Hiremurala-Kesapur road development work started

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ 2.20 ಲಕ್ಷ ಕೋಟಿ ರೂ.ಬಿಲ್ ಬಾಕಿ ಇರಿಸಿ ಹೋಗಿದ್ದು ಅದನ್ನು ಪಾವತಿಸುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲಿರಿಸಿ ಹಣಕಾಸಿನ ಅಶಿಸ್ತನ್ನು ತೋರಿಸಿದ್ದಕ್ಕೆ ಎರಡು ವರ್ಷ ಅಭಿವೃದ್ಧಿಗೆ ಅಲ್ಪ ಹಿನ್ನಡೆಯುಂಟಾಗಿದ್ದು ನಿಜ. ಆದರೆ, ಈಗ ಅಭಿವೃದ್ದಿ ಕೆಲಸಗಳಿಗೆ ಸರ್ಕಾರ ಅನುದಾನ ಹಂಚಿಕೆ ಮಾಡುತ್ತಿದೆ ಎಂದು ಶಾಸಕ ಸಿ. ಎಸ್. ನಾಡಗೌಡ ಹೇಳಿದರು.

ತಾಲ್ಲೂಕು ಕೇಸಾಪೂರ ಕ್ರಾಸ್‌ನಲ್ಲಿ ಭಾನುವಾರ ಲೋಕೋಪಯೋಗಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಹಿರೇಮುರಾಳ-ಹುನಕುಂಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸನ್ 2025-26ರ ಆಯವ್ಯಯದಲ್ಲಿ ತಾಲ್ಲೂಕಿನ ನಾಲತವಾಡ-ಆಲೂರ, ಯರಗಲ್-ಕಮಲದಿನ್ನಿ, ಇಂಗಳಗೇರಿ -ಕೂಚಬಾಳ, ಹಡಗಲಿ- ಅಮರಗೋಳ ಸೇರಿದಂತೆ ಹೊಲಮನೆಗಳಿಗೆ ತಿರುಗಾಡುವ ರಸ್ತೆಗಳನ್ನು ಅಭಿವೃದ್ಧಿ ಮಾಡುವ ಬೇಡಿಕೆ ಇದ್ದು ಆದ್ಯತೆ ಮೇರೆಗೆ ಅಭಿವೃದ್ಧಿಗೊಳಿಸಲಾಗುತ್ತದೆ ಎಂದು ಹೇಳಿದರು.

ರಾಜ್ಯದ ಪ್ರಗತಿಪಥ ಯೋಜನೆಯಡಿಯಲ್ಲಿ 30 ಕಿ.ಮೀ ರಸ್ತೆ ಅಭಿವೃದ್ಧಿಗೆ 21.50 ಕೋಟಿ ಹಣ ಕೊಡುವುದಾಗಿ ತಿಳಿಸಿದ್ದು ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.ವಿರೋಧ ಪಕ್ಷದವರ ಸುಳ್ಳು ಹೇಳಿಕೆಗಳನ್ನು ಜನರು ನಂಬಬೇಡಿ ಎಂದರು.

ಕೇಸಾಪೂರದ ಮುಖಂಡ ಎಂ. ಎಸ್. ದೇಶಮುಖ, ಕಾಂಗ್ರೆಸ್ ಮುಖಂಡ, ಪ್ರಥಮ ದರ್ಜೆ ಗುತ್ತಿಗೆದಾರ ಸಿ. ಬಿ. ಅಸ್ಕಿ, ಗ್ಯಾರಂಟಿ ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ತಂಗಡಗಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ, ಮುಖಂಡ ರಾಜುಗೌಡ ಕೊಂಗಿ, ಅಪ್ಪು ನಾಡಗೌಡ, ಹಿರೇಮುರಾಳ ಪಿಕೆಪಿಎಸ್ ಅಧ್ಯಕ್ಷ ಮಲ್ಲನಗೌಡ ಪಾಟೀಲ, ಭೋವಿ ಸಮಾಜದ ಮುಖಂಡ ಶ್ರೀನಿವಾಸ ಗೌಂಡಿ, ಮಹಾಂತಯ್ಯ ಹಿರೇಮಠ, ನಾಗಯ್ಯ ಹಾಲಗಂಗಾಧರಮಠ, ಗುತ್ತಿಗೆದಾರ ಶ್ರೀಶೈಲ ವಿಭೂತಿ ಮೊದಲಾದವರು ಇದ್ದರು.

ಆಳಂದ ಶಾಸಕ ಬಿ. ಆರ್. ಪಾಟೀಲ್ ಅವರು ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಲಂಚ ಕೊಡಬೇಕು ಎಂಬ ಆಡಿಯೋ ಬಹಿರಂಗಗೊಂಡಿರುವ ವಿಚಾರದ ಕುರಿತು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕ ನಾಡಗೌಡ, ನಾನು ಆಡಿಯೋ ಕೇಳಿದ್ದೇನೆ. ಅವರ ಕ್ಷೇತ್ರದಲ್ಲಿ ಯಾವನೋ ಒಬ್ಬ ಮಧ್ಯವರ್ತಿ ದಂಧಾ ಚಲ್ ರಹಾ ಕ್ಯಾ ಎಂದು ಕೇಳಿದ್ದಾನಂತೆ ಅದಕ್ಕೆ ಅವರು ಹೈ ಎಂದಿದ್ದಾರೆ. ಆದರೆ ಇವರು(ಬಿ.ಆರ್.ಪಾಟೀಲರು) ಒನ್‌ವೇ ಮಾತನಾಡಿದ್ದಾರೆ. ಜಮೀರ್ ಅಹ್ಮದ್ ಆಪ್ತ ಸಹಾಯಕರು ಪಾಟೀಲರ ಮಾತಿಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ನಮ್ಮ ಮತಕ್ಷೇತ್ರದಲ್ಲಿ ಸರ್ಕಾರ ಮನೆ ಕೊಟ್ಟರೆ ಬಡವರಿಗೆ ಕೊಟ್ಟಿರುತ್ತೇವೆ, ಇಲ್ಲದಿದ್ದರೆ ಇಲ್ಲ. ಹಣ ಪಡೆದುಕೊಂಡು ಮನೆ ಕೊಟ್ಟರೆ ಅವರು ನಮಗೆ ಓಟು ಹಾಕುತ್ತಾರೆಯೋ? ಎಂದು ಪ್ರಶ್ನಿಸಿದ ಅವರು, ಹಿಂದಿನ ಸರ್ಕಾರದಲ್ಲಿ ಕೊನೆಯ ಘಳಿಗೆಯಲ್ಲಿ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಮಾಡಿದ್ದರಿಂದಲೇ ಇಂದಗೂ ಅನುಮೋದನೆ ಆಗದೇ ಹಾಗೆ ಉಳಿದುಕೊಂಡಿವೆ ಎಂದರು.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ