High Court notice to APMC for disposal of disputed space

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದಗಳ ಕುರಿತು ತೀರ್ಮಾನ ಕೈಗೊಳ್ಳಲು ಸದರಿ ಜಾಗೆಯನ್ನು ಮೋಜಣಿ ಕಾರ್ಯ ಕೈಗೊಂಡು ಪಿಟಿ ಶೀಟ ತಯಾರಿಸುವಂತೆ ಆದೇಶ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಬುಧವಾರ ಇಲ್ಲಿನ ವಿವಾದಿತ ಜಾಗೆಯನ್ನು ಉಪ ವಿಭಾಗಾಧಿಕಾರಿ ಗುರುನಾಥ ದಡ್ಡಿ ಪರಿಶೀಲನೆ ನಡೆಸಿದರು.

ಎಪಿಎಂಸಿಗೆ ಕೊಟ್ಟಿರುವ ಜಾಗೆ, ರಸ್ತೆಗಳು, ಅತಿಕ್ರಮಣಗೊಂಡಿರುವ ಜಾಗೆಯನ್ನು ವೀಕ್ಷಿಸಿದರು. ಅರ್ಜಿದಾರ ಲಕ್ಷ್ಮಣ ವಾಲಿಕಾರ ಸುದ್ದಿಗಾರರೊಂದಿಗೆ ಮಾತನಾಡಿ, ಎಪಿಎಂಸಿಗೆ ರಿ.ಸ.ನಂ 98ರಲ್ಲಿ 21 ಎಕರೆ 30 ಗುಂಟೆ ಜಮೀನಿದ್ದು ಸದರಿ ಜಮೀನನ್ನು ನಮ್ಮ ಅಜ್ಜನವರು 10 ಎಕರೆ 28 ಗುಂಟೆ ಕ್ರಯಕ್ಕೆ ನೀಡಿದ್ದು 9 ಎಕರೆ 39 ಗುಂಟೆ ಏಪಿಎಂಸಿಗೆ ಭೂಸ್ವಾಧೀನವಾಗಿರುತ್ತದೆ. ಉಳಿದ 1 ಎಕರೆ 3 ಗುಂಟೆ ಜಮೀನನ್ನು ಅಳತೆ ಮಾಡಿ ಪಿಟಿ ಶೀಟ್ ತಯಾರಿಸಿ ಕೊಡುವಂತೆ ಹೈಕೋರ್ಟ್ ಆದೇಶ ಮಾಡಿ ನಾಲ್ಕು ತಿಂಗಳು ಗತಿಸಿದರೂ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಅಧಿಕಾರಿಗಳು ಹೈಕೋರ್ಟ್ ಆದೇಶವನ್ನು ಪಾಲಿಸದೇ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದರು.

ಅರ್ಜಿದಾರ ಲಕ್ಷ್ಮಣ ವಾಲಿಕಾರ, ಉಪ ವಿಭಾಗಾಧಿಕಾರಿಗಳೊಂದಿಗೆ, ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ತಹಸೀಲ್ದಾರ್‌ರು ಸಮರ್ಪಕ ಕ್ರಮವನ್ನು ಕೈಗೊಳ್ಳುತ್ತಿಲ್ಲ ಎಂದು ಅರ್ಜಿದಾರರು ವಾಗ್ವಾದ ನಡೆಸಿದರು. ಅಲ್ಲದೇ ಅಕ್ರಮವಾಗಿ ಕೆಲವರ ಪ್ರಭಾವಕ್ಕೆ ಅಧಿಕಾರಿಗಳು ಒಳಗಾಗಿ ಹೈಕೋರ್ಟ್ ಆದೇಶವನ್ನು ಗಂಭೀರವಾಗಿ ಪರಿಗಣಿಸದೇ ಮೋಜಣಿ ಕಾರ್ಯ ವಿಳಂಬ ಮಾಡುವುದರೊಂದಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ದೂರಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡಿ, ಸದರಿ ಜಮೀನಿನ ವಿವಾದದ ಕುರಿತು ದಾಖಲೆಗಳನ್ನು ಪರಿಶೀಲನೆ ನಡೆಸಿ ಮೇಲಧಿಕಾರಿಗಳ ಅನುಮತಿ ಪಡೆದುಕೊಂಡು ಮರು ಸರ್ವೆಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ತಹಸೀಲ್ದಾರ್ ಬಲರಾಮ ಕಟ್ಟಿಮನಿ, ಭೂದಾಖಲೆಗಳ ಸಹಾಯಕ ನಿರ್ದೇಶಕ ಎಸ್. ಎಸ್. ಸಜ್ಜನ, ನಗರ ಮಾಪನ ಅಧಿಕಾರಿ ಶೈಲಶ್ರೀ ಹಿರೇಮಠ, ಕಂದಾಯ ನಿರೀಕ್ಷಕ ಪವನ ತಳವಾರ ಇದ್ದರು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.