Highest medical award: Rs. crore scholarship from Oxford Patil's NEET Academy

ಅತೀ ಹೆಚ್ಚು ಮೆಡಿಕಲ್ ಕೊಟ್ಟ ಹೆಗ್ಗಳಿಕೆ : ಆಕ್ಸಫರ್ಡ್ ಪಾಟೀಲ್ಸ್ ನೀಟ್ ಅಕಾಡೆಮಿಯಿಂದ ಕೋಟಿ ರೂ.ಸ್ಕಾಲರಶಿಪ್

ಅತೀ ಹೆಚ್ಚು ಮೆಡಿಕಲ್ ಕೊಟ್ಟ ಹೆಗ್ಗಳಿಕೆ : ಆಕ್ಸಫರ್ಡ್ ಪಾಟೀಲ್ಸ್ ನೀಟ್ ಅಕಾಡೆಮಿಯಿಂದ ಕೋಟಿ ರೂ.ಸ್ಕಾಲರಶಿಪ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿಯೇ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಕೊಟ್ಟಿರುವ ಕೀರ್ತಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಗಿದ್ದು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸಂಸ್ಥೆಯಿಂದ ನಿರಂತರವಾಗಿ ಸ್ಕಾಲರಶಿಪ್ ಎಕ್ಸಾಂ ನಡೆಸಿಕೊಂಡು ಬರಲಾಗುತ್ತಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ಹೇಳಿದರು.

ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ನೀಟ್ ಅಕಾಡೆಮಿ ನೇತೃತ್ವದಲ್ಲಿ ಶನಿವಾರ ಸ್ಕಾಲರ್‌ಶಿಪ್ ಎಕ್ಸಾಂ-2025ರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಸಿ ಅವರು ಮಾತನಾಡಿದರು. 2021ರಲ್ಲಿ 143, 2022ರಲ್ಲಿ 145, 2023ರಲ್ಲಿ 156, 2024ರಲ್ಲಿ 172 ವಿದ್ಯಾರ್ಥಿಗಳು ಮೆಡಿಕಲ್ ಸೀಟು ಪಡೆದುಕೊಂಡಿದ್ದಾರೆ. ಈ ವರ್ಷವೂ 170ಕ್ಕೂ ಹೆಚ್ಚು ಮೆಡಿಕಲ್ ಸೀಟುಗಳನ್ನು ಸಂಸ್ಥೆಯಡಿ ಓದಿದ ವಿದ್ಯಾರ್ಥಿಗಳು ಪಡೆದುಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದರು.

ಇದೇ ಪ್ರಥಮ ಬಾರಿಗೆ ನೀಟ್ ಅಕಾಡೆಮಿಯಿಂದ ಸ್ಕಾಲಶಿಪ್ ಎಕ್ಸಾಂ ನಡೆಸಿದ್ದು ಉತ್ತರ ಕರ್ನಾಟಕ ಭಾಗದ ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರೂ ನಮ್ಮ ಸಂಸ್ಥೆಯಲ್ಲಿ ಓದಿದ ವಿದ್ಯಾರ್ಥಿಗಳೊಂದಿಗೆ ಪೈಪೋಟಿ ನೀಡಲು ಸಾಧ್ಯವಾಗಿಲ್ಲ. ನಮ್ಮ ಸಂಸ್ಥೆಯಡಿ ಓದುವ ವಿದ್ಯಾರ್ಥಿಗಳ ಕಠಿಣ ಪರಿಶ್ರಮದ ಓದು ಈ ಸಾಧನೆಗೆ ಕಾರಣವಾಗಿದೆ. ನಮ್ಮ ಸಂಸ್ಥೆಯಿಂದ ಒಂದೇ ವರ್ಷದ ಅವಧಿಯಲ್ಲಿ ವಿವಿಧ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳ ಉಚಿತ ಶಿಕ್ಷಣಕ್ಕಾಗಿ ಆರು ಕೋಟಿ ರೂ. ಗಳಿಗಿಂತಲೂ ಹೆಚ್ಚು ಮೊತ್ತವನ್ನು ಸ್ಕಾಲರ್‌ಶಿಪ್ ರೂಪದಲ್ಲಿ ನೀಡಲಾಗುತ್ತಿದೆ ಎಂದರು.

ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಇಸ್ಮಾಯಿಲ್ ಮನಿಯಾರ ಮಾತನಾಡಿ, ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿ ಅಖೀಲ್ ಅಹ್ಮದ್ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ರ‍್ಯಾಂಕ ಪಡೆದಿರುವುದು ನಮ್ಮೆಲ್ಲರಿಗೆ ಹೆಮ್ಮೆ ತರುವ ಸಂಗತಿ ಎಂದರು.

ನೀಟ್ ಅಕಾಡೆಮಿಯಿಂದ ನಡೆದ ಪರೀಕ್ಷೆಯಲ್ಲಿ 1-20 ನೇ ಸ್ಥಾನ ಪಡೆದ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಊಟ ವಸತಿಯೊಂದಿಗೆ ಒಂದು ವರ್ಷದ ಶಿಕ್ಷಣ ಉಚಿತವಾಗಿ ನೀಡಲಾಗುತ್ತದೆ. 20 -40ನೇ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಒಂದು ವರ್ಷದ ಉಚಿತ ಶಿಕ್ಷಣವನ್ನು ನೀಡಲಾಗುತ್ತದೆ ಎಂದು ಸಂಸ್ಥೆಯಿಂದ ಘೋಷಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರೊ.ನಾಗೇಶ ಬಿರಾಜದಾರ, ರಾಜಶೇಖರ ಹಿರೇಮಠ, ಮಂಜುನಾಥ ಮಂಕಣಿ, ಆನಂದ ನಾವಗಿ, ಸಂದೀಪ ಘೋರ್ಪಡೆ, ಮಹಾಂತೇಶ ಬಿರಾದಾರ ಇದ್ದರು.

ಉಚಿತ ಶಿಕ್ಷಣಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು:
ಪರೀಕ್ಷೆಯಲ್ಲಿ ಮೊದಲ 20 ಸ್ಥಾನ ಪಡೆದ ಸಮರ್ಥ ಸೋನವಾಲ್ಕರ, ಭೀಮನಗೌಡ ಚೌಧರಿ, ಚೈತನ್ಯ ಜೈನಾಪೂರ, ಮಂಜುನಾಥ ಕರಜಗಿ, ಸ್ಪೂರ್ತಿ, ಸಂಜಯಕುಮಾರ ಸಿ., ಸ್ಪೂರ್ತಿ ಮುಧೋಳ, ಆದರ್ಶ ಬಿರಾದಾರ, ಪೂನಮ್ ರಾಠೋಡ, ತನುಜಾ, ಮಂಜುನಾಥ ಕಾಖಂಡಕಿ, ಬಸವರಾಜ ರಾಠೋಡ, ಮನೋಜ ಚಾಕೋಟಿ, ಪವಿತ್ರಾ ಬಡಕಣ್ಣವರ, ಅನಿಲ ಕದಂ, ಶ್ರೀಗೌರಿ, ಮಲ್ಲಿಕಾರ್ಜುನ ಗುಬ್ಬೇವಾಡ, ಸುಷ್ಮಿತಾ ಬಿದರಿ, ಪ್ರಭಾವತಿ ಸರಕಾರ, ಸುಪ್ರಿಯಾ ಮ್ಯಾಗೇರಿ ಅವರನ್ನು ಸನ್ಮಾನಿಸಲಾಯಿತು. ಪರೀಕ್ಷೆಗೆ ಒಟ್ಟು 455 ವಿದ್ಯಾರ್ಥಿಗಳು ಹಾಜರಾಗಿದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು