ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಐತಿಹಾಸಿಕ ನಿರ್ಧಾರ-ಸಿ.ಬಿ.ಅಸ್ಕಿ

ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಐತಿಹಾಸಿಕ ನಿರ್ಧಾರ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ಕನ್ನಡ ರಾಜ್ಯೋತ್ಸವದ ಸಮಯದಲ್ಲಿ ಸುವರ್ಣ ಸಂಭ್ರಮ ಆಚರಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯಮಟ್ಟದ ಸುವರ್ಣ ಸಾಧಕರಿಗೆ ಕೊಡಲ್ಪಡುವ ಪ್ರಶಸ್ತಿ ಮೊತ್ತವನ್ನು 50 ಸಾವಿರದಿಂದ 1 ಲಕ್ಷ ರೂ.ಗೆ ಏರಿಸಿರುವುದು ಸ್ವಾಗತಾರ್ಹ ಕ್ರಮವೆಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ(ಕೊಣ್ಣೂರ) ಹೇಳಿದರು.


ತಾಲ್ಲೂಕಿನ ಕುಂಟೋಜಿ ರಸ್ತೆಯಲ್ಲಿರುವ ಅಸ್ಕಿ ಫೌಂಡೇಶನ್ ಪ್ಲಾಂಟ್‌ದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಿಎಂ ಸಿದ್ಧರಾಮಯ್ಯನವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಈ ಸಲದ ಆಯ್ಕೆ ಪಟ್ಟಿಯಲ್ಲಿ 50 ಮಹಿಳೆಯರು, 50 ಪುರುಷರನ್ನು ಸುವರ್ಣ ರಾಜ್ಯೋತ್ಸವ ಪುರಸ್ಕಾರಕ್ಕೆ ಆಯ್ಕೆ ಮಾಡಿರುವುದು ಹೆಮ್ಮೆಯ ವಿಷಯ.ಇತಿಹಾಸದಲ್ಲಿ ಇದೇ ಮೊದಲು ಒಂದು ರಾಜ್ಯದಲ್ಲಿ ಪ್ರಶಸ್ತಿ ಕೊಡುವ ವಿಚಾರದಲ್ಲಿ ಸರ್ಕಾರವೊಂದು ಪುರುಷ-ಮಹಿಳೆ ಸಮಾನರು ಎಂಬುದನ್ನು ಸಾರಿದೆ ಎಂದು ಅವರು ತಿಳಿಸಿದರು.


ವಿಜಯಪುರ ಜಿಲ್ಲೆಯ ಡಾ.ಎಲ್.ಎಚ್.ಬಿದರಿ, ಜಾನಪದ ಕಲಾವಿದ ಬಸವರಾಜ ಹಾರಿವಾಳ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತಿದ್ದಕ್ಕೆ ಅವರನ್ನು ಅಭಿನಂದಿಸುವುದಾಗಿ ಅವರು ತಿಳಿಸಿದರು.ಈ ಸಂದರ್ಭದಲ್ಲಿ ಅಸ್ಕಿ ಅವರ ಪುತ್ರಿ ಪ್ರಿಯಾ ಅಸ್ಕಿ, ಪ್ರಥಮ ದರ್ಜೆ ಗುತ್ತಿಗೆದಾರ ರಾಮನಗೌಡ ಹೊಸಮನಿ, ರವಿ ಮೇಟಿ , ಮಡಿವಾಳ ನಾಯ್ಕೋಡಿ ದ್ದರು.

Latest News

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

ಮುದ್ದೇಬಿಹಾಳ : ಬರಗಾಲ ಬಿದ್ದಿದೆ.ಹೊಲದಲ್ಲಿ ಬಿತ್ತಿರುವ ಬೆಳೆಗಳು ಒಣಗಿ ಹೋಗುತ್ತಿವೆ.ದನ-ಕರುಗಳಿಗೆ ಕುಡಿಯಲು ನೀರಿಲ್ಲ. ಹೊಲಕ್ಕೆ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು ಜತನದಿಂದ ಕಾಪಾಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಮಹಿಳಾಪರ ಚಿಂತಕಿ ರಾಜೇಶ್ವರಿ ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 80 ನೇ ಸ್ವಾತಂತ್ರ್ಯೋ್ತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಕ್ಕಳಲ್ಲಿ ದೇಶಾಭಿಮಾನ,ದೇಶಪ್ರೇಮ ಭಾವನೆ ಮೂಡಿಸಲು ಶಿಕ್ಷಕರು ,ಪಾಲಕರು ಶ್ರಮಿಸಬೇಕು ಎಂದರು. ಶಾಲೆಯ ಅಧ್ಯಕ್ಷ ಬಸಮ್ಮ ಸಿದರಡ್ಡಿ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಪೊಲೀಸ  ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಎಎಸ್ಐ ಎಂ.ಪಿ.ಹೋಕಳೆ, ಪೊಲೀಸ ಸಿಬ್ಬಂದಿ ಬಸವರಾಜ ಸಜ್ಜನ ಹಾಗೂ ತಂಗಡಗಿ ಗ್ರಾಮದ ವಿಕಾಸ ಕಮಲಾಪೂರ ಹಾಗೂ ಬಂಡಿನಾಥ ಕಮಲಾಪೂರ ,ರವಿ ಹಾಲ್ಯಾಳ ಅವರನ್ನು ಸನ್ಮಾನಿಸಲಾಯಿತು. ಎಎಸ್ಐ ಎಂ.ಪಿ.ಹೋಕಳೆ ಧ್ವಜಾರೋಹಣ ಮಾಡಿದರು.ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ, ಮುಖಂಡರಾದ ರಾಜುಗೌಡ ಕೊಂಗಿ,ಸ್ನೇಹಸಿರಿ ಸೇವಾ ಸಂಘದ ಸಂಚಾಲಕ ಬಸವರಾಜ ನಿಡಗುಂದಿ ಸೇರಿದಂತೆ