Hiremurala-Kesapur road development work started

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ 2.20 ಲಕ್ಷ ಕೋಟಿ ರೂ.ಬಿಲ್ ಬಾಕಿ ಇರಿಸಿ ಹೋಗಿದ್ದು ಅದನ್ನು ಪಾವತಿಸುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲಿರಿಸಿ ಹಣಕಾಸಿನ ಅಶಿಸ್ತನ್ನು ತೋರಿಸಿದ್ದಕ್ಕೆ ಎರಡು ವರ್ಷ ಅಭಿವೃದ್ಧಿಗೆ ಅಲ್ಪ ಹಿನ್ನಡೆಯುಂಟಾಗಿದ್ದು ನಿಜ. ಆದರೆ, ಈಗ ಅಭಿವೃದ್ದಿ ಕೆಲಸಗಳಿಗೆ ಸರ್ಕಾರ ಅನುದಾನ ಹಂಚಿಕೆ ಮಾಡುತ್ತಿದೆ ಎಂದು ಶಾಸಕ ಸಿ. ಎಸ್. ನಾಡಗೌಡ ಹೇಳಿದರು.

ತಾಲ್ಲೂಕು ಕೇಸಾಪೂರ ಕ್ರಾಸ್‌ನಲ್ಲಿ ಭಾನುವಾರ ಲೋಕೋಪಯೋಗಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಹಿರೇಮುರಾಳ-ಹುನಕುಂಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸನ್ 2025-26ರ ಆಯವ್ಯಯದಲ್ಲಿ ತಾಲ್ಲೂಕಿನ ನಾಲತವಾಡ-ಆಲೂರ, ಯರಗಲ್-ಕಮಲದಿನ್ನಿ, ಇಂಗಳಗೇರಿ -ಕೂಚಬಾಳ, ಹಡಗಲಿ- ಅಮರಗೋಳ ಸೇರಿದಂತೆ ಹೊಲಮನೆಗಳಿಗೆ ತಿರುಗಾಡುವ ರಸ್ತೆಗಳನ್ನು ಅಭಿವೃದ್ಧಿ ಮಾಡುವ ಬೇಡಿಕೆ ಇದ್ದು ಆದ್ಯತೆ ಮೇರೆಗೆ ಅಭಿವೃದ್ಧಿಗೊಳಿಸಲಾಗುತ್ತದೆ ಎಂದು ಹೇಳಿದರು.

ರಾಜ್ಯದ ಪ್ರಗತಿಪಥ ಯೋಜನೆಯಡಿಯಲ್ಲಿ 30 ಕಿ.ಮೀ ರಸ್ತೆ ಅಭಿವೃದ್ಧಿಗೆ 21.50 ಕೋಟಿ ಹಣ ಕೊಡುವುದಾಗಿ ತಿಳಿಸಿದ್ದು ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.ವಿರೋಧ ಪಕ್ಷದವರ ಸುಳ್ಳು ಹೇಳಿಕೆಗಳನ್ನು ಜನರು ನಂಬಬೇಡಿ ಎಂದರು.

ಕೇಸಾಪೂರದ ಮುಖಂಡ ಎಂ. ಎಸ್. ದೇಶಮುಖ, ಕಾಂಗ್ರೆಸ್ ಮುಖಂಡ, ಪ್ರಥಮ ದರ್ಜೆ ಗುತ್ತಿಗೆದಾರ ಸಿ. ಬಿ. ಅಸ್ಕಿ, ಗ್ಯಾರಂಟಿ ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ತಂಗಡಗಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ, ಮುಖಂಡ ರಾಜುಗೌಡ ಕೊಂಗಿ, ಅಪ್ಪು ನಾಡಗೌಡ, ಹಿರೇಮುರಾಳ ಪಿಕೆಪಿಎಸ್ ಅಧ್ಯಕ್ಷ ಮಲ್ಲನಗೌಡ ಪಾಟೀಲ, ಭೋವಿ ಸಮಾಜದ ಮುಖಂಡ ಶ್ರೀನಿವಾಸ ಗೌಂಡಿ, ಮಹಾಂತಯ್ಯ ಹಿರೇಮಠ, ನಾಗಯ್ಯ ಹಾಲಗಂಗಾಧರಮಠ, ಗುತ್ತಿಗೆದಾರ ಶ್ರೀಶೈಲ ವಿಭೂತಿ ಮೊದಲಾದವರು ಇದ್ದರು.

ಆಳಂದ ಶಾಸಕ ಬಿ. ಆರ್. ಪಾಟೀಲ್ ಅವರು ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಲಂಚ ಕೊಡಬೇಕು ಎಂಬ ಆಡಿಯೋ ಬಹಿರಂಗಗೊಂಡಿರುವ ವಿಚಾರದ ಕುರಿತು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕ ನಾಡಗೌಡ, ನಾನು ಆಡಿಯೋ ಕೇಳಿದ್ದೇನೆ. ಅವರ ಕ್ಷೇತ್ರದಲ್ಲಿ ಯಾವನೋ ಒಬ್ಬ ಮಧ್ಯವರ್ತಿ ದಂಧಾ ಚಲ್ ರಹಾ ಕ್ಯಾ ಎಂದು ಕೇಳಿದ್ದಾನಂತೆ ಅದಕ್ಕೆ ಅವರು ಹೈ ಎಂದಿದ್ದಾರೆ. ಆದರೆ ಇವರು(ಬಿ.ಆರ್.ಪಾಟೀಲರು) ಒನ್‌ವೇ ಮಾತನಾಡಿದ್ದಾರೆ. ಜಮೀರ್ ಅಹ್ಮದ್ ಆಪ್ತ ಸಹಾಯಕರು ಪಾಟೀಲರ ಮಾತಿಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ನಮ್ಮ ಮತಕ್ಷೇತ್ರದಲ್ಲಿ ಸರ್ಕಾರ ಮನೆ ಕೊಟ್ಟರೆ ಬಡವರಿಗೆ ಕೊಟ್ಟಿರುತ್ತೇವೆ, ಇಲ್ಲದಿದ್ದರೆ ಇಲ್ಲ. ಹಣ ಪಡೆದುಕೊಂಡು ಮನೆ ಕೊಟ್ಟರೆ ಅವರು ನಮಗೆ ಓಟು ಹಾಕುತ್ತಾರೆಯೋ? ಎಂದು ಪ್ರಶ್ನಿಸಿದ ಅವರು, ಹಿಂದಿನ ಸರ್ಕಾರದಲ್ಲಿ ಕೊನೆಯ ಘಳಿಗೆಯಲ್ಲಿ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಮಾಡಿದ್ದರಿಂದಲೇ ಇಂದಗೂ ಅನುಮೋದನೆ ಆಗದೇ ಹಾಗೆ ಉಳಿದುಕೊಂಡಿವೆ ಎಂದರು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ