ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಐತಿಹಾಸಿಕ ನಿರ್ಧಾರ-ಸಿ.ಬಿ.ಅಸ್ಕಿ

ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಐತಿಹಾಸಿಕ ನಿರ್ಧಾರ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ಕನ್ನಡ ರಾಜ್ಯೋತ್ಸವದ ಸಮಯದಲ್ಲಿ ಸುವರ್ಣ ಸಂಭ್ರಮ ಆಚರಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯಮಟ್ಟದ ಸುವರ್ಣ ಸಾಧಕರಿಗೆ ಕೊಡಲ್ಪಡುವ ಪ್ರಶಸ್ತಿ ಮೊತ್ತವನ್ನು 50 ಸಾವಿರದಿಂದ 1 ಲಕ್ಷ ರೂ.ಗೆ ಏರಿಸಿರುವುದು ಸ್ವಾಗತಾರ್ಹ ಕ್ರಮವೆಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ(ಕೊಣ್ಣೂರ) ಹೇಳಿದರು.


ತಾಲ್ಲೂಕಿನ ಕುಂಟೋಜಿ ರಸ್ತೆಯಲ್ಲಿರುವ ಅಸ್ಕಿ ಫೌಂಡೇಶನ್ ಪ್ಲಾಂಟ್‌ದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಿಎಂ ಸಿದ್ಧರಾಮಯ್ಯನವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಈ ಸಲದ ಆಯ್ಕೆ ಪಟ್ಟಿಯಲ್ಲಿ 50 ಮಹಿಳೆಯರು, 50 ಪುರುಷರನ್ನು ಸುವರ್ಣ ರಾಜ್ಯೋತ್ಸವ ಪುರಸ್ಕಾರಕ್ಕೆ ಆಯ್ಕೆ ಮಾಡಿರುವುದು ಹೆಮ್ಮೆಯ ವಿಷಯ.ಇತಿಹಾಸದಲ್ಲಿ ಇದೇ ಮೊದಲು ಒಂದು ರಾಜ್ಯದಲ್ಲಿ ಪ್ರಶಸ್ತಿ ಕೊಡುವ ವಿಚಾರದಲ್ಲಿ ಸರ್ಕಾರವೊಂದು ಪುರುಷ-ಮಹಿಳೆ ಸಮಾನರು ಎಂಬುದನ್ನು ಸಾರಿದೆ ಎಂದು ಅವರು ತಿಳಿಸಿದರು.


ವಿಜಯಪುರ ಜಿಲ್ಲೆಯ ಡಾ.ಎಲ್.ಎಚ್.ಬಿದರಿ, ಜಾನಪದ ಕಲಾವಿದ ಬಸವರಾಜ ಹಾರಿವಾಳ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತಿದ್ದಕ್ಕೆ ಅವರನ್ನು ಅಭಿನಂದಿಸುವುದಾಗಿ ಅವರು ತಿಳಿಸಿದರು.ಈ ಸಂದರ್ಭದಲ್ಲಿ ಅಸ್ಕಿ ಅವರ ಪುತ್ರಿ ಪ್ರಿಯಾ ಅಸ್ಕಿ, ಪ್ರಥಮ ದರ್ಜೆ ಗುತ್ತಿಗೆದಾರ ರಾಮನಗೌಡ ಹೊಸಮನಿ, ರವಿ ಮೇಟಿ , ಮಡಿವಾಳ ನಾಯ್ಕೋಡಿ ದ್ದರು.

Latest News

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ ಸ್ಥಾಪಿಸುವ ಯತ್ನ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ,ಕಮೀಟಿಗೆ ಸ್ಪರ್ಧಿಸಿರುವ ಅಬ್ದುಲಗಫೂರ ಮಕಾನದಾರ ಹೇಳಿದರು. ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1936ರಲ್ಲಿ ಇಲ್ಲಿನ ಅಂಜುಮನ್ ಸಂಸ್ಥೆಯನ್ನು ಹಿರಿಯರು ಹುಟ್ಟು ಹಾಕಿದ್ದಾರೆ.ಅಂಜುಮನ್ ಸಂಸ್ಥೆಯ ಬೆಳವಣಿಗೆಯಲ್ಲಿ ಹಿಂದೂ ಬಾಂಧವರ ಸಹಕಾರವೂ ಇತ್ತು.ಆದರೆ ಕಾರಣಾಂತರಗಳಿAದ ಸಂಸ್ಥೆಯ ಅಭಿವೃದ್ಧಿ ಕುಂಠಿತಗoಡಿದೆ. ಹೊಸಬರು,ಒಳ್ಳೆಯವರ ಆಯ್ಕೆಗೆ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ ತಾಲ್ಲೂಕಿನ ಕುಂಟೋಜಿ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ರೈತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೇವಲ ಕೇಂದ್ರದತ್ತ ಬೆರಳು ಮಾಡದೇ