Highest medical award: Rs. crore scholarship from Oxford Patil's NEET Academy

ಅತೀ ಹೆಚ್ಚು ಮೆಡಿಕಲ್ ಕೊಟ್ಟ ಹೆಗ್ಗಳಿಕೆ : ಆಕ್ಸಫರ್ಡ್ ಪಾಟೀಲ್ಸ್ ನೀಟ್ ಅಕಾಡೆಮಿಯಿಂದ ಕೋಟಿ ರೂ.ಸ್ಕಾಲರಶಿಪ್

ಅತೀ ಹೆಚ್ಚು ಮೆಡಿಕಲ್ ಕೊಟ್ಟ ಹೆಗ್ಗಳಿಕೆ : ಆಕ್ಸಫರ್ಡ್ ಪಾಟೀಲ್ಸ್ ನೀಟ್ ಅಕಾಡೆಮಿಯಿಂದ ಕೋಟಿ ರೂ.ಸ್ಕಾಲರಶಿಪ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿಯೇ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಕೊಟ್ಟಿರುವ ಕೀರ್ತಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಗಿದ್ದು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸಂಸ್ಥೆಯಿಂದ ನಿರಂತರವಾಗಿ ಸ್ಕಾಲರಶಿಪ್ ಎಕ್ಸಾಂ ನಡೆಸಿಕೊಂಡು ಬರಲಾಗುತ್ತಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ಹೇಳಿದರು.

ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ನೀಟ್ ಅಕಾಡೆಮಿ ನೇತೃತ್ವದಲ್ಲಿ ಶನಿವಾರ ಸ್ಕಾಲರ್‌ಶಿಪ್ ಎಕ್ಸಾಂ-2025ರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಸಿ ಅವರು ಮಾತನಾಡಿದರು. 2021ರಲ್ಲಿ 143, 2022ರಲ್ಲಿ 145, 2023ರಲ್ಲಿ 156, 2024ರಲ್ಲಿ 172 ವಿದ್ಯಾರ್ಥಿಗಳು ಮೆಡಿಕಲ್ ಸೀಟು ಪಡೆದುಕೊಂಡಿದ್ದಾರೆ. ಈ ವರ್ಷವೂ 170ಕ್ಕೂ ಹೆಚ್ಚು ಮೆಡಿಕಲ್ ಸೀಟುಗಳನ್ನು ಸಂಸ್ಥೆಯಡಿ ಓದಿದ ವಿದ್ಯಾರ್ಥಿಗಳು ಪಡೆದುಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದರು.

ಇದೇ ಪ್ರಥಮ ಬಾರಿಗೆ ನೀಟ್ ಅಕಾಡೆಮಿಯಿಂದ ಸ್ಕಾಲಶಿಪ್ ಎಕ್ಸಾಂ ನಡೆಸಿದ್ದು ಉತ್ತರ ಕರ್ನಾಟಕ ಭಾಗದ ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರೂ ನಮ್ಮ ಸಂಸ್ಥೆಯಲ್ಲಿ ಓದಿದ ವಿದ್ಯಾರ್ಥಿಗಳೊಂದಿಗೆ ಪೈಪೋಟಿ ನೀಡಲು ಸಾಧ್ಯವಾಗಿಲ್ಲ. ನಮ್ಮ ಸಂಸ್ಥೆಯಡಿ ಓದುವ ವಿದ್ಯಾರ್ಥಿಗಳ ಕಠಿಣ ಪರಿಶ್ರಮದ ಓದು ಈ ಸಾಧನೆಗೆ ಕಾರಣವಾಗಿದೆ. ನಮ್ಮ ಸಂಸ್ಥೆಯಿಂದ ಒಂದೇ ವರ್ಷದ ಅವಧಿಯಲ್ಲಿ ವಿವಿಧ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳ ಉಚಿತ ಶಿಕ್ಷಣಕ್ಕಾಗಿ ಆರು ಕೋಟಿ ರೂ. ಗಳಿಗಿಂತಲೂ ಹೆಚ್ಚು ಮೊತ್ತವನ್ನು ಸ್ಕಾಲರ್‌ಶಿಪ್ ರೂಪದಲ್ಲಿ ನೀಡಲಾಗುತ್ತಿದೆ ಎಂದರು.

ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಇಸ್ಮಾಯಿಲ್ ಮನಿಯಾರ ಮಾತನಾಡಿ, ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿ ಅಖೀಲ್ ಅಹ್ಮದ್ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ರ‍್ಯಾಂಕ ಪಡೆದಿರುವುದು ನಮ್ಮೆಲ್ಲರಿಗೆ ಹೆಮ್ಮೆ ತರುವ ಸಂಗತಿ ಎಂದರು.

ನೀಟ್ ಅಕಾಡೆಮಿಯಿಂದ ನಡೆದ ಪರೀಕ್ಷೆಯಲ್ಲಿ 1-20 ನೇ ಸ್ಥಾನ ಪಡೆದ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಊಟ ವಸತಿಯೊಂದಿಗೆ ಒಂದು ವರ್ಷದ ಶಿಕ್ಷಣ ಉಚಿತವಾಗಿ ನೀಡಲಾಗುತ್ತದೆ. 20 -40ನೇ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಒಂದು ವರ್ಷದ ಉಚಿತ ಶಿಕ್ಷಣವನ್ನು ನೀಡಲಾಗುತ್ತದೆ ಎಂದು ಸಂಸ್ಥೆಯಿಂದ ಘೋಷಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರೊ.ನಾಗೇಶ ಬಿರಾಜದಾರ, ರಾಜಶೇಖರ ಹಿರೇಮಠ, ಮಂಜುನಾಥ ಮಂಕಣಿ, ಆನಂದ ನಾವಗಿ, ಸಂದೀಪ ಘೋರ್ಪಡೆ, ಮಹಾಂತೇಶ ಬಿರಾದಾರ ಇದ್ದರು.

ಉಚಿತ ಶಿಕ್ಷಣಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು:
ಪರೀಕ್ಷೆಯಲ್ಲಿ ಮೊದಲ 20 ಸ್ಥಾನ ಪಡೆದ ಸಮರ್ಥ ಸೋನವಾಲ್ಕರ, ಭೀಮನಗೌಡ ಚೌಧರಿ, ಚೈತನ್ಯ ಜೈನಾಪೂರ, ಮಂಜುನಾಥ ಕರಜಗಿ, ಸ್ಪೂರ್ತಿ, ಸಂಜಯಕುಮಾರ ಸಿ., ಸ್ಪೂರ್ತಿ ಮುಧೋಳ, ಆದರ್ಶ ಬಿರಾದಾರ, ಪೂನಮ್ ರಾಠೋಡ, ತನುಜಾ, ಮಂಜುನಾಥ ಕಾಖಂಡಕಿ, ಬಸವರಾಜ ರಾಠೋಡ, ಮನೋಜ ಚಾಕೋಟಿ, ಪವಿತ್ರಾ ಬಡಕಣ್ಣವರ, ಅನಿಲ ಕದಂ, ಶ್ರೀಗೌರಿ, ಮಲ್ಲಿಕಾರ್ಜುನ ಗುಬ್ಬೇವಾಡ, ಸುಷ್ಮಿತಾ ಬಿದರಿ, ಪ್ರಭಾವತಿ ಸರಕಾರ, ಸುಪ್ರಿಯಾ ಮ್ಯಾಗೇರಿ ಅವರನ್ನು ಸನ್ಮಾನಿಸಲಾಯಿತು. ಪರೀಕ್ಷೆಗೆ ಒಟ್ಟು 455 ವಿದ್ಯಾರ್ಥಿಗಳು ಹಾಜರಾಗಿದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ