನೂನಿಂದ ಮಾತ್ರ ಸಾಧ್ಯವಾಗುತ್ತದೆ. ವಕೀಲರು ಸಮಾಜವನ್ನು ಸರಿದಾರಿಯಲ್ಲಿ ಕರೆದೊಯ್ಯುವ ಮಹತ್ವದ ಪಾತ್ರ ನಿಭಾಯಿಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ವಿಜಯಪುರ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಆಯ್.ಅರುಣ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ನ್ಯಾಯಾಲಯಕ್ಕೆ ಭಾನುವಾರ ಔಪಚಾರಿಕವಾಗಿ ಭೇಟಿ ನೀಡಿ ಅವರು ಇಲ್ಲಿನ ವಕೀಲರ ಸಂಘದಿಂದ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ವಕೀಲರು ನ್ಯಾಯಾಲಯದಲ್ಲಿ ಕೇಸ್ ಒಂದನ್ನು ನಡೆಸುತ್ತಿರುವಾಗ ಆ ಕಕ್ಷಿದಾರರು ತಮ್ಮ ಕುಟುಂಬದ ಸದಸ್ಯರಂತೆ ವಕೀಲರನ್ನು ಕಾಣುತ್ತಾರೆ. ಅವರಿಗೆ ಸರಿಯಾದ ದಾರಿ ತೋರುವುದು ವಕೀಲರ ಕರ್ತವ್ಯವಾಗಿದೆ ಎಂದರು.

ಕೇವಲ ವಕೀಲ ವೃತ್ತಿಯ ಜೊತೆಗೆ ಬೇರೆ ಬೇರೆ ವೃತ್ತಿಯನ್ನು ಕೈಗೊಳ್ಳುವ ಅವಶ್ಯಕತೆ ಗ್ರಾಮೀಣ ಭಾಗದಲ್ಲಿರುವ ಕೋರ್ಟ್ಗಳಲ್ಲಿ ಕಾರ್ಯನಿರ್ವಹಿಸುವ ವಕೀಲರಿಗೆ ಇದೆ. ತಂತ್ರಜ್ಞಾನ ಸಾಕಷ್ಟು ಮುಂದುವರೆದಿದ್ದು ಮುದ್ದೇಬಿಹಾಳದಲ್ಲಿಯೇ ಕೂತು ಕಲಬುರಗಿ, ಬೆಂಗಳೂರು ಕೋರ್ಟ್ನಲ್ಲಿ ಕೇಸ್ ನಡೆಸಬಹುದಾಗಿದೆ. ಅಂತಹ ತಂತ್ರಜ್ಞಾನದ ಬಳಕೆಯನ್ನು ನುರಿತ ತಜ್ಞರಿಂದ ತಿಳಿದು ಅದನ್ನು ಅನುಷ್ಠಾನಕ್ಕೆ ತಂದರೆ ವಕೀಲರ ವೃತ್ತಿಪರತೆಯಲ್ಲಿ ಸುಧಾರಣೆ ಕಾಣಲು ಸಾಧ್ಯವಿದೆ. ಪೇಪರ್‌ಲೆಸ್ ಕೋರ್ಟ್ ನಡೆಸುವ ಕಾರ್ಯಕ್ಕೆ ವಕೀಲರು ಒತ್ತು ನೀಡಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮಾತನಾಡಿ, ನಮ್ಮ ಭಾಗದಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಈ ಕಟ್ಟಡ ಈಗಿನ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಅವಧಿಯಲ್ಲಿ ಸದ್ಯದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರ ಶ್ರಮದಿಂದ ನಿರ್ಮಾಣವಾಗಿದೆ.ಲಾಯರ್ ಚೇಂರ‍್ಸ್ ಹಾಗೂ ಎಪಿಪಿ ಕಚೇರಿ ಕಟ್ಟಡ ನಿರ್ಮಾಣವಾಗಿದ್ದು ಅದರ ಲೋಕಾರ್ಪಣೆಗೆ ಶೀಘ್ರ ಆಗಲಿದೆ.ಜಿಲ್ಲಾ ನ್ಯಾಯಾಲಯದ ಬೇಡಿಕೆ, ತಾಳಿಕೋಟಿಯಲ್ಲಿ ಕಾಯಂ ಕೋರ್ಟ್ ಸ್ಥಾಪನೆ ಬಗ್ಗೆ ಆದಷ್ಟು ಬೇಗ ಕಾರ್ಯಗತಗೊಳಿಸುವ ಕಾರ್ಯ ಆಗಬೇಕು ಎಂದರು.

ಜಿಲ್ಲಾ ನ್ಯಾಯಾಧೀಶರಾದ ಶಿವಾಜಿ ನಲವಡೆ, ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ, ಸಂಪತ್ತಕುಮಾರ ಬಳೂಲಗಿಡದ, ಮಲ್ಲಿಕಾರ್ಜುನ ಅಂಬಲಿ, ಅರವಿಂದ ಹಾಗರಗಿ ಇದ್ದರು.

ಇದನ್ನೂ ಓದಿ: ಸೆ.29 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ವಕೀಲರಾದ ಎಚ್.ಜಿ.ನಾಗೋಡ ಸ್ವಾಗತಿಸಿದರು. ಎನ್.ಆರ್.ಮೊಕಾಶಿ ನಿರೂಪಿಸಿದರು. ಎಸ್.ಜಿ.ಕುಲಕರ್ಣಿ ಪರಿಚಯಿಸಿದರು.

ಇದಕ್ಕೂ ಮುನ್ನ ಮುದ್ದೇಬಿಹಾಳದ ನ್ಯಾಯಾಲಯದ ಕಟ್ಟಡ ಹಾಗೂ ಲಾರ‍್ಸ್ ಚೇಂರ‍್ಸ್,ಎಪಿಪಿ ನೂತನ ಕಟ್ಟಡವನ್ನು ನ್ಯಾಯಮೂರ್ತಿ ಅರುಣ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮುದ್ದೇಬಿಹಾಳಕ್ಕೆ ಪ್ರಥಮ ಬಾರಿ ಭೇಟಿ ನೀಡಿದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ವಕೀಲರ ಸಂಘದವರು ಸನ್ಮಾನಿಸಿದರು.


ಕಾರ್ಯಕ್ರಮ ನಿಗದಿಯಾಗಿದ್ದು ಬೆಳಗ್ಗೆ 11 ಗಂಟೆಗೆ ಇದ್ದರೂ ಬ.ಬಾಗೇವಾಡಿ ಕಾರ್ಯಕ್ರಮ ಮುಗಿಸಿಕೊಂಡು ಬರುವಷ್ಟರಲ್ಲೇ ಮದ್ಯಾಹ್ನ 3.20ರ ಹೊತ್ತಾಗಿತ್ತು. ನ್ಯಾಯಾಲಯದ ಕಟ್ಟಡ ವೀಕ್ಷಣೆ ಬಳಿಕ ಕಾರ್ಯಕ್ರಮಕ್ಕೆ ಆಗಮಿಸಿದ ನ್ಯಾಯಮೂರ್ತಿಗಳು ತಮ್ಮ ಭಾಷಣದಲ್ಲಿ ತಡವಾಗಿ ಆಗಮಿಸಿದ್ದಕ್ಕೆ ವಕೀಲ ವೃಂದದವರಲ್ಲಿ ಕ್ಷಮೆ ಕೋರಿದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ