Highest medical award: Rs. crore scholarship from Oxford Patil's NEET Academy

ಅತೀ ಹೆಚ್ಚು ಮೆಡಿಕಲ್ ಕೊಟ್ಟ ಹೆಗ್ಗಳಿಕೆ : ಆಕ್ಸಫರ್ಡ್ ಪಾಟೀಲ್ಸ್ ನೀಟ್ ಅಕಾಡೆಮಿಯಿಂದ ಕೋಟಿ ರೂ.ಸ್ಕಾಲರಶಿಪ್

ಅತೀ ಹೆಚ್ಚು ಮೆಡಿಕಲ್ ಕೊಟ್ಟ ಹೆಗ್ಗಳಿಕೆ : ಆಕ್ಸಫರ್ಡ್ ಪಾಟೀಲ್ಸ್ ನೀಟ್ ಅಕಾಡೆಮಿಯಿಂದ ಕೋಟಿ ರೂ.ಸ್ಕಾಲರಶಿಪ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿಯೇ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಕೊಟ್ಟಿರುವ ಕೀರ್ತಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಗಿದ್ದು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸಂಸ್ಥೆಯಿಂದ ನಿರಂತರವಾಗಿ ಸ್ಕಾಲರಶಿಪ್ ಎಕ್ಸಾಂ ನಡೆಸಿಕೊಂಡು ಬರಲಾಗುತ್ತಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ಹೇಳಿದರು.

ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ನೀಟ್ ಅಕಾಡೆಮಿ ನೇತೃತ್ವದಲ್ಲಿ ಶನಿವಾರ ಸ್ಕಾಲರ್‌ಶಿಪ್ ಎಕ್ಸಾಂ-2025ರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಸಿ ಅವರು ಮಾತನಾಡಿದರು. 2021ರಲ್ಲಿ 143, 2022ರಲ್ಲಿ 145, 2023ರಲ್ಲಿ 156, 2024ರಲ್ಲಿ 172 ವಿದ್ಯಾರ್ಥಿಗಳು ಮೆಡಿಕಲ್ ಸೀಟು ಪಡೆದುಕೊಂಡಿದ್ದಾರೆ. ಈ ವರ್ಷವೂ 170ಕ್ಕೂ ಹೆಚ್ಚು ಮೆಡಿಕಲ್ ಸೀಟುಗಳನ್ನು ಸಂಸ್ಥೆಯಡಿ ಓದಿದ ವಿದ್ಯಾರ್ಥಿಗಳು ಪಡೆದುಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದರು.

ಇದೇ ಪ್ರಥಮ ಬಾರಿಗೆ ನೀಟ್ ಅಕಾಡೆಮಿಯಿಂದ ಸ್ಕಾಲಶಿಪ್ ಎಕ್ಸಾಂ ನಡೆಸಿದ್ದು ಉತ್ತರ ಕರ್ನಾಟಕ ಭಾಗದ ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರೂ ನಮ್ಮ ಸಂಸ್ಥೆಯಲ್ಲಿ ಓದಿದ ವಿದ್ಯಾರ್ಥಿಗಳೊಂದಿಗೆ ಪೈಪೋಟಿ ನೀಡಲು ಸಾಧ್ಯವಾಗಿಲ್ಲ. ನಮ್ಮ ಸಂಸ್ಥೆಯಡಿ ಓದುವ ವಿದ್ಯಾರ್ಥಿಗಳ ಕಠಿಣ ಪರಿಶ್ರಮದ ಓದು ಈ ಸಾಧನೆಗೆ ಕಾರಣವಾಗಿದೆ. ನಮ್ಮ ಸಂಸ್ಥೆಯಿಂದ ಒಂದೇ ವರ್ಷದ ಅವಧಿಯಲ್ಲಿ ವಿವಿಧ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳ ಉಚಿತ ಶಿಕ್ಷಣಕ್ಕಾಗಿ ಆರು ಕೋಟಿ ರೂ. ಗಳಿಗಿಂತಲೂ ಹೆಚ್ಚು ಮೊತ್ತವನ್ನು ಸ್ಕಾಲರ್‌ಶಿಪ್ ರೂಪದಲ್ಲಿ ನೀಡಲಾಗುತ್ತಿದೆ ಎಂದರು.

ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಇಸ್ಮಾಯಿಲ್ ಮನಿಯಾರ ಮಾತನಾಡಿ, ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿ ಅಖೀಲ್ ಅಹ್ಮದ್ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ರ‍್ಯಾಂಕ ಪಡೆದಿರುವುದು ನಮ್ಮೆಲ್ಲರಿಗೆ ಹೆಮ್ಮೆ ತರುವ ಸಂಗತಿ ಎಂದರು.

ನೀಟ್ ಅಕಾಡೆಮಿಯಿಂದ ನಡೆದ ಪರೀಕ್ಷೆಯಲ್ಲಿ 1-20 ನೇ ಸ್ಥಾನ ಪಡೆದ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಊಟ ವಸತಿಯೊಂದಿಗೆ ಒಂದು ವರ್ಷದ ಶಿಕ್ಷಣ ಉಚಿತವಾಗಿ ನೀಡಲಾಗುತ್ತದೆ. 20 -40ನೇ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಒಂದು ವರ್ಷದ ಉಚಿತ ಶಿಕ್ಷಣವನ್ನು ನೀಡಲಾಗುತ್ತದೆ ಎಂದು ಸಂಸ್ಥೆಯಿಂದ ಘೋಷಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರೊ.ನಾಗೇಶ ಬಿರಾಜದಾರ, ರಾಜಶೇಖರ ಹಿರೇಮಠ, ಮಂಜುನಾಥ ಮಂಕಣಿ, ಆನಂದ ನಾವಗಿ, ಸಂದೀಪ ಘೋರ್ಪಡೆ, ಮಹಾಂತೇಶ ಬಿರಾದಾರ ಇದ್ದರು.

ಉಚಿತ ಶಿಕ್ಷಣಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು:
ಪರೀಕ್ಷೆಯಲ್ಲಿ ಮೊದಲ 20 ಸ್ಥಾನ ಪಡೆದ ಸಮರ್ಥ ಸೋನವಾಲ್ಕರ, ಭೀಮನಗೌಡ ಚೌಧರಿ, ಚೈತನ್ಯ ಜೈನಾಪೂರ, ಮಂಜುನಾಥ ಕರಜಗಿ, ಸ್ಪೂರ್ತಿ, ಸಂಜಯಕುಮಾರ ಸಿ., ಸ್ಪೂರ್ತಿ ಮುಧೋಳ, ಆದರ್ಶ ಬಿರಾದಾರ, ಪೂನಮ್ ರಾಠೋಡ, ತನುಜಾ, ಮಂಜುನಾಥ ಕಾಖಂಡಕಿ, ಬಸವರಾಜ ರಾಠೋಡ, ಮನೋಜ ಚಾಕೋಟಿ, ಪವಿತ್ರಾ ಬಡಕಣ್ಣವರ, ಅನಿಲ ಕದಂ, ಶ್ರೀಗೌರಿ, ಮಲ್ಲಿಕಾರ್ಜುನ ಗುಬ್ಬೇವಾಡ, ಸುಷ್ಮಿತಾ ಬಿದರಿ, ಪ್ರಭಾವತಿ ಸರಕಾರ, ಸುಪ್ರಿಯಾ ಮ್ಯಾಗೇರಿ ಅವರನ್ನು ಸನ್ಮಾನಿಸಲಾಯಿತು. ಪರೀಕ್ಷೆಗೆ ಒಟ್ಟು 455 ವಿದ್ಯಾರ್ಥಿಗಳು ಹಾಜರಾಗಿದ್ದರು.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್