ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಐತಿಹಾಸಿಕ ನಿರ್ಧಾರ-ಸಿ.ಬಿ.ಅಸ್ಕಿ

ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಐತಿಹಾಸಿಕ ನಿರ್ಧಾರ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ಕನ್ನಡ ರಾಜ್ಯೋತ್ಸವದ ಸಮಯದಲ್ಲಿ ಸುವರ್ಣ ಸಂಭ್ರಮ ಆಚರಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯಮಟ್ಟದ ಸುವರ್ಣ ಸಾಧಕರಿಗೆ ಕೊಡಲ್ಪಡುವ ಪ್ರಶಸ್ತಿ ಮೊತ್ತವನ್ನು 50 ಸಾವಿರದಿಂದ 1 ಲಕ್ಷ ರೂ.ಗೆ ಏರಿಸಿರುವುದು ಸ್ವಾಗತಾರ್ಹ ಕ್ರಮವೆಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ(ಕೊಣ್ಣೂರ) ಹೇಳಿದರು.


ತಾಲ್ಲೂಕಿನ ಕುಂಟೋಜಿ ರಸ್ತೆಯಲ್ಲಿರುವ ಅಸ್ಕಿ ಫೌಂಡೇಶನ್ ಪ್ಲಾಂಟ್‌ದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಿಎಂ ಸಿದ್ಧರಾಮಯ್ಯನವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಈ ಸಲದ ಆಯ್ಕೆ ಪಟ್ಟಿಯಲ್ಲಿ 50 ಮಹಿಳೆಯರು, 50 ಪುರುಷರನ್ನು ಸುವರ್ಣ ರಾಜ್ಯೋತ್ಸವ ಪುರಸ್ಕಾರಕ್ಕೆ ಆಯ್ಕೆ ಮಾಡಿರುವುದು ಹೆಮ್ಮೆಯ ವಿಷಯ.ಇತಿಹಾಸದಲ್ಲಿ ಇದೇ ಮೊದಲು ಒಂದು ರಾಜ್ಯದಲ್ಲಿ ಪ್ರಶಸ್ತಿ ಕೊಡುವ ವಿಚಾರದಲ್ಲಿ ಸರ್ಕಾರವೊಂದು ಪುರುಷ-ಮಹಿಳೆ ಸಮಾನರು ಎಂಬುದನ್ನು ಸಾರಿದೆ ಎಂದು ಅವರು ತಿಳಿಸಿದರು.


ವಿಜಯಪುರ ಜಿಲ್ಲೆಯ ಡಾ.ಎಲ್.ಎಚ್.ಬಿದರಿ, ಜಾನಪದ ಕಲಾವಿದ ಬಸವರಾಜ ಹಾರಿವಾಳ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತಿದ್ದಕ್ಕೆ ಅವರನ್ನು ಅಭಿನಂದಿಸುವುದಾಗಿ ಅವರು ತಿಳಿಸಿದರು.ಈ ಸಂದರ್ಭದಲ್ಲಿ ಅಸ್ಕಿ ಅವರ ಪುತ್ರಿ ಪ್ರಿಯಾ ಅಸ್ಕಿ, ಪ್ರಥಮ ದರ್ಜೆ ಗುತ್ತಿಗೆದಾರ ರಾಮನಗೌಡ ಹೊಸಮನಿ, ರವಿ ಮೇಟಿ , ಮಡಿವಾಳ ನಾಯ್ಕೋಡಿ ದ್ದರು.

Latest News

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿರುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ ಎಂದು ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ರಾಜೀನಾಮೆ ನೀಡಿ ಮನೆಗೆ ಹೋಗುವಂತೆ ಆಗ್ರಹಿಸಿದ್ದಾರೆ. ಪಟ್ಟಣದ ಮಾರುತಿ ನಗರದಲ್ಲಿರುವ ಫಾರ್ಮ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರು ಸನ್ಮಾನಿಸಿದರು. ಕ.ರಾ.ಪ್ರಾ.ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ರಾಜ್ಯ ಉಪಾದ್ಯಕ್ಷ ಗೋಪಾಲ ಹೂಗಾರ, ಸಿಆರ್‌ಪಿ ಜಿ.ಎಚ್.ಚವ್ಹಾಣ,ಸಂತ ಕನಕದಾಸ ಶಾಲೆಯ ಮುಖ್ಯಗುರು ಎಮ್.ಎನ್.ಯರಝರಿ, ಆರ್.ಎಸ್.ವಾಲೀಕಾರ,ಆರ್.ವಾಯ್.ಪಾಟೀಲ, ,ಎಮ್.ಸಿ.ಕಬಾಡೆ, ಶಂಕರ ಭಾರತಿ ಶಾಲೆಯ ಎಮ್.ಎಮ್.ಮಸ್ಕಿ, ಜ್ಞಾನ ಗಂಗೋತ್ರಿ ಶಾಲೆಯ ಎಂ.ಬಿ.ನದಾಫ, ತಂಗಡಗಿಯ ಚರಲಿಂಗೇಶ್ವರ ಪ್ರಾಥಮಿಕ ಶಾಲೆಯ ಶಿಕ್ಷಕ ಬಿ.ಎಲ್.ಮಾದರ , ಸಂಜೀವ ಜಾಲವಾದಿ ಉಪಸ್ಥಿತರಿದ್ದರು.