Highest medical award: Rs. crore scholarship from Oxford Patil's NEET Academy

ಅತೀ ಹೆಚ್ಚು ಮೆಡಿಕಲ್ ಕೊಟ್ಟ ಹೆಗ್ಗಳಿಕೆ : ಆಕ್ಸಫರ್ಡ್ ಪಾಟೀಲ್ಸ್ ನೀಟ್ ಅಕಾಡೆಮಿಯಿಂದ ಕೋಟಿ ರೂ.ಸ್ಕಾಲರಶಿಪ್

ಅತೀ ಹೆಚ್ಚು ಮೆಡಿಕಲ್ ಕೊಟ್ಟ ಹೆಗ್ಗಳಿಕೆ : ಆಕ್ಸಫರ್ಡ್ ಪಾಟೀಲ್ಸ್ ನೀಟ್ ಅಕಾಡೆಮಿಯಿಂದ ಕೋಟಿ ರೂ.ಸ್ಕಾಲರಶಿಪ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿಯೇ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಕೊಟ್ಟಿರುವ ಕೀರ್ತಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಗಿದ್ದು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸಂಸ್ಥೆಯಿಂದ ನಿರಂತರವಾಗಿ ಸ್ಕಾಲರಶಿಪ್ ಎಕ್ಸಾಂ ನಡೆಸಿಕೊಂಡು ಬರಲಾಗುತ್ತಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ಹೇಳಿದರು.

ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ನೀಟ್ ಅಕಾಡೆಮಿ ನೇತೃತ್ವದಲ್ಲಿ ಶನಿವಾರ ಸ್ಕಾಲರ್‌ಶಿಪ್ ಎಕ್ಸಾಂ-2025ರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಸಿ ಅವರು ಮಾತನಾಡಿದರು. 2021ರಲ್ಲಿ 143, 2022ರಲ್ಲಿ 145, 2023ರಲ್ಲಿ 156, 2024ರಲ್ಲಿ 172 ವಿದ್ಯಾರ್ಥಿಗಳು ಮೆಡಿಕಲ್ ಸೀಟು ಪಡೆದುಕೊಂಡಿದ್ದಾರೆ. ಈ ವರ್ಷವೂ 170ಕ್ಕೂ ಹೆಚ್ಚು ಮೆಡಿಕಲ್ ಸೀಟುಗಳನ್ನು ಸಂಸ್ಥೆಯಡಿ ಓದಿದ ವಿದ್ಯಾರ್ಥಿಗಳು ಪಡೆದುಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದರು.

ಇದೇ ಪ್ರಥಮ ಬಾರಿಗೆ ನೀಟ್ ಅಕಾಡೆಮಿಯಿಂದ ಸ್ಕಾಲಶಿಪ್ ಎಕ್ಸಾಂ ನಡೆಸಿದ್ದು ಉತ್ತರ ಕರ್ನಾಟಕ ಭಾಗದ ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರೂ ನಮ್ಮ ಸಂಸ್ಥೆಯಲ್ಲಿ ಓದಿದ ವಿದ್ಯಾರ್ಥಿಗಳೊಂದಿಗೆ ಪೈಪೋಟಿ ನೀಡಲು ಸಾಧ್ಯವಾಗಿಲ್ಲ. ನಮ್ಮ ಸಂಸ್ಥೆಯಡಿ ಓದುವ ವಿದ್ಯಾರ್ಥಿಗಳ ಕಠಿಣ ಪರಿಶ್ರಮದ ಓದು ಈ ಸಾಧನೆಗೆ ಕಾರಣವಾಗಿದೆ. ನಮ್ಮ ಸಂಸ್ಥೆಯಿಂದ ಒಂದೇ ವರ್ಷದ ಅವಧಿಯಲ್ಲಿ ವಿವಿಧ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳ ಉಚಿತ ಶಿಕ್ಷಣಕ್ಕಾಗಿ ಆರು ಕೋಟಿ ರೂ. ಗಳಿಗಿಂತಲೂ ಹೆಚ್ಚು ಮೊತ್ತವನ್ನು ಸ್ಕಾಲರ್‌ಶಿಪ್ ರೂಪದಲ್ಲಿ ನೀಡಲಾಗುತ್ತಿದೆ ಎಂದರು.

ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಇಸ್ಮಾಯಿಲ್ ಮನಿಯಾರ ಮಾತನಾಡಿ, ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿ ಅಖೀಲ್ ಅಹ್ಮದ್ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ರ‍್ಯಾಂಕ ಪಡೆದಿರುವುದು ನಮ್ಮೆಲ್ಲರಿಗೆ ಹೆಮ್ಮೆ ತರುವ ಸಂಗತಿ ಎಂದರು.

ನೀಟ್ ಅಕಾಡೆಮಿಯಿಂದ ನಡೆದ ಪರೀಕ್ಷೆಯಲ್ಲಿ 1-20 ನೇ ಸ್ಥಾನ ಪಡೆದ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಊಟ ವಸತಿಯೊಂದಿಗೆ ಒಂದು ವರ್ಷದ ಶಿಕ್ಷಣ ಉಚಿತವಾಗಿ ನೀಡಲಾಗುತ್ತದೆ. 20 -40ನೇ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಒಂದು ವರ್ಷದ ಉಚಿತ ಶಿಕ್ಷಣವನ್ನು ನೀಡಲಾಗುತ್ತದೆ ಎಂದು ಸಂಸ್ಥೆಯಿಂದ ಘೋಷಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರೊ.ನಾಗೇಶ ಬಿರಾಜದಾರ, ರಾಜಶೇಖರ ಹಿರೇಮಠ, ಮಂಜುನಾಥ ಮಂಕಣಿ, ಆನಂದ ನಾವಗಿ, ಸಂದೀಪ ಘೋರ್ಪಡೆ, ಮಹಾಂತೇಶ ಬಿರಾದಾರ ಇದ್ದರು.

ಉಚಿತ ಶಿಕ್ಷಣಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು:
ಪರೀಕ್ಷೆಯಲ್ಲಿ ಮೊದಲ 20 ಸ್ಥಾನ ಪಡೆದ ಸಮರ್ಥ ಸೋನವಾಲ್ಕರ, ಭೀಮನಗೌಡ ಚೌಧರಿ, ಚೈತನ್ಯ ಜೈನಾಪೂರ, ಮಂಜುನಾಥ ಕರಜಗಿ, ಸ್ಪೂರ್ತಿ, ಸಂಜಯಕುಮಾರ ಸಿ., ಸ್ಪೂರ್ತಿ ಮುಧೋಳ, ಆದರ್ಶ ಬಿರಾದಾರ, ಪೂನಮ್ ರಾಠೋಡ, ತನುಜಾ, ಮಂಜುನಾಥ ಕಾಖಂಡಕಿ, ಬಸವರಾಜ ರಾಠೋಡ, ಮನೋಜ ಚಾಕೋಟಿ, ಪವಿತ್ರಾ ಬಡಕಣ್ಣವರ, ಅನಿಲ ಕದಂ, ಶ್ರೀಗೌರಿ, ಮಲ್ಲಿಕಾರ್ಜುನ ಗುಬ್ಬೇವಾಡ, ಸುಷ್ಮಿತಾ ಬಿದರಿ, ಪ್ರಭಾವತಿ ಸರಕಾರ, ಸುಪ್ರಿಯಾ ಮ್ಯಾಗೇರಿ ಅವರನ್ನು ಸನ್ಮಾನಿಸಲಾಯಿತು. ಪರೀಕ್ಷೆಗೆ ಒಟ್ಟು 455 ವಿದ್ಯಾರ್ಥಿಗಳು ಹಾಜರಾಗಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ