High Court judges meet.. Social coexistence is possible through law: Justice M.Y. Arun

ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ.. ಕಾನೂನಿಂದ ಸಾಮಾಜಿಕ ಸಹಬಾಳ್ವೆ ಸಾಧ್ಯ: ನ್ಯಾಯಮೂರ್ತಿ ಎಂ.ಆಯ್.ಅರುಣ

ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ.. ಕಾನೂನಿಂದ ಸಾಮಾಜಿಕ ಸಹಬಾಳ್ವೆ ಸಾಧ್ಯ: ನ್ಯಾಯಮೂರ್ತಿ ಎಂ.ಆಯ್.ಅರುಣ

ಮುದ್ದೇಬಿಹಾಳ : ಸಾಮಾಜಿಕ ಸಹಬಾಳ್ವೆ ಸಾಧ್ಯವಾಗಬೇಕಾದರೆ ಅದು ಕಾನೂನಿಂದ ಮಾತ್ರ ಸಾಧ್ಯವಾಗುತ್ತದೆ. ವಕೀಲರು ಸಮಾಜವನ್ನು ಸರಿದಾರಿಯಲ್ಲಿ ಕರೆದೊಯ್ಯುವ ಮಹತ್ವದ ಪಾತ್ರ ನಿಭಾಯಿಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ವಿಜಯಪುರ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಆಯ್.ಅರುಣ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ನ್ಯಾಯಾಲಯಕ್ಕೆ ಭಾನುವಾರ ಔಪಚಾರಿಕವಾಗಿ ಭೇಟಿ ನೀಡಿ ಅವರು ಇಲ್ಲಿನ ವಕೀಲರ ಸಂಘದಿಂದ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ವಕೀಲರು ನ್ಯಾಯಾಲಯದಲ್ಲಿ ಕೇಸ್ ಒಂದನ್ನು ನಡೆಸುತ್ತಿರುವಾಗ ಆ ಕಕ್ಷಿದಾರರು ತಮ್ಮ ಕುಟುಂಬದ ಸದಸ್ಯರಂತೆ ವಕೀಲರನ್ನು ಕಾಣುತ್ತಾರೆ. ಅವರಿಗೆ ಸರಿಯಾದ ದಾರಿ ತೋರುವುದು ವಕೀಲರ ಕರ್ತವ್ಯವಾಗಿದೆ ಎಂದರು.

ಕೇವಲ ವಕೀಲ ವೃತ್ತಿಯ ಜೊತೆಗೆ ಬೇರೆ ಬೇರೆ ವೃತ್ತಿಯನ್ನು ಕೈಗೊಳ್ಳುವ ಅವಶ್ಯಕತೆ ಗ್ರಾಮೀಣ ಭಾಗದಲ್ಲಿರುವ ಕೋರ್ಟ್ಗಳಲ್ಲಿ ಕಾರ್ಯನಿರ್ವಹಿಸುವ ವಕೀಲರಿಗೆ ಇದೆ. ತಂತ್ರಜ್ಞಾನ ಸಾಕಷ್ಟು ಮುಂದುವರೆದಿದ್ದು ಮುದ್ದೇಬಿಹಾಳದಲ್ಲಿಯೇ ಕೂತು ಕಲಬುರಗಿ, ಬೆಂಗಳೂರು ಕೋರ್ಟ್ನಲ್ಲಿ ಕೇಸ್ ನಡೆಸಬಹುದಾಗಿದೆ. ಅಂತಹ ತಂತ್ರಜ್ಞಾನದ ಬಳಕೆಯನ್ನು ನುರಿತ ತಜ್ಞರಿಂದ ತಿಳಿದು ಅದನ್ನು ಅನುಷ್ಠಾನಕ್ಕೆ ತಂದರೆ ವಕೀಲರ ವೃತ್ತಿಪರತೆಯಲ್ಲಿ ಸುಧಾರಣೆ ಕಾಣಲು ಸಾಧ್ಯವಿದೆ. ಪೇಪರ್‌ಲೆಸ್ ಕೋರ್ಟ್ ನಡೆಸುವ ಕಾರ್ಯಕ್ಕೆ ವಕೀಲರು ಒತ್ತು ನೀಡಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮಾತನಾಡಿ, ನಮ್ಮ ಭಾಗದಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಈ ಕಟ್ಟಡ ಈಗಿನ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಅವಧಿಯಲ್ಲಿ ಸದ್ಯದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರ ಶ್ರಮದಿಂದ ನಿರ್ಮಾಣವಾಗಿದೆ.ಲಾಯರ್ ಚೇಂರ‍್ಸ್ ಹಾಗೂ ಎಪಿಪಿ ಕಚೇರಿ ಕಟ್ಟಡ ನಿರ್ಮಾಣವಾಗಿದ್ದು ಅದರ ಲೋಕಾರ್ಪಣೆಗೆ ಶೀಘ್ರ ಆಗಲಿದೆ.ಜಿಲ್ಲಾ ನ್ಯಾಯಾಲಯದ ಬೇಡಿಕೆ, ತಾಳಿಕೋಟಿಯಲ್ಲಿ ಕಾಯಂ ಕೋರ್ಟ್ ಸ್ಥಾಪನೆ ಬಗ್ಗೆ ಆದಷ್ಟು ಬೇಗ ಕಾರ್ಯಗತಗೊಳಿಸುವ ಕಾರ್ಯ ಆಗಬೇಕು ಎಂದರು.

ಜಿಲ್ಲಾ ನ್ಯಾಯಾಧೀಶರಾದ ಶಿವಾಜಿ ನಲವಡೆ, ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ, ಸಂಪತ್ತಕುಮಾರ ಬಳೂಲಗಿಡದ, ಮಲ್ಲಿಕಾರ್ಜುನ ಅಂಬಲಿ, ಅರವಿಂದ ಹಾಗರಗಿ ಇದ್ದರು.

ಇದನ್ನೂ ಓದಿ: ಸೆ.29 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ವಕೀಲರಾದ ಎಚ್.ಜಿ.ನಾಗೋಡ ಸ್ವಾಗತಿಸಿದರು. ಎನ್.ಆರ್.ಮೊಕಾಶಿ ನಿರೂಪಿಸಿದರು. ಎಸ್.ಜಿ.ಕುಲಕರ್ಣಿ ಪರಿಚಯಿಸಿದರು.

ಇದಕ್ಕೂ ಮುನ್ನ ಮುದ್ದೇಬಿಹಾಳದ ನ್ಯಾಯಾಲಯದ ಕಟ್ಟಡ ಹಾಗೂ ಲಾರ‍್ಸ್ ಚೇಂರ‍್ಸ್,ಎಪಿಪಿ ನೂತನ ಕಟ್ಟಡವನ್ನು ನ್ಯಾಯಮೂರ್ತಿ ಅರುಣ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮುದ್ದೇಬಿಹಾಳಕ್ಕೆ ಪ್ರಥಮ ಬಾರಿ ಭೇಟಿ ನೀಡಿದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ವಕೀಲರ ಸಂಘದವರು ಸನ್ಮಾನಿಸಿದರು.


ಕಾರ್ಯಕ್ರಮ ನಿಗದಿಯಾಗಿದ್ದು ಬೆಳಗ್ಗೆ 11 ಗಂಟೆಗೆ ಇದ್ದರೂ ಬ.ಬಾಗೇವಾಡಿ ಕಾರ್ಯಕ್ರಮ ಮುಗಿಸಿಕೊಂಡು ಬರುವಷ್ಟರಲ್ಲೇ ಮದ್ಯಾಹ್ನ 3.20ರ ಹೊತ್ತಾಗಿತ್ತು. ನ್ಯಾಯಾಲಯದ ಕಟ್ಟಡ ವೀಕ್ಷಣೆ ಬಳಿಕ ಕಾರ್ಯಕ್ರಮಕ್ಕೆ ಆಗಮಿಸಿದ ನ್ಯಾಯಮೂರ್ತಿಗಳು ತಮ್ಮ ಭಾಷಣದಲ್ಲಿ ತಡವಾಗಿ ಆಗಮಿಸಿದ್ದಕ್ಕೆ ವಕೀಲ ವೃಂದದವರಲ್ಲಿ ಕ್ಷಮೆ ಕೋರಿದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ