Hiremurala-Kesapur road development work started

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ 2.20 ಲಕ್ಷ ಕೋಟಿ ರೂ.ಬಿಲ್ ಬಾಕಿ ಇರಿಸಿ ಹೋಗಿದ್ದು ಅದನ್ನು ಪಾವತಿಸುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲಿರಿಸಿ ಹಣಕಾಸಿನ ಅಶಿಸ್ತನ್ನು ತೋರಿಸಿದ್ದಕ್ಕೆ ಎರಡು ವರ್ಷ ಅಭಿವೃದ್ಧಿಗೆ ಅಲ್ಪ ಹಿನ್ನಡೆಯುಂಟಾಗಿದ್ದು ನಿಜ. ಆದರೆ, ಈಗ ಅಭಿವೃದ್ದಿ ಕೆಲಸಗಳಿಗೆ ಸರ್ಕಾರ ಅನುದಾನ ಹಂಚಿಕೆ ಮಾಡುತ್ತಿದೆ ಎಂದು ಶಾಸಕ ಸಿ. ಎಸ್. ನಾಡಗೌಡ ಹೇಳಿದರು.

ತಾಲ್ಲೂಕು ಕೇಸಾಪೂರ ಕ್ರಾಸ್‌ನಲ್ಲಿ ಭಾನುವಾರ ಲೋಕೋಪಯೋಗಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಹಿರೇಮುರಾಳ-ಹುನಕುಂಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸನ್ 2025-26ರ ಆಯವ್ಯಯದಲ್ಲಿ ತಾಲ್ಲೂಕಿನ ನಾಲತವಾಡ-ಆಲೂರ, ಯರಗಲ್-ಕಮಲದಿನ್ನಿ, ಇಂಗಳಗೇರಿ -ಕೂಚಬಾಳ, ಹಡಗಲಿ- ಅಮರಗೋಳ ಸೇರಿದಂತೆ ಹೊಲಮನೆಗಳಿಗೆ ತಿರುಗಾಡುವ ರಸ್ತೆಗಳನ್ನು ಅಭಿವೃದ್ಧಿ ಮಾಡುವ ಬೇಡಿಕೆ ಇದ್ದು ಆದ್ಯತೆ ಮೇರೆಗೆ ಅಭಿವೃದ್ಧಿಗೊಳಿಸಲಾಗುತ್ತದೆ ಎಂದು ಹೇಳಿದರು.

ರಾಜ್ಯದ ಪ್ರಗತಿಪಥ ಯೋಜನೆಯಡಿಯಲ್ಲಿ 30 ಕಿ.ಮೀ ರಸ್ತೆ ಅಭಿವೃದ್ಧಿಗೆ 21.50 ಕೋಟಿ ಹಣ ಕೊಡುವುದಾಗಿ ತಿಳಿಸಿದ್ದು ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.ವಿರೋಧ ಪಕ್ಷದವರ ಸುಳ್ಳು ಹೇಳಿಕೆಗಳನ್ನು ಜನರು ನಂಬಬೇಡಿ ಎಂದರು.

ಕೇಸಾಪೂರದ ಮುಖಂಡ ಎಂ. ಎಸ್. ದೇಶಮುಖ, ಕಾಂಗ್ರೆಸ್ ಮುಖಂಡ, ಪ್ರಥಮ ದರ್ಜೆ ಗುತ್ತಿಗೆದಾರ ಸಿ. ಬಿ. ಅಸ್ಕಿ, ಗ್ಯಾರಂಟಿ ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ತಂಗಡಗಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ, ಮುಖಂಡ ರಾಜುಗೌಡ ಕೊಂಗಿ, ಅಪ್ಪು ನಾಡಗೌಡ, ಹಿರೇಮುರಾಳ ಪಿಕೆಪಿಎಸ್ ಅಧ್ಯಕ್ಷ ಮಲ್ಲನಗೌಡ ಪಾಟೀಲ, ಭೋವಿ ಸಮಾಜದ ಮುಖಂಡ ಶ್ರೀನಿವಾಸ ಗೌಂಡಿ, ಮಹಾಂತಯ್ಯ ಹಿರೇಮಠ, ನಾಗಯ್ಯ ಹಾಲಗಂಗಾಧರಮಠ, ಗುತ್ತಿಗೆದಾರ ಶ್ರೀಶೈಲ ವಿಭೂತಿ ಮೊದಲಾದವರು ಇದ್ದರು.

ಆಳಂದ ಶಾಸಕ ಬಿ. ಆರ್. ಪಾಟೀಲ್ ಅವರು ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಲಂಚ ಕೊಡಬೇಕು ಎಂಬ ಆಡಿಯೋ ಬಹಿರಂಗಗೊಂಡಿರುವ ವಿಚಾರದ ಕುರಿತು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕ ನಾಡಗೌಡ, ನಾನು ಆಡಿಯೋ ಕೇಳಿದ್ದೇನೆ. ಅವರ ಕ್ಷೇತ್ರದಲ್ಲಿ ಯಾವನೋ ಒಬ್ಬ ಮಧ್ಯವರ್ತಿ ದಂಧಾ ಚಲ್ ರಹಾ ಕ್ಯಾ ಎಂದು ಕೇಳಿದ್ದಾನಂತೆ ಅದಕ್ಕೆ ಅವರು ಹೈ ಎಂದಿದ್ದಾರೆ. ಆದರೆ ಇವರು(ಬಿ.ಆರ್.ಪಾಟೀಲರು) ಒನ್‌ವೇ ಮಾತನಾಡಿದ್ದಾರೆ. ಜಮೀರ್ ಅಹ್ಮದ್ ಆಪ್ತ ಸಹಾಯಕರು ಪಾಟೀಲರ ಮಾತಿಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ನಮ್ಮ ಮತಕ್ಷೇತ್ರದಲ್ಲಿ ಸರ್ಕಾರ ಮನೆ ಕೊಟ್ಟರೆ ಬಡವರಿಗೆ ಕೊಟ್ಟಿರುತ್ತೇವೆ, ಇಲ್ಲದಿದ್ದರೆ ಇಲ್ಲ. ಹಣ ಪಡೆದುಕೊಂಡು ಮನೆ ಕೊಟ್ಟರೆ ಅವರು ನಮಗೆ ಓಟು ಹಾಕುತ್ತಾರೆಯೋ? ಎಂದು ಪ್ರಶ್ನಿಸಿದ ಅವರು, ಹಿಂದಿನ ಸರ್ಕಾರದಲ್ಲಿ ಕೊನೆಯ ಘಳಿಗೆಯಲ್ಲಿ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಮಾಡಿದ್ದರಿಂದಲೇ ಇಂದಗೂ ಅನುಮೋದನೆ ಆಗದೇ ಹಾಗೆ ಉಳಿದುಕೊಂಡಿವೆ ಎಂದರು.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ