Hiremurala-Kesapur road development work started

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ 2.20 ಲಕ್ಷ ಕೋಟಿ ರೂ.ಬಿಲ್ ಬಾಕಿ ಇರಿಸಿ ಹೋಗಿದ್ದು ಅದನ್ನು ಪಾವತಿಸುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲಿರಿಸಿ ಹಣಕಾಸಿನ ಅಶಿಸ್ತನ್ನು ತೋರಿಸಿದ್ದಕ್ಕೆ ಎರಡು ವರ್ಷ ಅಭಿವೃದ್ಧಿಗೆ ಅಲ್ಪ ಹಿನ್ನಡೆಯುಂಟಾಗಿದ್ದು ನಿಜ. ಆದರೆ, ಈಗ ಅಭಿವೃದ್ದಿ ಕೆಲಸಗಳಿಗೆ ಸರ್ಕಾರ ಅನುದಾನ ಹಂಚಿಕೆ ಮಾಡುತ್ತಿದೆ ಎಂದು ಶಾಸಕ ಸಿ. ಎಸ್. ನಾಡಗೌಡ ಹೇಳಿದರು.

ತಾಲ್ಲೂಕು ಕೇಸಾಪೂರ ಕ್ರಾಸ್‌ನಲ್ಲಿ ಭಾನುವಾರ ಲೋಕೋಪಯೋಗಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಹಿರೇಮುರಾಳ-ಹುನಕುಂಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸನ್ 2025-26ರ ಆಯವ್ಯಯದಲ್ಲಿ ತಾಲ್ಲೂಕಿನ ನಾಲತವಾಡ-ಆಲೂರ, ಯರಗಲ್-ಕಮಲದಿನ್ನಿ, ಇಂಗಳಗೇರಿ -ಕೂಚಬಾಳ, ಹಡಗಲಿ- ಅಮರಗೋಳ ಸೇರಿದಂತೆ ಹೊಲಮನೆಗಳಿಗೆ ತಿರುಗಾಡುವ ರಸ್ತೆಗಳನ್ನು ಅಭಿವೃದ್ಧಿ ಮಾಡುವ ಬೇಡಿಕೆ ಇದ್ದು ಆದ್ಯತೆ ಮೇರೆಗೆ ಅಭಿವೃದ್ಧಿಗೊಳಿಸಲಾಗುತ್ತದೆ ಎಂದು ಹೇಳಿದರು.

ರಾಜ್ಯದ ಪ್ರಗತಿಪಥ ಯೋಜನೆಯಡಿಯಲ್ಲಿ 30 ಕಿ.ಮೀ ರಸ್ತೆ ಅಭಿವೃದ್ಧಿಗೆ 21.50 ಕೋಟಿ ಹಣ ಕೊಡುವುದಾಗಿ ತಿಳಿಸಿದ್ದು ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.ವಿರೋಧ ಪಕ್ಷದವರ ಸುಳ್ಳು ಹೇಳಿಕೆಗಳನ್ನು ಜನರು ನಂಬಬೇಡಿ ಎಂದರು.

ಕೇಸಾಪೂರದ ಮುಖಂಡ ಎಂ. ಎಸ್. ದೇಶಮುಖ, ಕಾಂಗ್ರೆಸ್ ಮುಖಂಡ, ಪ್ರಥಮ ದರ್ಜೆ ಗುತ್ತಿಗೆದಾರ ಸಿ. ಬಿ. ಅಸ್ಕಿ, ಗ್ಯಾರಂಟಿ ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ತಂಗಡಗಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ, ಮುಖಂಡ ರಾಜುಗೌಡ ಕೊಂಗಿ, ಅಪ್ಪು ನಾಡಗೌಡ, ಹಿರೇಮುರಾಳ ಪಿಕೆಪಿಎಸ್ ಅಧ್ಯಕ್ಷ ಮಲ್ಲನಗೌಡ ಪಾಟೀಲ, ಭೋವಿ ಸಮಾಜದ ಮುಖಂಡ ಶ್ರೀನಿವಾಸ ಗೌಂಡಿ, ಮಹಾಂತಯ್ಯ ಹಿರೇಮಠ, ನಾಗಯ್ಯ ಹಾಲಗಂಗಾಧರಮಠ, ಗುತ್ತಿಗೆದಾರ ಶ್ರೀಶೈಲ ವಿಭೂತಿ ಮೊದಲಾದವರು ಇದ್ದರು.

ಆಳಂದ ಶಾಸಕ ಬಿ. ಆರ್. ಪಾಟೀಲ್ ಅವರು ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಲಂಚ ಕೊಡಬೇಕು ಎಂಬ ಆಡಿಯೋ ಬಹಿರಂಗಗೊಂಡಿರುವ ವಿಚಾರದ ಕುರಿತು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕ ನಾಡಗೌಡ, ನಾನು ಆಡಿಯೋ ಕೇಳಿದ್ದೇನೆ. ಅವರ ಕ್ಷೇತ್ರದಲ್ಲಿ ಯಾವನೋ ಒಬ್ಬ ಮಧ್ಯವರ್ತಿ ದಂಧಾ ಚಲ್ ರಹಾ ಕ್ಯಾ ಎಂದು ಕೇಳಿದ್ದಾನಂತೆ ಅದಕ್ಕೆ ಅವರು ಹೈ ಎಂದಿದ್ದಾರೆ. ಆದರೆ ಇವರು(ಬಿ.ಆರ್.ಪಾಟೀಲರು) ಒನ್‌ವೇ ಮಾತನಾಡಿದ್ದಾರೆ. ಜಮೀರ್ ಅಹ್ಮದ್ ಆಪ್ತ ಸಹಾಯಕರು ಪಾಟೀಲರ ಮಾತಿಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ನಮ್ಮ ಮತಕ್ಷೇತ್ರದಲ್ಲಿ ಸರ್ಕಾರ ಮನೆ ಕೊಟ್ಟರೆ ಬಡವರಿಗೆ ಕೊಟ್ಟಿರುತ್ತೇವೆ, ಇಲ್ಲದಿದ್ದರೆ ಇಲ್ಲ. ಹಣ ಪಡೆದುಕೊಂಡು ಮನೆ ಕೊಟ್ಟರೆ ಅವರು ನಮಗೆ ಓಟು ಹಾಕುತ್ತಾರೆಯೋ? ಎಂದು ಪ್ರಶ್ನಿಸಿದ ಅವರು, ಹಿಂದಿನ ಸರ್ಕಾರದಲ್ಲಿ ಕೊನೆಯ ಘಳಿಗೆಯಲ್ಲಿ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಮಾಡಿದ್ದರಿಂದಲೇ ಇಂದಗೂ ಅನುಮೋದನೆ ಆಗದೇ ಹಾಗೆ ಉಳಿದುಕೊಂಡಿವೆ ಎಂದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ