ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಐತಿಹಾಸಿಕ ನಿರ್ಧಾರ-ಸಿ.ಬಿ.ಅಸ್ಕಿ

ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಐತಿಹಾಸಿಕ ನಿರ್ಧಾರ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ಕನ್ನಡ ರಾಜ್ಯೋತ್ಸವದ ಸಮಯದಲ್ಲಿ ಸುವರ್ಣ ಸಂಭ್ರಮ ಆಚರಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯಮಟ್ಟದ ಸುವರ್ಣ ಸಾಧಕರಿಗೆ ಕೊಡಲ್ಪಡುವ ಪ್ರಶಸ್ತಿ ಮೊತ್ತವನ್ನು 50 ಸಾವಿರದಿಂದ 1 ಲಕ್ಷ ರೂ.ಗೆ ಏರಿಸಿರುವುದು ಸ್ವಾಗತಾರ್ಹ ಕ್ರಮವೆಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ(ಕೊಣ್ಣೂರ) ಹೇಳಿದರು.


ತಾಲ್ಲೂಕಿನ ಕುಂಟೋಜಿ ರಸ್ತೆಯಲ್ಲಿರುವ ಅಸ್ಕಿ ಫೌಂಡೇಶನ್ ಪ್ಲಾಂಟ್‌ದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಿಎಂ ಸಿದ್ಧರಾಮಯ್ಯನವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಈ ಸಲದ ಆಯ್ಕೆ ಪಟ್ಟಿಯಲ್ಲಿ 50 ಮಹಿಳೆಯರು, 50 ಪುರುಷರನ್ನು ಸುವರ್ಣ ರಾಜ್ಯೋತ್ಸವ ಪುರಸ್ಕಾರಕ್ಕೆ ಆಯ್ಕೆ ಮಾಡಿರುವುದು ಹೆಮ್ಮೆಯ ವಿಷಯ.ಇತಿಹಾಸದಲ್ಲಿ ಇದೇ ಮೊದಲು ಒಂದು ರಾಜ್ಯದಲ್ಲಿ ಪ್ರಶಸ್ತಿ ಕೊಡುವ ವಿಚಾರದಲ್ಲಿ ಸರ್ಕಾರವೊಂದು ಪುರುಷ-ಮಹಿಳೆ ಸಮಾನರು ಎಂಬುದನ್ನು ಸಾರಿದೆ ಎಂದು ಅವರು ತಿಳಿಸಿದರು.


ವಿಜಯಪುರ ಜಿಲ್ಲೆಯ ಡಾ.ಎಲ್.ಎಚ್.ಬಿದರಿ, ಜಾನಪದ ಕಲಾವಿದ ಬಸವರಾಜ ಹಾರಿವಾಳ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತಿದ್ದಕ್ಕೆ ಅವರನ್ನು ಅಭಿನಂದಿಸುವುದಾಗಿ ಅವರು ತಿಳಿಸಿದರು.ಈ ಸಂದರ್ಭದಲ್ಲಿ ಅಸ್ಕಿ ಅವರ ಪುತ್ರಿ ಪ್ರಿಯಾ ಅಸ್ಕಿ, ಪ್ರಥಮ ದರ್ಜೆ ಗುತ್ತಿಗೆದಾರ ರಾಮನಗೌಡ ಹೊಸಮನಿ, ರವಿ ಮೇಟಿ , ಮಡಿವಾಳ ನಾಯ್ಕೋಡಿ ದ್ದರು.

Latest News

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಮುದ್ದೇಬಿಹಾಳ : ನಮ್ಮ ಸಂಸ್ಥೆಯ ಆರಂಭದಿAದ ಇಲ್ಲಿಯವರೆಗೂ ಬಡ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮುದ್ದೇಬಿಹಾಳ : ಹೆತ್ತ ತಂದೆ ತಾಯಿಗೆ, ಬೆಳೆಸಿದ ಗುರುವಿಗೆ ಹೆಸರು ತರುವುದು ಅವರ ಉಸಿರು

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಏ.4ರಂದು ಆಕ್ಸಫರ್ಡ್

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ ಏ.10 ರಿಂದ 14ರವರೆಗೆ ಮೇ ಸಾಹಿತ್ಯ ಮೇಳ ಬಳಗದ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ವಿಜಯಪುರ : 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟ ಹಾಗೂ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳಲ್ಲಿ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈಗಿರುವ ಸಮಯದ ಬದಲಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೆಳಿಗ್ಗೆ 8 ರಿಂದ ಮದ್ಯಾಹ್ನ 1.30ಕ್ಕೆ ಬದಲಾಯಿಸಿ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು ಬೆಂಬಲಿಸುವ ಕಾರ್ಯ ಸಮಾಜ,ಸಂಘಟನೆಗಳು ಮಾಡಬೇಕು ಎಂದು ಸಮಾಜ ಸೇವಕ,ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ವಿದ್ಯಾಸ್ಪೂರ್ತಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಾಚೀನ ಕಾಲದ ಗುರುಕುಲ ಪದ್ಧತಿಯಲ್ಲಿ ಖಾಸಗಿ ಶಾಲೆಗಳು ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ವಸತಿ ಕಲ್ಪಿಸಿ ಶಿಕ್ಷಣ ಕೊಡುವ ಕಾರ್ಯ ಮಾಡುತ್ತಿವೆ.ನೌಕರರ ಮಕ್ಕಳು,ಸ್ಥಿತಿವಂತರ