Hiremurala-Kesapur road development work started

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ 2.20 ಲಕ್ಷ ಕೋಟಿ ರೂ.ಬಿಲ್ ಬಾಕಿ ಇರಿಸಿ ಹೋಗಿದ್ದು ಅದನ್ನು ಪಾವತಿಸುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲಿರಿಸಿ ಹಣಕಾಸಿನ ಅಶಿಸ್ತನ್ನು ತೋರಿಸಿದ್ದಕ್ಕೆ ಎರಡು ವರ್ಷ ಅಭಿವೃದ್ಧಿಗೆ ಅಲ್ಪ ಹಿನ್ನಡೆಯುಂಟಾಗಿದ್ದು ನಿಜ. ಆದರೆ, ಈಗ ಅಭಿವೃದ್ದಿ ಕೆಲಸಗಳಿಗೆ ಸರ್ಕಾರ ಅನುದಾನ ಹಂಚಿಕೆ ಮಾಡುತ್ತಿದೆ ಎಂದು ಶಾಸಕ ಸಿ. ಎಸ್. ನಾಡಗೌಡ ಹೇಳಿದರು.

ತಾಲ್ಲೂಕು ಕೇಸಾಪೂರ ಕ್ರಾಸ್‌ನಲ್ಲಿ ಭಾನುವಾರ ಲೋಕೋಪಯೋಗಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಹಿರೇಮುರಾಳ-ಹುನಕುಂಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸನ್ 2025-26ರ ಆಯವ್ಯಯದಲ್ಲಿ ತಾಲ್ಲೂಕಿನ ನಾಲತವಾಡ-ಆಲೂರ, ಯರಗಲ್-ಕಮಲದಿನ್ನಿ, ಇಂಗಳಗೇರಿ -ಕೂಚಬಾಳ, ಹಡಗಲಿ- ಅಮರಗೋಳ ಸೇರಿದಂತೆ ಹೊಲಮನೆಗಳಿಗೆ ತಿರುಗಾಡುವ ರಸ್ತೆಗಳನ್ನು ಅಭಿವೃದ್ಧಿ ಮಾಡುವ ಬೇಡಿಕೆ ಇದ್ದು ಆದ್ಯತೆ ಮೇರೆಗೆ ಅಭಿವೃದ್ಧಿಗೊಳಿಸಲಾಗುತ್ತದೆ ಎಂದು ಹೇಳಿದರು.

ರಾಜ್ಯದ ಪ್ರಗತಿಪಥ ಯೋಜನೆಯಡಿಯಲ್ಲಿ 30 ಕಿ.ಮೀ ರಸ್ತೆ ಅಭಿವೃದ್ಧಿಗೆ 21.50 ಕೋಟಿ ಹಣ ಕೊಡುವುದಾಗಿ ತಿಳಿಸಿದ್ದು ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.ವಿರೋಧ ಪಕ್ಷದವರ ಸುಳ್ಳು ಹೇಳಿಕೆಗಳನ್ನು ಜನರು ನಂಬಬೇಡಿ ಎಂದರು.

ಕೇಸಾಪೂರದ ಮುಖಂಡ ಎಂ. ಎಸ್. ದೇಶಮುಖ, ಕಾಂಗ್ರೆಸ್ ಮುಖಂಡ, ಪ್ರಥಮ ದರ್ಜೆ ಗುತ್ತಿಗೆದಾರ ಸಿ. ಬಿ. ಅಸ್ಕಿ, ಗ್ಯಾರಂಟಿ ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ತಂಗಡಗಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ, ಮುಖಂಡ ರಾಜುಗೌಡ ಕೊಂಗಿ, ಅಪ್ಪು ನಾಡಗೌಡ, ಹಿರೇಮುರಾಳ ಪಿಕೆಪಿಎಸ್ ಅಧ್ಯಕ್ಷ ಮಲ್ಲನಗೌಡ ಪಾಟೀಲ, ಭೋವಿ ಸಮಾಜದ ಮುಖಂಡ ಶ್ರೀನಿವಾಸ ಗೌಂಡಿ, ಮಹಾಂತಯ್ಯ ಹಿರೇಮಠ, ನಾಗಯ್ಯ ಹಾಲಗಂಗಾಧರಮಠ, ಗುತ್ತಿಗೆದಾರ ಶ್ರೀಶೈಲ ವಿಭೂತಿ ಮೊದಲಾದವರು ಇದ್ದರು.

ಆಳಂದ ಶಾಸಕ ಬಿ. ಆರ್. ಪಾಟೀಲ್ ಅವರು ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಲಂಚ ಕೊಡಬೇಕು ಎಂಬ ಆಡಿಯೋ ಬಹಿರಂಗಗೊಂಡಿರುವ ವಿಚಾರದ ಕುರಿತು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕ ನಾಡಗೌಡ, ನಾನು ಆಡಿಯೋ ಕೇಳಿದ್ದೇನೆ. ಅವರ ಕ್ಷೇತ್ರದಲ್ಲಿ ಯಾವನೋ ಒಬ್ಬ ಮಧ್ಯವರ್ತಿ ದಂಧಾ ಚಲ್ ರಹಾ ಕ್ಯಾ ಎಂದು ಕೇಳಿದ್ದಾನಂತೆ ಅದಕ್ಕೆ ಅವರು ಹೈ ಎಂದಿದ್ದಾರೆ. ಆದರೆ ಇವರು(ಬಿ.ಆರ್.ಪಾಟೀಲರು) ಒನ್‌ವೇ ಮಾತನಾಡಿದ್ದಾರೆ. ಜಮೀರ್ ಅಹ್ಮದ್ ಆಪ್ತ ಸಹಾಯಕರು ಪಾಟೀಲರ ಮಾತಿಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ನಮ್ಮ ಮತಕ್ಷೇತ್ರದಲ್ಲಿ ಸರ್ಕಾರ ಮನೆ ಕೊಟ್ಟರೆ ಬಡವರಿಗೆ ಕೊಟ್ಟಿರುತ್ತೇವೆ, ಇಲ್ಲದಿದ್ದರೆ ಇಲ್ಲ. ಹಣ ಪಡೆದುಕೊಂಡು ಮನೆ ಕೊಟ್ಟರೆ ಅವರು ನಮಗೆ ಓಟು ಹಾಕುತ್ತಾರೆಯೋ? ಎಂದು ಪ್ರಶ್ನಿಸಿದ ಅವರು, ಹಿಂದಿನ ಸರ್ಕಾರದಲ್ಲಿ ಕೊನೆಯ ಘಳಿಗೆಯಲ್ಲಿ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಮಾಡಿದ್ದರಿಂದಲೇ ಇಂದಗೂ ಅನುಮೋದನೆ ಆಗದೇ ಹಾಗೆ ಉಳಿದುಕೊಂಡಿವೆ ಎಂದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ