Hiremurala-Kesapur road development work started

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ 2.20 ಲಕ್ಷ ಕೋಟಿ ರೂ.ಬಿಲ್ ಬಾಕಿ ಇರಿಸಿ ಹೋಗಿದ್ದು ಅದನ್ನು ಪಾವತಿಸುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲಿರಿಸಿ ಹಣಕಾಸಿನ ಅಶಿಸ್ತನ್ನು ತೋರಿಸಿದ್ದಕ್ಕೆ ಎರಡು ವರ್ಷ ಅಭಿವೃದ್ಧಿಗೆ ಅಲ್ಪ ಹಿನ್ನಡೆಯುಂಟಾಗಿದ್ದು ನಿಜ. ಆದರೆ, ಈಗ ಅಭಿವೃದ್ದಿ ಕೆಲಸಗಳಿಗೆ ಸರ್ಕಾರ ಅನುದಾನ ಹಂಚಿಕೆ ಮಾಡುತ್ತಿದೆ ಎಂದು ಶಾಸಕ ಸಿ. ಎಸ್. ನಾಡಗೌಡ ಹೇಳಿದರು.

ತಾಲ್ಲೂಕು ಕೇಸಾಪೂರ ಕ್ರಾಸ್‌ನಲ್ಲಿ ಭಾನುವಾರ ಲೋಕೋಪಯೋಗಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಹಿರೇಮುರಾಳ-ಹುನಕುಂಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸನ್ 2025-26ರ ಆಯವ್ಯಯದಲ್ಲಿ ತಾಲ್ಲೂಕಿನ ನಾಲತವಾಡ-ಆಲೂರ, ಯರಗಲ್-ಕಮಲದಿನ್ನಿ, ಇಂಗಳಗೇರಿ -ಕೂಚಬಾಳ, ಹಡಗಲಿ- ಅಮರಗೋಳ ಸೇರಿದಂತೆ ಹೊಲಮನೆಗಳಿಗೆ ತಿರುಗಾಡುವ ರಸ್ತೆಗಳನ್ನು ಅಭಿವೃದ್ಧಿ ಮಾಡುವ ಬೇಡಿಕೆ ಇದ್ದು ಆದ್ಯತೆ ಮೇರೆಗೆ ಅಭಿವೃದ್ಧಿಗೊಳಿಸಲಾಗುತ್ತದೆ ಎಂದು ಹೇಳಿದರು.

ರಾಜ್ಯದ ಪ್ರಗತಿಪಥ ಯೋಜನೆಯಡಿಯಲ್ಲಿ 30 ಕಿ.ಮೀ ರಸ್ತೆ ಅಭಿವೃದ್ಧಿಗೆ 21.50 ಕೋಟಿ ಹಣ ಕೊಡುವುದಾಗಿ ತಿಳಿಸಿದ್ದು ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.ವಿರೋಧ ಪಕ್ಷದವರ ಸುಳ್ಳು ಹೇಳಿಕೆಗಳನ್ನು ಜನರು ನಂಬಬೇಡಿ ಎಂದರು.

ಕೇಸಾಪೂರದ ಮುಖಂಡ ಎಂ. ಎಸ್. ದೇಶಮುಖ, ಕಾಂಗ್ರೆಸ್ ಮುಖಂಡ, ಪ್ರಥಮ ದರ್ಜೆ ಗುತ್ತಿಗೆದಾರ ಸಿ. ಬಿ. ಅಸ್ಕಿ, ಗ್ಯಾರಂಟಿ ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ತಂಗಡಗಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ, ಮುಖಂಡ ರಾಜುಗೌಡ ಕೊಂಗಿ, ಅಪ್ಪು ನಾಡಗೌಡ, ಹಿರೇಮುರಾಳ ಪಿಕೆಪಿಎಸ್ ಅಧ್ಯಕ್ಷ ಮಲ್ಲನಗೌಡ ಪಾಟೀಲ, ಭೋವಿ ಸಮಾಜದ ಮುಖಂಡ ಶ್ರೀನಿವಾಸ ಗೌಂಡಿ, ಮಹಾಂತಯ್ಯ ಹಿರೇಮಠ, ನಾಗಯ್ಯ ಹಾಲಗಂಗಾಧರಮಠ, ಗುತ್ತಿಗೆದಾರ ಶ್ರೀಶೈಲ ವಿಭೂತಿ ಮೊದಲಾದವರು ಇದ್ದರು.

ಆಳಂದ ಶಾಸಕ ಬಿ. ಆರ್. ಪಾಟೀಲ್ ಅವರು ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಲಂಚ ಕೊಡಬೇಕು ಎಂಬ ಆಡಿಯೋ ಬಹಿರಂಗಗೊಂಡಿರುವ ವಿಚಾರದ ಕುರಿತು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕ ನಾಡಗೌಡ, ನಾನು ಆಡಿಯೋ ಕೇಳಿದ್ದೇನೆ. ಅವರ ಕ್ಷೇತ್ರದಲ್ಲಿ ಯಾವನೋ ಒಬ್ಬ ಮಧ್ಯವರ್ತಿ ದಂಧಾ ಚಲ್ ರಹಾ ಕ್ಯಾ ಎಂದು ಕೇಳಿದ್ದಾನಂತೆ ಅದಕ್ಕೆ ಅವರು ಹೈ ಎಂದಿದ್ದಾರೆ. ಆದರೆ ಇವರು(ಬಿ.ಆರ್.ಪಾಟೀಲರು) ಒನ್‌ವೇ ಮಾತನಾಡಿದ್ದಾರೆ. ಜಮೀರ್ ಅಹ್ಮದ್ ಆಪ್ತ ಸಹಾಯಕರು ಪಾಟೀಲರ ಮಾತಿಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ನಮ್ಮ ಮತಕ್ಷೇತ್ರದಲ್ಲಿ ಸರ್ಕಾರ ಮನೆ ಕೊಟ್ಟರೆ ಬಡವರಿಗೆ ಕೊಟ್ಟಿರುತ್ತೇವೆ, ಇಲ್ಲದಿದ್ದರೆ ಇಲ್ಲ. ಹಣ ಪಡೆದುಕೊಂಡು ಮನೆ ಕೊಟ್ಟರೆ ಅವರು ನಮಗೆ ಓಟು ಹಾಕುತ್ತಾರೆಯೋ? ಎಂದು ಪ್ರಶ್ನಿಸಿದ ಅವರು, ಹಿಂದಿನ ಸರ್ಕಾರದಲ್ಲಿ ಕೊನೆಯ ಘಳಿಗೆಯಲ್ಲಿ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಮಾಡಿದ್ದರಿಂದಲೇ ಇಂದಗೂ ಅನುಮೋದನೆ ಆಗದೇ ಹಾಗೆ ಉಳಿದುಕೊಂಡಿವೆ ಎಂದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ